AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ ಸುಪಾರಿ ನೀಡಿದ ಆರೋಪ

ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ 10 ಲಕ್ಷಕ್ಕೆ ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಿ ಪತಿ ಪ್ರವೀಣ್ ಬೆಂಗಳೂರಿನ ಆರ್.ಟಿ.ನಗರ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಬೆಂಗಳೂರು: ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ ಸುಪಾರಿ ನೀಡಿದ ಆರೋಪ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 01, 2023 | 6:57 AM

Share

ಬೆಂಗಳೂರು: ವಿಚ್ಛೇದಿತ ಪತಿಯನ್ನ ಅಪಹರಿಸಿ ಹತ್ಯೆ ಮಾಡಲು ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಿ ಮಾಜಿ ಪತ್ನಿಯ ಮೇಲೆ ಬೆಂಗಳೂರಿನ ಆರ್.ಟಿ.ನಗರ ಠಾಣೆಗೆ ವಿಚ್ಛೇದಿತ ಪತಿ ಪ್ರವೀಣ್​ ದೂರು ನೀಡಿರುವ ಘಟನೆ ನಡೆದಿದೆ. ಪ್ರವೀಣ್​ ಮಾಜಿ ಪತ್ನಿ ಸಂಧ್ಯಾ, ತಂದೆ ಸೇರಿದಂತೆ 8 ಜನರ ವಿರುದ್ಧ FIR ಹಾಕಲಾಗಿದ್ದು, ಮನ್ಸೂರ್ ಅಲಿಯಾಸ್ ದೂನ್​ ಎಂಬಾತನಿಗೆ10 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಒಂದು ದಿನ ಕಾರಿನಲ್ಲಿ ಬೆಂಗಳೂರು, ಚನ್ನಪಟ್ಟಣದಲ್ಲಿ ಸುತ್ತಾಡಿಸಿ ಐದಾರು ಜನರು ಸೇರಿ ಪ್ರವೀಣ್​ ಮೇಲೆ ಹಲ್ಲೆ ಮಾಡಿದ್ದು, ನಿಮ್ಮ ಮಾಜಿ ಪತ್ನಿ 10 ಲಕ್ಷಕ್ಕೆ ನಿನಗೆ ಸುಪಾರಿ ನೀಡಿದ್ದಾರೆ, ನೀನು 15 ಲಕ್ಷ ನೀಡಿದರೆ ನಿಮ್ಮನ್ನು ಬಿಡುತ್ತೇವೆಂದು ಹೇಳಿ 2.75 ಲಕ್ಷ ರೂ ಪಡೆದು ಬಿಡುಗಡೆ ಮಾಡಿದ್ದಾರೆ ಎಂದು ಪ್ರವೀಣ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಅಪ್ರಾಪ್ತೆಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರವೆಸಗಿದ್ದ ಪ್ರಕರಣ; 10 ವರ್ಷ ಶಿಕ್ಷೆ ನೀಡಿದ ಕೋರ್ಟ್​

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರವೆಸಗಿದ ಇಬ್ಬರು ಹಾಗೂ ಸಹಕರಿಸಿದ ಐದು ಮಂದಿ ಸೇರಿ ಒಟ್ಟು 7 ಯುವಕರಿಗೆ ಪೋಕ್ಸೋ ಕಾಯ್ದೆಯಡಿ ಚಾಮರಾಜನಗರದಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನ ನೀಡಿದೆ. ಜೊತೆಗೆ ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ಪರಿಹಾರ ನೀಡುವಂತೆ ಆದೇಶ ಹೊರಡಿಸಿದೆ.

ಚಾಮರಾಜನಗರದ ಕ್ರಿಶ್ಚಿಯನ್ ಕಾಲೋನಿಯ ಮಿನಾಜ್ ಖಾನ್, ಕೆ.ಪಿ.ಮೊಹಲ್ಲಾದ ಸಲ್ಮಾನ್ ಖಾನ್, ಮಂಡ್ಯದ ಶಾರುಖ್ ಖಾನ್​, ಮೊಹಮ್ಮದ್ ಅಮೀರ್, ಮೈಸೂರಿನ ಶಾಂತಿನಗರದ ಸೈಯದ್ ಉಮರ್​ ಚಾಮರಾಜನಗರದ ಕ್ರಿಶ್ಚಿಯನ್ ಕಾಲೋನಿಯ ಮಸ್ತಾಖಿಮ್​ ಖಾನ್, ಬೆಂಗಳೂರಿನ ಬೊಮ್ಮನಹಳ್ಳಿಯ ವಹೀದ್ ಅಹ್ಮದ್ ಸೇರಿ ಏಳು ಜನ ಅಪ್ರಾಪ್ತೆ ಜೊತೆ ಸರಸದ ಫೋಟೋ ತೆಗೆದು ಬ್ಲಾಕ್​ಮೇಲ್ ಮಾಡಿದ್ದರು. ಬಳಿಕ ಬಾಲಕಿಯನ್ನ ಅಪಹರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದ ದುಷ್ಕರ್ಮಿಗಳು ಇದೀಗ ಜೈಲು ಸೇರಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!