AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ: 10 ರೆಸ್ಟೋರೆಂಟ್‌ ಬಂದ್​

ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, 74 ಬಾರ್​, ಪಬ್​, ರೆಸ್ಟೋರೆಂಟ್​​ಗಳಿಗೆ ನೋಟಿಸ್ ನೀಡಲಾಗಿದೆ. ಇಲ್ಲಿಯವರೆಗೆ ನೀಡಲಾದ ಒಟ್ಟು ನೋಟಿಸ್‌ಗಳ ಸಂಖ್ಯೆ 327ಕ್ಕೆ ತಲುಪಿದೆ. ನೋಟಿಸ್ ಪಡೆದಿರುವ ಉದ್ದಿಮೆಗಳು ಸೂಚಿಸಿರುವ ಬದಲಾವಣೆಗಳನ್ನು ಪಾಲಿಸಬೇಕು ಎಂದು ಬಿಬಿಂಪಿ ಹೇಳಿದೆ.

ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ: 10 ರೆಸ್ಟೋರೆಂಟ್‌ ಬಂದ್​
ಬಿಬಿಎಂಪಿ
ವಿವೇಕ ಬಿರಾದಾರ
|

Updated on: Oct 24, 2023 | 10:22 AM

Share

ಬೆಂಗಳೂರು ಅ.24: ಕೋರಮಂಗಲದ (Kormangala) ಹುಕ್ಕಾ ಬಾರ್ ಮಡ್​​ಪೈಪ್ ಕೆಫೆಯಲ್ಲಿ ಅಗ್ನಿ ದುರಂತ (Fire Accident) ಸಂಭವಿಸಿದ ನಂತರ ಅಲರ್ಟ್ ಆದ ಬಿಬಿಎಂಪಿ (BBMP) ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್​, ಬಾರ್​​ ಮತ್ತು ರೆಸ್ಟೋರೆಂಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಶನಿವಾರ ಜೆಪಿ ನಗರದಲ್ಲಿರುವ ರೂಫ್‌ಟಾಪ್ ಕೆಫೆ ಸೇರಿದಂತೆ 10 ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದಾರೆ.

ಎಂಟು ವಲಯಗಳಲ್ಲಿ ಒಟ್ಟು 43 ಉದ್ದಿಮೆಗಳನ್ನು ಬಿಬಿಎಂಪಿಯ ಅಧಿಕಾರಿಗಳು ಮುಚ್ಚಿಸಿದ್ದಾರೆ. ಬಿಬಿಎಂಪಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಿದೆ. ಇದರಲ್ಲಿ ಇದುವರೆಗೆ 669 ಉದ್ದಮೆಗಳನ್ನು ತಪಾಸಣೆ ನಡೆಸಲಾಗಿದೆ. 157 ಉದ್ದಿಮೆಗಳು ಟ್ರೇಡ್ ಲೈಸೆನ್ಸ್ ಷರತ್ತುಗಳ ನಿಯಮಗಳನ್ನು ಉಲ್ಲಂಘನೆ ಮಾಡಿವೆ. ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, 74 ಉದ್ದಿಮೆಗಳಿಗೆ ನೋಟಿಸ್ ನೀಡಲಾಗಿದೆ. ಇಲ್ಲಿಯವರೆಗೆ ನೀಡಲಾದ ಒಟ್ಟು ನೋಟಿಸ್‌ಗಳ ಸಂಖ್ಯೆ 327ಕ್ಕೆ ತಲುಪಿದೆ. ನೋಟಿಸ್ ಪಡೆದಿರುವ ಉದ್ದಿಮೆಗಳು ಸೂಚಿಸಿರುವ ಬದಲಾವಣೆಗಳನ್ನು ಪಾಲಿಸಬೇಕು ಎಂದು ಬಿಬಿಎಂಪಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನ 86 ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​, 12 ಬಂದ್​ !

ಅಕ್ಟೋಬರ್​ 18 ರಂದು ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಡ್​ಪೈಪ್ ಹುಕ್ಕಾ ಕೆಫೆ ಆರನೇ ಮಹಡಿಯಲ್ಲಿ 8 ರಿಂದ10 ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಸಿಂಗ್​ ಎಂಬುವರು ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದು, ಬಲಗೈ ಮೂಳೆ ಮುರಿದಿತ್ತು.

ಅಗ್ನಿಶಾಮಕ ಮತ್ತು ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕೆಫೆ ಮಾಲೀಕರಿಗೆ ಆಹಾರ ಪೂರೈಸಲು ಮಾತ್ರ ಪರವಾನಗಿ ನೀಡಲಾಗಿತ್ತು, ಆದರೆ ಅವರು ಗ್ರಾಹಕರಿಗೆ ಅಕ್ರಮವಾಗಿ ಹುಕ್ಕಾ ನೀಡುತ್ತಿರುವುದು ಕಂಡುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು