AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಸಿಪಾಳ್ಯದಲ್ಲಿ ಸ್ಫೋಟಕ ಪತ್ತೆ: 3 ಬಂಧನ, ವಿಚಾರಣೆ ವೇಳೆ ಅಸಲಿ ಸತ್ಯ ಬಾಯಿಬಿಟ್ಟ ಆರೋಪಿಗಳು

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜುಲೈ 23 ರಂದು ಪತ್ತೆಯಾದ ಸ್ಫೋಟಕಗಳ ಪ್ರಕರಣದಲ್ಲಿ ಪೊಲೀಸರು ಕೋಲಾರ ಮೂಲದ ಮೂವರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರಿಂದ 22 ಜಿಲೆಟಿನ್ ಕಡ್ಡಿ ಮತ್ತು 30 ಡಿಟೋನೇಟರ್ಸ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಹುಡುಕಾಟ ಕಾರ್ಯಚರಣೆ ಮುಂದುವರೆದಿದೆ.

ಕಲಾಸಿಪಾಳ್ಯದಲ್ಲಿ ಸ್ಫೋಟಕ ಪತ್ತೆ: 3 ಬಂಧನ, ವಿಚಾರಣೆ ವೇಳೆ ಅಸಲಿ ಸತ್ಯ ಬಾಯಿಬಿಟ್ಟ ಆರೋಪಿಗಳು
ಸ್ಫೋಟಕ ಪತ್ತೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 29, 2025 | 12:45 PM

Share

ಬೆಂಗಳೂರು, ಜುಲೈ 29: ಇತ್ತೀಚೆಗೆ ಕಲಾಸಿಪಾಳ್ಯ (Kalasipalya) ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ (arrest). ಕೋಲಾರ ಮೂಲದ ಗಣೇಶ್​, ಮುನಿರಾಜ್​ ಮತ್ತು ಶಿವಕುಮಾರ್​​ ಬಂಧಿತರು. ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗವಾಗಿದೆ.

ಐದು ತಂಡ ರಚಿಸಿ ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಸದ್ಯ ಮೂವರನ್ನು ಬಂಧಿಸುವ ಮೂಲಕ ಬಂಧಿತರಿಂದ 22 ಜಿಲೆಟಿನ್​ ಜೆಲ್​, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.

ಆರೋಪಿಗಳ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬಹಿರಂಗ

ಇನ್ನು ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗಗೊಂಡಿವೆ. ಆರೋಪಿಗಳು ಸ್ಫೋಟಕಗಳನ್ನು ಬ್ಯಾಗ್​ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ  ತೆರಳಿದ್ದು, ಬ್ಯಾಗ್​ಗಳನ್ನು ಹೊರಗಡೆ ಇಟ್ಟು ಹೋಗಿದ್ದಾರೆ. ಈ ವೇಳೆ ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್​ ಇರುವುದನ್ನು​ ನೋಡಿ ಬೆದರಿ ಅಲ್ಲಿಯೇ ಬ್ಯಾಗ್​ ಬಿಟ್ಟು  ಹೋಗಿದ್ದಾರೆ ಎನ್ನುವ ಮಾಹಿತಿ ಪತ್ತೆಯಾಗಿದೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಸ್ಫೋಟಕ ಸಾಮಗ್ರಿ ಪತ್ತೆಯಾದ ಬಗ್ಗೆ ಸಚಿವರಲ್ಲಿ ಮಾಹಿತಿ ಕೊರತೆ
Image
ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ
Image
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
Image
ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

ಇದನ್ನೂ ಓದಿ: ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು

ಕೋಲಾರದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಖರೀದಿಸಿದ್ದಾರೆ. ಆರೋಪಿಗಳು ಸ್ಫೋಟಕಗಳನ್ನು ಕೊಳ್ಳೆಗಾಲದಲ್ಲಿ ಬೋರ್ವೆಲ್ ಮತ್ತು ಗುಂಡಿಯಲ್ಲಿ ಬಂಡೆ ಒಡೆಯಲು ಬಳಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಜುಲೈ 23ರಂದು ಕೆ.ಆರ್.ಮಾರ್ಕೆಟ್​ ಬಳಿಯ ಕಲಾಸಿಪಾಳ್ಯದಲ್ಲಿ ಜನರು ತುಂಬಿ ತುಳುಕುತ್ತಿದ್ದರು. ಆದರೆ ಖಾಸಗಿ ಬಸ್​​​ಸ್ಟ್ಯಾಂಡ್​ನ ಶೌಚಾಲಯದ ಎದುರಿದ್ದ ಚೀಲ ಕಂಡು ಎಲ್ಲ ಬೆಚ್ಚಿ ಬಿದಿದ್ದರು. ಏಕೆಂದರೆ ಅಲ್ಲಿ ಸ್ಫೋಟಕ ವಸ್ತುಗಳು ಪತ್ತೆ ಆಗಿದ್ದವು.

ಇದನ್ನೂ ಓದಿ: ಬೆಂಗಳೂರು ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ

ಶನಿವಾರ ಬಸ್​ ನಿಲ್ದಾಣದ ನಾಮಕರಣ ನಡೆಯಲಿದ್ದು ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರು ಆಗಮಿಸಲಿದ್ದರು. ಅದಕ್ಕೂ ಮುನ್ನ ಇಲ್ಲಿ ಸ್ಪೋಟಕ ಪತ್ತೆ ಆಗಿದ್ದು, ಆತಂಕ ಹುಟ್ಟಿಸಿತ್ತು. ಕಲ್ಲುಕ್ವಾರಿಯಲ್ಲಿ ಬಳಸಲು ಕೊಂಡೊಯ್ಯುತ್ತಿದ್ದ ಸ್ಫೋಟಕಗಳು ಇರಬಹುದೆಂದು ಪೊಲೀಸರು ಈ ಮುಂಚೆ ಶಂಕೆ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ