AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರೇ ಎಚ್ಚರ! ನಿಮ್ಮ ಮಕ್ಕಳಿಗೂ ಹೀಗಾಗಬಹುದು? ಬೆಂಗಳೂರಿನ ಪ್ರತಿಷ್ಠಿತ ಶಾಲೆ ವಿರುದ್ದ ಎಫ್​ಐಆರ್ ದಾಖಲು

ಬೆಂಗಳೂರಿನ ವಸಂತನಗರದ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್​​ಐಆರ್​​​ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿಯು 10 ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಯಲ್ಲಿ ದಾಖಲಿಸಿ ಪರೀಕ್ಷೆ ಬರೆಸಿ, ಉದ್ದೇಶಪೂರ್ವಕವಾಗಿ ಫೇಲ್ ಮಾಡಿಸಿದ ಆರೋಪ ಕೇಳಿಬಂದಿದೆ. ಅದರಲ್ಲೂ ಹಿಂದೂ ಮಕ್ಕಳಿಗೆ ಮಾತ್ರ ಹೀಗೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಪೋಷಕರೇ ಎಚ್ಚರ! ನಿಮ್ಮ ಮಕ್ಕಳಿಗೂ ಹೀಗಾಗಬಹುದು? ಬೆಂಗಳೂರಿನ ಪ್ರತಿಷ್ಠಿತ ಶಾಲೆ ವಿರುದ್ದ ಎಫ್​ಐಆರ್ ದಾಖಲು
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 19, 2025 | 7:59 AM

Share

ಬೆಂಗಳೂರು, ಜೂನ್ 19: ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್​​ (St. Mary’s Girls High School) ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲಾಗಿದೆ. 100% ಫಲಿತಾಂಶಕ್ಕಾಗಿ ಸಾಧಾರಣವಾಗಿ ಓದುವ ವಿದ್ಯಾರ್ಥಿಗಳನ್ನು ಅವರ ಪೋಷಕರ ಗಮನಕ್ಕೂ ಬಾರದೆ ಅನಾಥ ಮಕ್ಕಳು ಎಂದು ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್​ ಮಾಡಿಸಿರುವ ಆರೋಪ ಶಾಲೆ ವಿರುದ್ಧ ಕೇಳಿಬಂದಿದೆ. ಆ ಮೂಲಕ ಮಕ್ಕಳ ಭವಿಷ್ಯದ ಜೊತೆ ಆಟವಾಡಿದರಾ ಎಂಬ ಪ್ರಶ್ನೆ ಹುಟ್ಟುಕೊಂಡಿದೆ.

ಹಿಂದೂ ಮಕ್ಕಳಿಗೆ ಮಾತ್ರ ಹೀಗೆ

ಸದ್ಯ ಶಾಲಾ ಮಂಡಳಿ ವಿರುದ್ಧ ಮಕ್ಕಳು ಹಾಗೂ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಮಕ್ಕಳಿಗೆ ಈ ರೀತಿ ಮಾಡಲ್ಲ. ಹಿಂದೂ ಮಕ್ಕಳಿಗೆ ಈ ರೀತಿ ಮಾಡುತ್ತಾರೆ ಎಂದು ಆರೋಪಿಸಲಾಗಿದ್ದು, ಇವರಿಂದಾಗಿ ಮಕ್ಕಳ ಭವಿಷ್ಯ ಹಾಳಾಯ್ತು ಎಂದು ಅಳಲು ತೊಡಿಕೊಂಡಿದ್ದಾರೆ.

ನಡೆದದ್ದೇನು?

ಶಾಲೆಯ ಸುಮಾರು 10 ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್​ ಮಾಡಲಾಗಿದೆ. ಮಕ್ಕಳಿಗೆ ಸರ್ಕಾರಿ ಶಾಲೆ ಸಮವಸ್ತ್ರ ಹಾಕಿ ಫೋಟೋ ಸಹ ತೆಗೆದುಕೊಂಡಿದ್ದಾರೆ. ನಂತರ ಪರೀಕ್ಷೆ ಸಮಯದಲ್ಲಿ ಹಾಲ್ ಟಿಕೆಟ್ ನೀಡಿ ಸರ್ಕಾರಿ ಶಾಲೆಯಲ್ಲಿ ಪರೀಕ್ಷೆ ಬರೆಸಲಾಗಿದೆ. ಪರೀಕ್ಷೆ ಬರೆದ ಮಕ್ಕಳಿಗೆ ಇಂಟರ್ನಲ್ಸ್ ಅಂಕ ಸಿಗದೇ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಿದಾಗ ಶಾಲೆ ಕಳ್ಳಾಟ ಬಯಲಾಗಿದೆ.

ಇದನ್ನೂ ಓದಿ
Image
ಇಂದಿನಿಂದ ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆ ಅಬ್ಬರ
Image
ಸಿಎಂ ವಿರುದ್ಧವೇ ದಾಳ ಉರುಳಿಸಿದ್ದ ಸಚಿವರು! ತೆರೆಮರೆ ರಹಸ್ಯದ ವಿವರ ಇಲ್ಲಿದೆ
Image
ವಿಧಾನಸೌಧ, ಎಂಎಸ್ ಬಿಲ್ಡಿಂಗ್, ಲೋಕಾಯುಕ್ತ ಕಚೇರಿ ಸುತ್ತ ಪಾರ್ಕಿಂಗ್ ಜಂಜಾಟ
Image
ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು...!

ಇದನ್ನೂ ಓದಿ: ತುಮಕೂರು: ರಾಷ್ಟ್ರಮಟ್ಟದ ವಿದ್ಯಾರ್ಥಿವೇತನಕ್ಕೆ ಸಿದ್ದಗಂಗಾ ಮಠದ ಆರು ವಿದ್ಯಾರ್ಥಿಗಳು ಆಯ್ಕೆ

ಶುಲ್ಕ ಕಟ್ಟಿರುವ ಪೋಷಕರು ತಮ್ಮ ಮಕ್ಕಳನ್ನು ಸೇಂಟ್ ಮೇರಿಸ್​​​ ಶಾಲೆಗೆ ಕಳಿಸಿದ್ದಾರೆ. ಆದರೆ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಇದೆ. ಈ ವಿಚಾರ ಪೋಷಕರ ಗಮನಕ್ಕೂ ಬಂದಿಲ್ಲ. ಇತ್ತ ಶಾಲೆಗೆ ಬಂದಿಲ್ಲ ಎಂದು ಸರ್ಕಾರಿ ಶಾಲೆಯಲ್ಲಿ ಇಂಟರ್ನಲ್ಸ್ ಅಂಕ ನೀಡಿರಲಿಲ್ಲಾ ಎಂಬುದು ಪತ್ತೆಯಾಗಿದೆ.

ಇದನ್ನೂ ಓದಿ: ಜಾತಿ ಗಣತಿ: ಸಿಎಂ ವಿರುದ್ಧವೇ ದಾಳ ಉರುಳಿಸಿದ್ದ ಸಚಿವರು! ತೆರೆಮರೆಯ ರಹಸ್ಯ ಕಹಾನಿಯ ವಿವರ ಇಲ್ಲಿದೆ

ನಂತರ ಪೋಷಕರು ಶಾಲೆ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ಎಫ್​ಐಆರ್​ ದಾಖಲಾಗಿದೆ. ಸೂಕ್ತ ಕಾನೂನು ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 am, Thu, 19 June 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ