AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಚೀನಾ ಲೋನ್​ ಕಂಪನಿಗಳಿಂದ ವಂಚನೆ: 7 ಸಂಸ್ಥೆ, ಐವರ ವಿರುದ್ಧ ತನಿಖಾ ವರದಿ ಸಲ್ಲಿಸಿದ ಇಡಿ

ಚೀನಾ ಲೋನ್​ ಕಂಪನಿಗಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಸಂಸ್ಥೆ ಮತ್ತು ಐವರ ವಿರುದ್ಧ ಇಡಿ ಅಧಿಕಾರಿಗಳು PMLA ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ.

Bengaluru: ಚೀನಾ ಲೋನ್​ ಕಂಪನಿಗಳಿಂದ ವಂಚನೆ: 7 ಸಂಸ್ಥೆ, ಐವರ ವಿರುದ್ಧ ತನಿಖಾ ವರದಿ ಸಲ್ಲಿಸಿದ ಇಡಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Mar 17, 2023 | 5:47 PM

Share

ಬೆಂಗಳೂರು: ನಗರದಲ್ಲಿ ಚೀನಾ ಲೋನ್​ ಕಂಪನಿಗಳಿಂದ (China Loan Company) ವಂಚನೆ (Fraud) ಪ್ರಕರಣಕ್ಕೆ ಸಂಬಂಧಿಸಿದಂತೆ 7 ಸಂಸ್ಥೆ ಮತ್ತು ಐವರ ವಿರುದ್ಧ ಇಡಿ ಅಧಿಕಾರಿಗಳು PMLA ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಮ್ಯಾಡ್ ಎಲಿಫೆಂಟ್ ನೆಟ್‌ವರ್ಕ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಬ್ಯಾರಿಯೋನಿಕ್ಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಮತ್ತು ಕ್ಲೌಡ್ ಅಟ್ಲಾಸ್ ಫ್ಯೂಚರ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 7 ಚೈನೀಸ್ ಲೋನ್ ಆ್ಯಪ್ ಸಂಸ್ಥೆಗಳ ವಿರುದ್ಧ ವರದಿ ಸಲ್ಲಿಕೆ ಆಗಿದೆ. ಇದೇ ಪ್ರಕರಣದಲ್ಲಿ ಇಡಿ 77.25 ಕೋಟಿ ರೂ. ಮುಟ್ಟುಗೋಲು ಹಾಕಿಕೊಂಡಿದೆ. ಇನ್ನು ವಂಚನೆ ಸಂಬಂಧ ಸಿಐಡಿ ಅಧಿಕಾರಿಗಳು FIR ದಾಖಲಿಸಿಕೊಂಡಿದ್ದಾರೆ. ಕಂಪನಿಗಳು ಗ್ರಾಹಕರಿಗೆ ಸಾಲ ನೀಡಿ ನಂತರ ಕಿರುಕುಳ ನೀಡುತ್ತಿದ್ದರು. ಗ್ರಾಹಕರಿಂದ ಬಂದ ದೂರುಗಳ ಆಧಾರದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು 100 ಕೋಟಿ ರೂಪಾಯಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಪೈಕಿ ಸಿಸಿಬಿಯಿಂದ ₹ 60 ಕೋಟಿ ಹಾಗೂ ನಗರದ ಸೈಬರ್ ಪೊಲೀಸರು ₹ 40 ಕೋಟಿ ಮುಟ್ಟುಗೋಲು ಹಾಕಿದ್ದಾರೆ. ಸುಲಭವಾಗಿ ಸಾಲ ಸಿಗಲಿದೆ ಎಂದು ಮನವೊಲಿಸಿ ಜನರಿಗೆ ಸಾಲ ಕೊಡುತ್ತಿದ್ದ ಈ ಆ್ಯಪ್​ಗಳು ನಂತರ ಅವರ ಖಾಸಗಿ ಫೋಟೊಗಳನ್ನು ವೈರಲ್ ಮಾಡುವ ಬೆದರಿಕೆ ಹಾಕಿ ಸುಲಿಗೆ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದವು.

ಇದನ್ನೂ ಓದಿ: Bengaluru-Mysuru Expressway: ವಿಪಕ್ಷಗಳ ಆರೋಪದ ನಡುವೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ

ಈ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದ ನಂತರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಮುಟ್ಟುಗೋಲು ಹಾಕಿಕೊಂಡಿರುವ ಹಣದ ಬಗ್ಗೆ ನಗರ ಪೊಲೀಸರು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿ ನೀಡಿದ್ದಾರೆ. ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಬಗ್ಗೆ ಇಡಿ ತನಿಖೆ ಆರಂಭಿಸಿದೆ.

ಮತ್ತೊಂದು ಚೀನಿ ಕಂಪನಿಯ ಮೇಲೆ ಇಡಿ ದಾಳಿ

ಉದ್ಯೋಗದ ಭರವಸೆ ಕೊಟ್ಟು ಯುವಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಚೀನಾ ಮೂಲದ ‘ಕೀಪ್​ಶೇರ್’ ಆ್ಯಪ್​ಗೆ ಸೇರಿದ 12 ಕೇಂದ್ರಗಳ ಮೇಲೆ ಇಡಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ₹ 5.88 ಕೋಟಿ ನಗದು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಆ್ಯಪ್​ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಇದು ಬೇಲಿಯೇ ಎದ್ದು ಹೋಲ ಮೇಯ್ದ ಕತೆ: ಜಪ್ತಿ ಮಾಡಿದ ಸಾರಾಯಿಯನ್ನೇ ಎಗರಿಸಿದ ಖತರ್ನಾಕ್​ ಅಬಕಾರಿ ಅಧಿಕಾರಿಗಳು, ಸಿಬ್ಬಂದಿ

ಪಾರ್ಟ್​ಟೈಮ್ ಕೆಲಸ ಕೊಡುವುದಾಗಿ ಯುವಕರನ್ನು ಆಕರ್ಷಿಸುತ್ತಿದ್ದ ‘ಕೀಪ್​ಶೇರ್’ ಆ್ಯಪ್, ಸಾಕಷ್ಟು ಜನರನ್ನು ವಂಚಿಸಿತ್ತು. ಚೀನಾ ಮೂಲದ ವ್ಯಕ್ತಿಗಳು ಭಾರತೀಯರನ್ನೇ ನಿರ್ದೇಶಕರನ್ನಾಗಿಸಿ ಭಾರತದ ವಿವಿಧೆಡೆ ಒಂದಿಷ್ಟು ಕಚೇರಿಗಳನ್ನು ತೆರೆದಿದ್ದರು. ಈ ಕಚೇರಿಗಳ ಟೆಲಿಕಾಲರ್​ಗಳು ಯುವಕರಿಗೆ ಗಾಳ ಹಾಕಿ ಅವರ ಮಾಹಿತಿ ಸಂಗ್ರಹಿಸಿ, ಉದ್ಯೋಗಕ್ಕಾಗಿ ಹಣದ ಬೇಡಿಕೆ ಇಡುತ್ತಿದ್ದರು. ಸಾಕಷ್ಟು ಮೊತ್ತ ಸಂಗ್ರಹವಾಗುತ್ತಿದ್ದಂತೆ ಕಂಪನಿಯೇ ನಾಪತ್ತೆಯಾಗುತ್ತಿತ್ತು. ಇದರ ಜೊತೆಗೆ ಹೂಡಿಕೆ ಆ್ಯಪ್​ಗಳ ಹೆಸರಿನಲ್ಲಿಯೂ ಸಾರ್ವಜನಿಕರಿಂದ ದಾಖಲೆಗಳು ಹಾಗೂ ಹಣ ಸಂಗ್ರಹಿಸಿರುವ ಬಗ್ಗೆಯೂ ತನಿಖೆ ವೇಳೆ ತಿಳಿದುಬಂದಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:46 pm, Fri, 17 March 23

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ