AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ ಸುಪಾರಿ ನೀಡಿದ ಆರೋಪ

ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ 10 ಲಕ್ಷಕ್ಕೆ ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಿ ಪತಿ ಪ್ರವೀಣ್ ಬೆಂಗಳೂರಿನ ಆರ್.ಟಿ.ನಗರ ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ.

ಬೆಂಗಳೂರು: ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ ಸುಪಾರಿ ನೀಡಿದ ಆರೋಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 01, 2023 | 6:57 AM

Share

ಬೆಂಗಳೂರು: ವಿಚ್ಛೇದಿತ ಪತಿಯನ್ನ ಅಪಹರಿಸಿ ಹತ್ಯೆ ಮಾಡಲು ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಿ ಮಾಜಿ ಪತ್ನಿಯ ಮೇಲೆ ಬೆಂಗಳೂರಿನ ಆರ್.ಟಿ.ನಗರ ಠಾಣೆಗೆ ವಿಚ್ಛೇದಿತ ಪತಿ ಪ್ರವೀಣ್​ ದೂರು ನೀಡಿರುವ ಘಟನೆ ನಡೆದಿದೆ. ಪ್ರವೀಣ್​ ಮಾಜಿ ಪತ್ನಿ ಸಂಧ್ಯಾ, ತಂದೆ ಸೇರಿದಂತೆ 8 ಜನರ ವಿರುದ್ಧ FIR ಹಾಕಲಾಗಿದ್ದು, ಮನ್ಸೂರ್ ಅಲಿಯಾಸ್ ದೂನ್​ ಎಂಬಾತನಿಗೆ10 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಒಂದು ದಿನ ಕಾರಿನಲ್ಲಿ ಬೆಂಗಳೂರು, ಚನ್ನಪಟ್ಟಣದಲ್ಲಿ ಸುತ್ತಾಡಿಸಿ ಐದಾರು ಜನರು ಸೇರಿ ಪ್ರವೀಣ್​ ಮೇಲೆ ಹಲ್ಲೆ ಮಾಡಿದ್ದು, ನಿಮ್ಮ ಮಾಜಿ ಪತ್ನಿ 10 ಲಕ್ಷಕ್ಕೆ ನಿನಗೆ ಸುಪಾರಿ ನೀಡಿದ್ದಾರೆ, ನೀನು 15 ಲಕ್ಷ ನೀಡಿದರೆ ನಿಮ್ಮನ್ನು ಬಿಡುತ್ತೇವೆಂದು ಹೇಳಿ 2.75 ಲಕ್ಷ ರೂ ಪಡೆದು ಬಿಡುಗಡೆ ಮಾಡಿದ್ದಾರೆ ಎಂದು ಪ್ರವೀಣ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಅಪ್ರಾಪ್ತೆಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರವೆಸಗಿದ್ದ ಪ್ರಕರಣ; 10 ವರ್ಷ ಶಿಕ್ಷೆ ನೀಡಿದ ಕೋರ್ಟ್​

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರವೆಸಗಿದ ಇಬ್ಬರು ಹಾಗೂ ಸಹಕರಿಸಿದ ಐದು ಮಂದಿ ಸೇರಿ ಒಟ್ಟು 7 ಯುವಕರಿಗೆ ಪೋಕ್ಸೋ ಕಾಯ್ದೆಯಡಿ ಚಾಮರಾಜನಗರದಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನ ನೀಡಿದೆ. ಜೊತೆಗೆ ಸಂತ್ರಸ್ತ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ಪರಿಹಾರ ನೀಡುವಂತೆ ಆದೇಶ ಹೊರಡಿಸಿದೆ.

ಚಾಮರಾಜನಗರದ ಕ್ರಿಶ್ಚಿಯನ್ ಕಾಲೋನಿಯ ಮಿನಾಜ್ ಖಾನ್, ಕೆ.ಪಿ.ಮೊಹಲ್ಲಾದ ಸಲ್ಮಾನ್ ಖಾನ್, ಮಂಡ್ಯದ ಶಾರುಖ್ ಖಾನ್​, ಮೊಹಮ್ಮದ್ ಅಮೀರ್, ಮೈಸೂರಿನ ಶಾಂತಿನಗರದ ಸೈಯದ್ ಉಮರ್​ ಚಾಮರಾಜನಗರದ ಕ್ರಿಶ್ಚಿಯನ್ ಕಾಲೋನಿಯ ಮಸ್ತಾಖಿಮ್​ ಖಾನ್, ಬೆಂಗಳೂರಿನ ಬೊಮ್ಮನಹಳ್ಳಿಯ ವಹೀದ್ ಅಹ್ಮದ್ ಸೇರಿ ಏಳು ಜನ ಅಪ್ರಾಪ್ತೆ ಜೊತೆ ಸರಸದ ಫೋಟೋ ತೆಗೆದು ಬ್ಲಾಕ್​ಮೇಲ್ ಮಾಡಿದ್ದರು. ಬಳಿಕ ಬಾಲಕಿಯನ್ನ ಅಪಹರಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದ ದುಷ್ಕರ್ಮಿಗಳು ಇದೀಗ ಜೈಲು ಸೇರಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್