AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ನಿಮಿಷಗಳಲ್ಲಿ 14 ಕಿ.ಮೀ ತಲುಪಿದೆ, ದೀಪಾವಳಿಯಿಂದ ಬೆಂಗಳೂರು ಖಾಲಿ ಖಾಲಿ ಎಂದ ಟೆಕ್ಕಿ

ದೀಪಾವಳಿ ರಜೆ ಕಾರಣ ಬೆಂಗಳೂರು ಸಂಪೂರ್ಣ ಖಾಲಿಯಾಗಿದೆ, ಯಾವುದೇ ಟ್ರಾಫಿಕ್ ಇಲ್ಲ. ಇದರ ಬಗ್ಗೆ ಬೆಂಗಳೂರಿನ ಟೆಕ್ಕಿಯೊಬ್ಬರು ಆಟೋದಲ್ಲಿ ಪ್ರಯಾಣಿಸುತ್ತಾ ಮಾಡಿದ ವಿಡಿಯೋ ವೈರಲ್ ಆಗಿದೆ. 14 ಕಿ.ಮೀ ದೂರವನ್ನು ಕೇವಲ 20 ನಿಮಿಷಗಳಲ್ಲಿ ತಲುಪಿದ್ದಾಗಿ ಅವರು ಹಂಚಿಕೊಂಡಿದ್ದಾರೆ. ನಗರ ನಿವಾಸಿಗಳು ಈ ಶಾಂತ ವಾತಾವರಣಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ, ಕೆಲವರು ಸಂತಸಗೊಂಡರೆ, ಇನ್ನು ಕೆಲವರು ಹಳೆಯ ಬೆಂಗಳೂರನ್ನು ನೆನಪಿಸಿಕೊಂಡಿದ್ದಾರೆ.

20 ನಿಮಿಷಗಳಲ್ಲಿ 14 ಕಿ.ಮೀ ತಲುಪಿದೆ, ದೀಪಾವಳಿಯಿಂದ ಬೆಂಗಳೂರು ಖಾಲಿ ಖಾಲಿ ಎಂದ ಟೆಕ್ಕಿ
ವೈರಲ್​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Oct 20, 2025 | 10:05 AM

Share

ಬೆಂಗಳೂರು, ಅ.20: ಬೆಂಗಳೂರು (Bengaluru) ಖಾಲಿ ಖಾಲಿ, ಟ್ರಾಫಿಕ್​​​, ಜನ, ವಾಹನಗಳಿಂದ ತುಂಬಿದ್ದ ಬೆಂಗಳೂರು ಇಂದು ತುಂಬಾ ಶಾಂತವಾಗಿದೆ. ಇದಕ್ಕೆಲ್ಲ ಕಾರಣ ದೀಪಾವಳಿ, (Diwali Peace) ಎಲ್ಲರೂ ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿಗೆ ಹೋಗಿದ್ದಾರೆ. ಇನ್ನು ಸಾಲು ಸಾಲು ರಜೆ ಇರುವುದರಿಂದ ಮನೆಯಲ್ಲೇ ದೀಪಾವಳಿ ಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಬೆಂಗಳೂರು ಪ್ರಶಾಂತವಾಗಿದೆ. ಈ ಬಗ್ಗೆ ಇನ್ಸ್ಟಾಗ್ರಾಮ್​​ನಲ್ಲಿ ಬೆಂಗಳೂರಿನ ಟೆಕ್ಕಿ ಒಬ್ಬರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿರುವಾಗ ಈ ವಿಡಿಯೋವನ್ನು ಮಾಡಿದ್ದಾರೆ. ದೀಪಾವಳಿಯ ಕಾರಣ ಇಡೀ ಬೆಂಗಳೂರು ಖಾಲಿ ಖಾಲಿಯಾಗಿದೆ. ಈ ಕಾರಣದಿಂದ ಕೇವಲ 20 ನಿಮಿಷಗಳಲ್ಲಿ 14 ಕಿ.ಮೀ ತಲುಪಿದ್ದೇನೆ ಎಂದು ಹಂಚಿಕೊಂಡಿದ್ದಾರೆ.

ಇನ್ನು ಈ ಕ್ಲಿಪ್​​ ನೋಡಿ ಹಲವು ನಗರ ವಾಸಿಗಳು ಖುಷಿ ಪಟ್ಟಿದ್ದಾರೆ. ಬೆಂಗಳೂರಿನ ಬೀದಿಗಳು ಎಷ್ಟು ಶಾಂತವಾಗಿದೆ. ಜನದಟ್ಟಣೆಯಿಂದ ಕೂಡಿದ ರಸ್ತೆಗಳನ್ನು ಖಾಲಿ ಇರುವುದನ್ನು ನೋಡಿ ಜನರು ಆಶ್ಚರ್ಯಚಕಿತರಾಗಿದ್ದಾರೆ. ಬೆಂಗಳೂರು ಪ್ರತಿದಿನ ಹೀಗೆಯೇ ಇದ್ದರೆ ಎಷ್ಟು ಚಂದ ಎಂದು ಹೇಳಿದ್ದಾರೆ. ಈ ವಿಡಿಯೋ 53 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಬೆಂಗಳೂರಿನಲ್ಲಿ ಕೊರೋನಾ ನಂತರ ಇದೇ ಮೊದಲು ಅನ್ನಿಸುತ್ತದೆ, ಬೆಂಗಳೂರು ಇಷ್ಟ ಶಾಂತಾವಗಿರುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೀಪಾವಳಿ ಸಂಭ್ರಮ: ಹೂವು, ಹಣ್ಣು ಖರೀದಿಗೆ ಕೆ.ಆರ್. ಮಾರ್ಕೆಟ್​ನಲ್ಲಿ ಮುಗಿಬಿದ್ದ ಜನ; ಟ್ರಾಫಿಕ್​ ಜಾಮ್​

ವೈರಲ್ ಪೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by Genextechie (@genextechie)

ಈ ವಿಡಿಯೋ ನೋಡಿ ಹಲವು ಸೋಶಿಯಲ್​​ ಮೀಡಿಯಾ ಬಳಕೆದಾರರೂ ಕಮೆಂಟ್​​ ಮಾಡಿದ್ದಾರೆ. ನಮ ಬೆಂಗಳೂರು ಎಂದರೆ ಇದೇ ಎಂದು ಒಬ್ಬ ಬಳಕೆದಾರ ಕಮೆಂಟ್​ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ, ಇಲ್ಲ, ನಾನು ಈಗಲ್ಲೂ ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದೇನೆ, ನಾವು ಏನಾದರೂ ಇನ್ನೊಂದು ಬೆಂಗಳೂರಿನಲ್ಲಿ ಇದ್ದೇವೆ ಎಂದು ಅನ್ನಿಸುತ್ತಿದೆ. ಇನ್ನೊಬ್ಬ ಬಳಕೆದಾರ ಮೆಟ್ರೋದಲ್ಲೂ ಜನ ಇಲ್ಲ, ತುಂಬಾ ನಿರಾಳವಾಗಿತ್ತು ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ಇದು ನಿಜವಾದ ಬೆಂಗಳೂರು ಅಲ್ಲ, ನಮಗೆ ಮೊದಲು ಬೆಂಗಳೂರು ಬೇಕು ಎಂದು ಹೇಳಿದ್ದಾರೆ. ಬೇರೆ ಬೇರೆ ರಾಜ್ಯದಿಂದ ಬೆಂಗಳೂರಿಗೆ ಬಂದವರು ಊರಿಗೆ ಹೋಗಿದ್ದಾರೆ. ಅವರು ಶ್ವಾಶತವಾಗಿ ಅಲ್ಲೇ ಇರಲಿ, ಈ ಬೆಂಗಳೂರು ತುಂಬಾ ಶಾಂತವಾಗಿದೆ ಎಂದು ತಮಾಷೆಯಾಗಿ ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಬಿಜೆಪಿಗೆ ರಾಜೀನಾಮೆ ನೀಡಿ ಬಂದ ಅಣ್ಣಾಮಲೈಗೆ ಭರ್ಜರಿ ಸ್ವಾಗತ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ