AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಪತಿಯಿಂದ ಸುಳ್ಳು ಕೇಸ್ ದಾಖಲು ಪ್ರಕರಣ: ಸಿಸಿಬಿ ಕಚೇರಿಗೆ ಹಾಜರಾದ ಸ್ಯಾಂಟ್ರೋ ರವಿ ಪತ್ನಿ

ಲ್ಯಾಪ್​ಟಾಪ್​ಗಾಗಿ ತನ್ನ ಪತ್ನಿ ವಿರುದ್ಧವೇ ಸುಳ್ಳು ಕೇಸ್ ದಾಖಲಿದ್ದ ಸ್ಯಾಂಟ್ರೋ ರವಿ ವಿರುದ್ಧ ಪತ್ನಿಯೇ ದೂರು ದಾಖಲಿಸಿದ್ದರು. ಸದ್ಯ ಸುಳ್ಳು ಕೇಸ್ ದಾಖಲು ವಿಚಾರವಾಗಿ ಸ್ಯಾಂಟ್ರೋ ರವಿ ಪತ್ನಿ ಇಂದು ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Santro Ravi: ಪತಿಯಿಂದ ಸುಳ್ಳು ಕೇಸ್ ದಾಖಲು ಪ್ರಕರಣ: ಸಿಸಿಬಿ ಕಚೇರಿಗೆ ಹಾಜರಾದ ಸ್ಯಾಂಟ್ರೋ ರವಿ ಪತ್ನಿ
ಸ್ಯಾಂಟ್ರೋ ರವಿ (ಎಡ ಚಿತ್ರ)
TV9 Web
| Edited By: |

Updated on:Jan 23, 2023 | 8:07 PM

Share

ಬೆಂಗಳೂರು: ತನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ ವಿಚಾರವಾಗಿ ಇಂದು ಸ್ಯಾಂಟ್ರೋ ರವಿ ಪತ್ನಿ ನಗರದಲ್ಲಿರುವ ಸಿಸಿಬಿ ಪೊಲೀಸ್ ಕಚೇರಿಗೆ (CCB Police Bengaluru) ಹಾಜರಾಗಿದ್ದು, ಪೊಲೀಸರು ಸ್ಯಾಂಟ್ರೋ ರವಿ ಪತ್ನಿ ಹೇಳಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಉದ್ಯಮಿ ಸ್ಯಾಂಟ್ರೋ ರವಿ (Santro Ravi) ಪ್ರಕರಣದಲ್ಲಿ ಬಗೆದಷ್ಟು ಮಾಹಿತಿ ಹೊರಬೀಳುತ್ತಿದೆ. ತನ್ನ ಪತ್ನಿ ಬಳಿ ಇದ್ದ ಲ್ಯಾಪ್​ಟಾಪ್ ತನ್ನ ಕೈ ಸೇರಲು ಸ್ಯಾಂಟ್ರೋ ರವಿ ಪತ್ನಿ ವಿರುದ್ಧವೇ ಷಡ್ಯಂತರ ರೂಪಿಸುತ್ತಾನೆ. ಇದಕ್ಕಾಗಿ ವರ್ಗಾವಣೆಯಾಗುವ ತಲೆಬಿಸಿಯಲ್ಲಿದ್ದ ಕಾಟನ್​ಪೇಟೆ ಠಾಣಾ ಇನ್ಸ್​ಪೆಕ್ಟರ್​ ಪ್ರವೀಣ್​ ಅವರನ್ನು ಬಳಕೆ ಮಾಡಿಕೊಳ್ಳುತ್ತಾನೆ. ವರ್ಗಾವಣೆ ತಡೆ ಆಮಿಷವೊಡ್ಡಿ ಇನ್ಸ್​​ಪೆಕ್ಟರ್ ಮೂಲಕ ಫೇಕ್ ಪ್ರಕರಣ ದಾಖಲಿಸಿಕೊಳ್ಳುತ್ತಾನೆ. ಅದರಂತೆ ಇನ್ಸ್​ಪೆಕ್ಟರ್ ಮೂವರು ಅಮಾಯಕರನ್ನು ಬಂಧಿಸುತ್ತಾರೆ. ಇವರು ಜೈಲುವಾಸ ಅನುಭವಿಸಿ ಹೊರಬಂದ ನಂತರ ಅಸಲಿ ದೂರನ್ನು ದಾಖಲಿಸುತ್ತಾರೆ. ಇದು ಸ್ಯಾಂಟ್ರೋ ರವಿಗೆ ತಿರುಗುಬಾಣವಾಗಿ ಪರಿಣಮಿಸಿದೆ.

ಲ್ಯಾಪ್​ಟಾಪ್​ಗಾಗಿ ಪತ್ನಿ ವಿರುದ್ಧ ಷಡ್ಯಂತರ ರೂಪಿಸಿದ ರವಿ ವಂಚನೆ ಪ್ರಕರಣದಲ್ಲಿ ಸಿಲುಕಿಸಿಹಾಕಲು ಯತ್ನಿಸುತ್ತಾನೆ. ಇದೇ ಸಂದರ್ಭದಲ್ಲಿ ಕಾಟನ್​ಪೇಟೆ ಠಾಣಾ ಇನ್ಸ್​ಪೆಕ್ಟರ್​ ಪ್ರವೀಣ್ ವರ್ಗಾವಣೆ ತಲೆಬಿಸಿಯಲ್ಲಿ ಇರುತ್ತಾರೆ. ಈ ವಿಚಾರ ತಿಳಿದ ಸ್ಯಾಂಟ್ರೋ ರವಿ, ತಾನು ಹೇಳಿದಂತೆ ಪ್ರಕರಣ ದಾಖಲಿಸಿದರೆ ವರ್ಗಾವಣೆ ತಡೆ ಮಾವುದಾಗಿ ಆಮಿಷವೊಡ್ಡುತ್ತಾನೆ. ತಾನು ಕಾಟನ್​ಪೇಟೆ ಠಾಣೆಯಲ್ಲಿ ಇನ್ಸ್​ಪೆಕ್ಟರ್ ಆಗಿಯೇ ಮುಂದುವರಿಯಬೇಕು ಎನ್ನುವ ಆಸೆಯಿಂದ ಪ್ರವೀಣ್, ಸ್ಯಾಂಟ್ರೋ ರವಿ ಹೇಳಿದಂತೆ ನಕಲಿ ವಂಚನೆ ಪ್ರಕರಣ ದಾಖಲಿಸುತ್ತಾರೆ. ತನ್ನ ಸ್ನೇಹಿತ ಶ್ರೀಪ್ರಕಾಶ್ ಎಂಬಾತನಿಂದ ಸ್ಯಾಂಟ್ರೋ ರವಿ ದೂರು ದಾಖಲಿಸಿದ್ದನು.

ಇದನ್ನೂ ಓದಿ: Santro Ravi: ಮೈಸೂರಿನ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾದ ಪ್ರಕರಣದ ತನಿಖಾ ವರದಿ ಸಿಐಡಿಗೆ ವರ್ಗಾವಣೆ

ಸ್ಯಾಂಟ್ರೋ ರವಿ ಪತ್ನಿ ಆರ್ಥಿಕ ಸಮಸ್ಯೆ ಹೇಳಿಕೊಂಡು ತನ್ನ ಬಳಿಯಿಂದ 5 ಲಕ್ಷ ಸಾಲು ಪಡೆದು ಮೂರು ತಿಂಗಳಲ್ಲಿ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಸಂಬಂಧ ಒಂದು ಚೆಕ್, ಪಾಸ್​​ಬುಕ್ ಜೆರಾಕ್ಸ್ ಸಹ ನೀಡಿದ್ದರು. ನವೆಂಬರ್ 23ರಂದು ಕರೆ ಮಾಡಿ ಹಣ ವಾಪಸ್ ನೀಡುವುದಾಗಿ ಹೇಳಿ ಮೆಜೆಸ್ಟಿಕ್ ಬಳಿ ರಾತ್ರಿ ಮಳೆ ಬರುತ್ತಿದ್ದಾಗ ಕರೆಸಿಕೊಂಡಿದ್ದಾರೆ. ನಂತರ ರೈಲು ನಿಲ್ದಾಣದಿಂದ ಕೊಂಚ ಮುಂದೆ ಕರೆಸಿಕೊಂಡು ಹಣ ಕೊಡದೇ ಹಲ್ಲೆ ನಡೆಸಿ ತನ್ನ ಬಳಿ ಇದ್ದ ಚಿನ್ನ ಕದ್ದು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಶ್ರೀಪ್ರಕಾಶ್ ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲಿಸಿಕೊಂಡ ಕಾಟನ್ ಪೇಟೆ ಠಾಣಾ ಇನ್​​ಸ್ಪೆಕ್ಟರ್ ಪ್ರವೀಣ್, ರವಿ ಪತ್ನಿ, ಮತ್ತೋರ್ವ ಮಹಿಳೆ ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸುತ್ತಾರೆ. ತಾನು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸಿದ ಅಮಾಯಕರು ಜೈಲಿನಿಂದ ಬಿಡುಗಡೆಯಾಗಿ ರವಿ ವಿರುದ್ಧ ವಂಚನೆ, ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಿಸುತ್ತಾರೆ. ದೂರಿನ ಅನ್ವಯ ಮೈಸೂರು ಪೊಲೀಸರು ರವಿ ವಿರುದ್ಧ ಎಫ್​ಐಆರ್ ದಾಖಲಿಸುತ್ತಾರೆ. ಬಳಿಕ ರಾಜ್ಯಾದ್ಯಂತ ಸ್ಯಾಂಟ್ರೋ ರವಿ ಭಾರೀ ಚರ್ಚೆಗೆ ಕಾರಣವಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Mon, 23 January 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ