AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಗಲಾಟೆಯಲ್ಲಿ ಮೂವರಿಗೆ ಚಾಕು ಇರಿತ

ಬೆಂಗಳೂರಿನ ರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ಎಸ್ಎಸ್ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ನಡೆದಿದೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಗಲಾಟೆಯಲ್ಲಿ ಮೂವರಿಗೆ ಚಾಕು ಇರಿತ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Mar 28, 2024 | 4:07 PM

Share

ಬೆಂಗಳೂರು, ಮಾ.28: ಎಸ್ಎಸ್ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೀರು ಸರಬರಾಜು ಟ್ಯಾಂಕರ್ ಸ್ಟ್ಯಾಂಡ್ ಕಾಲಿನ ಮೇಲೆ‌ ಬಿದ್ದು ಸಿಬ್ಬಂದಿಗೆ ಗಂಭೀರ ಗಾಯ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಮಕ್ತಾಪುರ ಗ್ರಾಮದಲ್ಲಿ ನೀರು ಸರಬರಾಜು ಟ್ಯಾಂಕರ್ ಸ್ಟ್ಯಾಂಡ್ ಕಾಲಿನ ಮೇಲೆ‌ ಬಿದ್ದು ನೀರು ಪೂರೈಕೆ ಮಾಡುವ ಸಿಬ್ಬಂದಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಟ್ರ್ಯಾಕ್ಟರ್ ಟ್ಯಾಂಕರ್ ಮೂಲಕ ಮನೆ ಮನೆಗೆ ನೀರು ಸರಬರಾಜು ಮಾಡುವಾಗ ಈ ಅವಘಡ ಸಂಭವಿಸಿದೆ. ಕೂಡಲೇ ಗಾಯಾಳು ದರ್ಶನ, ಶಹಾಪುರ ತಾಲೂಕಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಇಂದು ಟ್ರ್ಯಾಕ್ಟರ್ ಟ್ಯಾಂಕರ್ ಮೂಲಕ ಮನೆ ಮನೆಗೆ ನೀರು ಸರಬರಾಜು ಮಾಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಇಂದು ಮನೆ ಮನೆಗೆ ನೀರು ಸರಬರಾಜು ಮಾಡಲು ಮುಂದಾದ ವೇಳೆ ಸ್ಟ್ಯಾಂಡ್ ಹಾಕುವಾಗ ದುರ್ಘಟನೆ ನಡೆದಿದೆ. ವಿಷಯ ತಿಳಿದು ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವನ್ನು ವಿಚಾರಿಸಿದ್ದಾರೆ.

ಇದನ್ನೂ ಓದಿ:ಬಾಗಲಕೋಟೆ: ರನ್ನಬೆಳಗಲಿ ಮಸೀದಿಯಲ್ಲಿ ಮಾರಾಮಾರಿ: ಡೋಲಿ, ಶವಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕೆ ಹಲ್ಲೆ

ಮಂಗಳೂರಿನ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ;ಕೊಟ್ಯಾಂತರ ರೂಪಾಯಿ ನಷ್ಟ

ಮಂಗಳೂರು: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಫಿಶ್ ಆಯಿಲ್ ಕಾರ್ಖಾನೆಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. U.M.ಮೊಹಮ್ಮದ್ ಎಂಬವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಶಾರ್ಟ್​​ಸರ್ಕ್ಯೂಟ್​​ನಿಂದಾಗಿ ಫ್ಯಾಕ್ಟರಿಯಲ್ಲಿ ಈ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದ್ದಾರೆ. ಇದರಿಂದ ಕೊಟ್ಯಂತರ ರೂಪಾಯಿ ನಷ್ಟವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Thu, 28 March 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ