AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಸಿಪಾಳ್ಯದಲ್ಲಿ ಸ್ಫೋಟಕ ಪತ್ತೆ: 3 ಬಂಧನ, ವಿಚಾರಣೆ ವೇಳೆ ಅಸಲಿ ಸತ್ಯ ಬಾಯಿಬಿಟ್ಟ ಆರೋಪಿಗಳು

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜುಲೈ 23 ರಂದು ಪತ್ತೆಯಾದ ಸ್ಫೋಟಕಗಳ ಪ್ರಕರಣದಲ್ಲಿ ಪೊಲೀಸರು ಕೋಲಾರ ಮೂಲದ ಮೂವರನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರಿಂದ 22 ಜಿಲೆಟಿನ್ ಕಡ್ಡಿ ಮತ್ತು 30 ಡಿಟೋನೇಟರ್ಸ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಹುಡುಕಾಟ ಕಾರ್ಯಚರಣೆ ಮುಂದುವರೆದಿದೆ.

ಕಲಾಸಿಪಾಳ್ಯದಲ್ಲಿ ಸ್ಫೋಟಕ ಪತ್ತೆ: 3 ಬಂಧನ, ವಿಚಾರಣೆ ವೇಳೆ ಅಸಲಿ ಸತ್ಯ ಬಾಯಿಬಿಟ್ಟ ಆರೋಪಿಗಳು
ಸ್ಫೋಟಕ ಪತ್ತೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jul 29, 2025 | 12:45 PM

Share

ಬೆಂಗಳೂರು, ಜುಲೈ 29: ಇತ್ತೀಚೆಗೆ ಕಲಾಸಿಪಾಳ್ಯ (Kalasipalya) ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ (arrest). ಕೋಲಾರ ಮೂಲದ ಗಣೇಶ್​, ಮುನಿರಾಜ್​ ಮತ್ತು ಶಿವಕುಮಾರ್​​ ಬಂಧಿತರು. ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗವಾಗಿದೆ.

ಐದು ತಂಡ ರಚಿಸಿ ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಸದ್ಯ ಮೂವರನ್ನು ಬಂಧಿಸುವ ಮೂಲಕ ಬಂಧಿತರಿಂದ 22 ಜಿಲೆಟಿನ್​ ಜೆಲ್​, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.

ಆರೋಪಿಗಳ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಬಹಿರಂಗ

ಇನ್ನು ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗಗೊಂಡಿವೆ. ಆರೋಪಿಗಳು ಸ್ಫೋಟಕಗಳನ್ನು ಬ್ಯಾಗ್​ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ  ತೆರಳಿದ್ದು, ಬ್ಯಾಗ್​ಗಳನ್ನು ಹೊರಗಡೆ ಇಟ್ಟು ಹೋಗಿದ್ದಾರೆ. ಈ ವೇಳೆ ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್​ ಇರುವುದನ್ನು​ ನೋಡಿ ಬೆದರಿ ಅಲ್ಲಿಯೇ ಬ್ಯಾಗ್​ ಬಿಟ್ಟು  ಹೋಗಿದ್ದಾರೆ ಎನ್ನುವ ಮಾಹಿತಿ ಪತ್ತೆಯಾಗಿದೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಸ್ಫೋಟಕ ಸಾಮಗ್ರಿ ಪತ್ತೆಯಾದ ಬಗ್ಗೆ ಸಚಿವರಲ್ಲಿ ಮಾಹಿತಿ ಕೊರತೆ
Image
ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ
Image
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
Image
ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

ಇದನ್ನೂ ಓದಿ: ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು

ಕೋಲಾರದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಖರೀದಿಸಿದ್ದಾರೆ. ಆರೋಪಿಗಳು ಸ್ಫೋಟಕಗಳನ್ನು ಕೊಳ್ಳೆಗಾಲದಲ್ಲಿ ಬೋರ್ವೆಲ್ ಮತ್ತು ಗುಂಡಿಯಲ್ಲಿ ಬಂಡೆ ಒಡೆಯಲು ಬಳಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಜುಲೈ 23ರಂದು ಕೆ.ಆರ್.ಮಾರ್ಕೆಟ್​ ಬಳಿಯ ಕಲಾಸಿಪಾಳ್ಯದಲ್ಲಿ ಜನರು ತುಂಬಿ ತುಳುಕುತ್ತಿದ್ದರು. ಆದರೆ ಖಾಸಗಿ ಬಸ್​​​ಸ್ಟ್ಯಾಂಡ್​ನ ಶೌಚಾಲಯದ ಎದುರಿದ್ದ ಚೀಲ ಕಂಡು ಎಲ್ಲ ಬೆಚ್ಚಿ ಬಿದಿದ್ದರು. ಏಕೆಂದರೆ ಅಲ್ಲಿ ಸ್ಫೋಟಕ ವಸ್ತುಗಳು ಪತ್ತೆ ಆಗಿದ್ದವು.

ಇದನ್ನೂ ಓದಿ: ಬೆಂಗಳೂರು ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ

ಶನಿವಾರ ಬಸ್​ ನಿಲ್ದಾಣದ ನಾಮಕರಣ ನಡೆಯಲಿದ್ದು ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರು ಆಗಮಿಸಲಿದ್ದರು. ಅದಕ್ಕೂ ಮುನ್ನ ಇಲ್ಲಿ ಸ್ಪೋಟಕ ಪತ್ತೆ ಆಗಿದ್ದು, ಆತಂಕ ಹುಟ್ಟಿಸಿತ್ತು. ಕಲ್ಲುಕ್ವಾರಿಯಲ್ಲಿ ಬಳಸಲು ಕೊಂಡೊಯ್ಯುತ್ತಿದ್ದ ಸ್ಫೋಟಕಗಳು ಇರಬಹುದೆಂದು ಪೊಲೀಸರು ಈ ಮುಂಚೆ ಶಂಕೆ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ