AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಅಕ್ಟೋಬರ್​ ವಿದ್ಯುತ್ ಬಿಲ್​ನಲ್ಲಿ ಏರುಪೇರಾಗೋ ಸಾಧ್ಯತೆ! ಕಾರಣ ಇಲ್ಲಿದೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ಈ ತಿಂಗಳ ಬಿಲ್ ವಿತರಣೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಿದ್ದು, ಗ್ರಾಹಕರಿಗೆ ಈ ಬಗ್ಗೆ ಮಾಹಿತಿ ನೀಡಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇಂಧನ ಇಲಾಖೆ ತನ್ನ ಐಟಿ ವಿಭಾಗದ ಪ್ರಮುಖ ಸಾಫ್ಟ್‌ವೇರ್ ಅಪ್‌ಗ್ರೇಡ್ ಕಾರ್ಯಕ್ಕೆ ಮುಂದಾಗಿದೆ. ಹಾಗಾದರೆ ಬಿಲ್ ವಿತರಣೆಯಲ್ಲಿ ಆಗುತ್ತಿರುವ ಬದಲಾವಣೆ ಏನು, ಗ್ರಾಹಕರು ತಿಳಿದುಕೊಳ್ಳಬೇಕಿರುವುದು ಏನು? ಇಲ್ಲಿದೆ ವಿವರ.

ಬೆಂಗಳೂರಿಗರ ಅಕ್ಟೋಬರ್​ ವಿದ್ಯುತ್ ಬಿಲ್​ನಲ್ಲಿ ಏರುಪೇರಾಗೋ ಸಾಧ್ಯತೆ! ಕಾರಣ ಇಲ್ಲಿದೆ
ಬೆಂಗಳೂರಿಗರ ಅಕ್ಟೋಬರ್​ ವಿದ್ಯುತ್ ಬಿಲ್​ನಲ್ಲಿ ಏರುಪೇರಾಗೋ ಸಾಧ್ಯತೆ! ಕಾರಣ ಇಲ್ಲಿದೆ
ಗಣಪತಿ ಶರ್ಮಾ
|

Updated on: Oct 04, 2025 | 7:24 AM

Share

ಬೆಂಗಳೂರು, ಅಕ್ಟೋಬರ್ 4: ಗ್ರೇಟರ್ ಬೆಂಗಳೂರು (GBA) ವ್ಯಾಪ್ತಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವಿದ್ಯುತ್ ಬಳಕೆ ಮಾಡಿದ ಗ್ರಾಹಕರಿಗೆ ವಿತರಣೆಯಾಗುವ ಬಿಲ್​ನಲ್ಲಿ ಕೊಂಚ ಏರುಪೇರು ಆಗಬಹುದು. ಏಕೆಂದರೆ, ಇಂಧನ ಇಲಾಖೆ ಅಡಿಯ ಬೆಸ್ಕಾಂ (BESCOM) ತನ್ನ ಐಟಿ ವಿಭಾಗದ ಪ್ರಮುಖ ಸಾಫ್ಟ್‌ವೇರ್ ಅಪ್‌ಗ್ರೇಡ್ ಕಾರ್ಯಕ್ಕೆ ಮುಂದಾಗಿದ್ದು, ಮೀಟರ್ ರೀಡರ್‌ಗಳು ವಾಸ್ತವ ಮಾಸಿಕ ಬಳಕೆಯ ಆಧಾರದ ಮೇಲೆ ಬಿಲ್‌ಗಳನ್ನು ಲೆಕ್ಕ ಹಾಕಲು ಸದ್ಯ ಸಾಧ್ಯವಾಗುತ್ತಿಲ್ಲ. ಅದರ ಪರಿಣಾಮವಾಗಿ, ಸೆಪ್ಟೆಂಬರ್ ತಿಂಗಳಲ್ಲಿ ಬಳಕೆಯಾದ ವಿದ್ಯುತ್ ಬಿಲ್‌ಗಳು ಅಕ್ಟೋಬರ್ ಮೊದಲಾರ್ಧದಲ್ಲಿ ಹಿಂದಿನ ಮೂರು ತಿಂಗಳ ಸರಾಸರಿ ಬಳಕೆಯ ಆಧಾರದ ಮೇಲೆ ಸಿದ್ಧಪಡಿಸಲಾಗಿದೆ. ಈ ಲೆಕ್ಕಾಚಾರವು ಜೂನ್ 2025 ರಿಂದ ಆರಂಭವಾಗಲಿದೆ.

ಅಕ್ಟೋಬರ್ 1 ರಿಂದ 15 ರವರೆಗೆ ಈ ಪ್ರದೇಶಗಳಲ್ಲಿ ಮೀಟರ್ ರೀಡರ್‌ಗಳು ಭೌತಿಕವಾಗಿ ರೀಡಿಂಗ್‌ಗಳನ್ನು ಪಡೆಯುವುದಿಲ್ಲ. ಆದರೆ, ಇದು ತಾತ್ಕಾಲಿಕ ಕ್ರಮ ಮಾತ್ರ. ಸಿಸ್ಟಮ್ ಅಪ್‌ಗ್ರೇಡ್‌ಗೂ ನಡುವೆಯೂ ಬಿಲ್ ವಿತರಣೆಯು ನಿರಂತರವಾಗಿರಲಿದೆ ಎಂದು ಅಧಿಕೃತ ಹೇಳಿಕೆ ಸ್ಪಷ್ಟಪಡಿಸಿದೆ. ಗ್ರಾಹಕರು ತಮ್ಮ ಬಿಲ್‌ಗಳನ್ನು ಬೆಸ್ಕಾಂ ಮಿತ್ರ ಆ್ಯಪ್, ಯುಪಿಐ ಆ್ಯಪ್‌ಗಳು ಅಥವಾ ಹತ್ತಿರದ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಪಾವತಿ ಮಾಡಬಹುದು ಅಂತ ಬೆಸ್ಕಾಂ ಸ್ಪಷ್ಟಪಡಿಸಿದೆ.

ಗೃಹ ಜ್ಯೋತಿ ಫಲಾನುಭವಿಗಳಿಗೆ ಆತಂಕ ಬೇಡ: ಬೆಸ್ಕಾಂ

ಈ ಬದಲಾವಣೆಗಳು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಮಾತ್ರ ಅನ್ವಯಿಸುತ್ತವೆ. ಇತರೆ ನಗರ ಪ್ರದೇಶಗಳ ಗ್ರಾಹಕರು ತಮ್ಮ ನಿಯಮಿತ ಬಿಲ್‌ಗಳನ್ನು ಬಂದಂತೆ ಪಡೆಯುತ್ತಾರೆ ಅಂತ ಹೇಳಲಾಗಿದೆ. ಅಲ್ಲದೆ ಗೃಹಜ್ಯೋತಿ ಫಲಾನುಭವಿಗಳು ಸೇರಿ ಯಾವುದೇ ವರ್ಗದ ಗ್ರಾಹಕರಿಗೂ ಬದಲಾವಣೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ತಿಳಿಸಲಾಗಿದ್ದು, ಸಾಧ್ಯವಾದಷ್ಟು ವಾಸ್ತವಿಕ ಮೀಟರ್ ರೀಡಿಂಗ್ ಅಂದರೆ, ಸೆಪ್ಟೆಂಬರ್ ತಿಂಗಳ ಮೀಟರ್ ರೀಡಿಂಗ್ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು