ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ: 10 ರೆಸ್ಟೋರೆಂಟ್‌ ಬಂದ್​

ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, 74 ಬಾರ್​, ಪಬ್​, ರೆಸ್ಟೋರೆಂಟ್​​ಗಳಿಗೆ ನೋಟಿಸ್ ನೀಡಲಾಗಿದೆ. ಇಲ್ಲಿಯವರೆಗೆ ನೀಡಲಾದ ಒಟ್ಟು ನೋಟಿಸ್‌ಗಳ ಸಂಖ್ಯೆ 327ಕ್ಕೆ ತಲುಪಿದೆ. ನೋಟಿಸ್ ಪಡೆದಿರುವ ಉದ್ದಿಮೆಗಳು ಸೂಚಿಸಿರುವ ಬದಲಾವಣೆಗಳನ್ನು ಪಾಲಿಸಬೇಕು ಎಂದು ಬಿಬಿಂಪಿ ಹೇಳಿದೆ.

ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ: 10 ರೆಸ್ಟೋರೆಂಟ್‌ ಬಂದ್​
ಬಿಬಿಎಂಪಿ
Follow us
|

Updated on: Oct 24, 2023 | 10:22 AM

ಬೆಂಗಳೂರು ಅ.24: ಕೋರಮಂಗಲದ (Kormangala) ಹುಕ್ಕಾ ಬಾರ್ ಮಡ್​​ಪೈಪ್ ಕೆಫೆಯಲ್ಲಿ ಅಗ್ನಿ ದುರಂತ (Fire Accident) ಸಂಭವಿಸಿದ ನಂತರ ಅಲರ್ಟ್ ಆದ ಬಿಬಿಎಂಪಿ (BBMP) ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್​, ಬಾರ್​​ ಮತ್ತು ರೆಸ್ಟೋರೆಂಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಶನಿವಾರ ಜೆಪಿ ನಗರದಲ್ಲಿರುವ ರೂಫ್‌ಟಾಪ್ ಕೆಫೆ ಸೇರಿದಂತೆ 10 ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದಾರೆ.

ಎಂಟು ವಲಯಗಳಲ್ಲಿ ಒಟ್ಟು 43 ಉದ್ದಿಮೆಗಳನ್ನು ಬಿಬಿಎಂಪಿಯ ಅಧಿಕಾರಿಗಳು ಮುಚ್ಚಿಸಿದ್ದಾರೆ. ಬಿಬಿಎಂಪಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಿದೆ. ಇದರಲ್ಲಿ ಇದುವರೆಗೆ 669 ಉದ್ದಮೆಗಳನ್ನು ತಪಾಸಣೆ ನಡೆಸಲಾಗಿದೆ. 157 ಉದ್ದಿಮೆಗಳು ಟ್ರೇಡ್ ಲೈಸೆನ್ಸ್ ಷರತ್ತುಗಳ ನಿಯಮಗಳನ್ನು ಉಲ್ಲಂಘನೆ ಮಾಡಿವೆ. ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, 74 ಉದ್ದಿಮೆಗಳಿಗೆ ನೋಟಿಸ್ ನೀಡಲಾಗಿದೆ. ಇಲ್ಲಿಯವರೆಗೆ ನೀಡಲಾದ ಒಟ್ಟು ನೋಟಿಸ್‌ಗಳ ಸಂಖ್ಯೆ 327ಕ್ಕೆ ತಲುಪಿದೆ. ನೋಟಿಸ್ ಪಡೆದಿರುವ ಉದ್ದಿಮೆಗಳು ಸೂಚಿಸಿರುವ ಬದಲಾವಣೆಗಳನ್ನು ಪಾಲಿಸಬೇಕು ಎಂದು ಬಿಬಿಎಂಪಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನ 86 ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​, 12 ಬಂದ್​ !

ಅಕ್ಟೋಬರ್​ 18 ರಂದು ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಡ್​ಪೈಪ್ ಹುಕ್ಕಾ ಕೆಫೆ ಆರನೇ ಮಹಡಿಯಲ್ಲಿ 8 ರಿಂದ10 ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಸಿಂಗ್​ ಎಂಬುವರು ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದು, ಬಲಗೈ ಮೂಳೆ ಮುರಿದಿತ್ತು.

ಅಗ್ನಿಶಾಮಕ ಮತ್ತು ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕೆಫೆ ಮಾಲೀಕರಿಗೆ ಆಹಾರ ಪೂರೈಸಲು ಮಾತ್ರ ಪರವಾನಗಿ ನೀಡಲಾಗಿತ್ತು, ಆದರೆ ಅವರು ಗ್ರಾಹಕರಿಗೆ ಅಕ್ರಮವಾಗಿ ಹುಕ್ಕಾ ನೀಡುತ್ತಿರುವುದು ಕಂಡುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ