
ಬೆಂಗಳೂರು, ಜುಲೈ 29: ಇತ್ತೀಚೆಗೆ ಕಲಾಸಿಪಾಳ್ಯ (Kalasipalya) ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ (arrest). ಕೋಲಾರ ಮೂಲದ ಗಣೇಶ್, ಮುನಿರಾಜ್ ಮತ್ತು ಶಿವಕುಮಾರ್ ಬಂಧಿತರು. ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗವಾಗಿದೆ.
ಐದು ತಂಡ ರಚಿಸಿ ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಸದ್ಯ ಮೂವರನ್ನು ಬಂಧಿಸುವ ಮೂಲಕ ಬಂಧಿತರಿಂದ 22 ಜಿಲೆಟಿನ್ ಜೆಲ್, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.
ಇನ್ನು ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗಗೊಂಡಿವೆ. ಆರೋಪಿಗಳು ಸ್ಫೋಟಕಗಳನ್ನು ಬ್ಯಾಗ್ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ ತೆರಳಿದ್ದು, ಬ್ಯಾಗ್ಗಳನ್ನು ಹೊರಗಡೆ ಇಟ್ಟು ಹೋಗಿದ್ದಾರೆ. ಈ ವೇಳೆ ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್ ಇರುವುದನ್ನು ನೋಡಿ ಬೆದರಿ ಅಲ್ಲಿಯೇ ಬ್ಯಾಗ್ ಬಿಟ್ಟು ಹೋಗಿದ್ದಾರೆ ಎನ್ನುವ ಮಾಹಿತಿ ಪತ್ತೆಯಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ದೌಡು
ಕೋಲಾರದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಖರೀದಿಸಿದ್ದಾರೆ. ಆರೋಪಿಗಳು ಸ್ಫೋಟಕಗಳನ್ನು ಕೊಳ್ಳೆಗಾಲದಲ್ಲಿ ಬೋರ್ವೆಲ್ ಮತ್ತು ಗುಂಡಿಯಲ್ಲಿ ಬಂಡೆ ಒಡೆಯಲು ಬಳಸಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಜುಲೈ 23ರಂದು ಕೆ.ಆರ್.ಮಾರ್ಕೆಟ್ ಬಳಿಯ ಕಲಾಸಿಪಾಳ್ಯದಲ್ಲಿ ಜನರು ತುಂಬಿ ತುಳುಕುತ್ತಿದ್ದರು. ಆದರೆ ಖಾಸಗಿ ಬಸ್ಸ್ಟ್ಯಾಂಡ್ನ ಶೌಚಾಲಯದ ಎದುರಿದ್ದ ಚೀಲ ಕಂಡು ಎಲ್ಲ ಬೆಚ್ಚಿ ಬಿದಿದ್ದರು. ಏಕೆಂದರೆ ಅಲ್ಲಿ ಸ್ಫೋಟಕ ವಸ್ತುಗಳು ಪತ್ತೆ ಆಗಿದ್ದವು.
ಇದನ್ನೂ ಓದಿ: ಬೆಂಗಳೂರು ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ: ತನಿಖೆಗೆ ಆರು ತಂಡಗಳ ರಚನೆ
ಶನಿವಾರ ಬಸ್ ನಿಲ್ದಾಣದ ನಾಮಕರಣ ನಡೆಯಲಿದ್ದು ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರು ಆಗಮಿಸಲಿದ್ದರು. ಅದಕ್ಕೂ ಮುನ್ನ ಇಲ್ಲಿ ಸ್ಪೋಟಕ ಪತ್ತೆ ಆಗಿದ್ದು, ಆತಂಕ ಹುಟ್ಟಿಸಿತ್ತು. ಕಲ್ಲುಕ್ವಾರಿಯಲ್ಲಿ ಬಳಸಲು ಕೊಂಡೊಯ್ಯುತ್ತಿದ್ದ ಸ್ಫೋಟಕಗಳು ಇರಬಹುದೆಂದು ಪೊಲೀಸರು ಈ ಮುಂಚೆ ಶಂಕೆ ವ್ಯಕ್ತಪಡಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.