AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಐವರು ಸಾವು

ಬೆಂಗಳೂರು ನಗರದ ನಗರ್ತಪೇಟೆಯಲ್ಲಿರುವ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಐವರು ಸಾವು
ಅಗ್ನಿ ಅವಘಡ
ಕಿರಣ್​ ಸೂರ್ಯ
| Edited By: |

Updated on:Aug 16, 2025 | 2:44 PM

Share

ಬೆಂಗಳೂರು, ಆಗಸ್ಟ್​ 16: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ (fire) ಅವಘಡದಲ್ಲಿ ಐವರು  ಸಾವನ್ನಪ್ಪಿರುವಂತಹ (death) ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ಸುರೇಶ್, ಮದನ್, ಸಂಗೀತಾ, ಮಕ್ಕಳಾದ ಮಿತೇಶ್, ವಿಹಾನ್ ಮೃತರು. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಸದ್ಯ ಮನೆಯಿಂದ ಮೃತದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.

ಅಗ್ನಿ ಅವಘಡದ ಕಟ್ಟಡದಲ್ಲಿ ಕುಟುಂಬ ವಾಸ

ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ. ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು: ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು

ಮೂರನೇ ಮಹಡಿಯಲ್ಲಿ ಕುಟುಂಬವೊಂದು ವಾಸವಿದೆ. ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್​​ ವಾಸವಿದ್ದರು. ಘಟನೆಯಲ್ಲಿ ಮದನ್ ಸಿಂಗ್ ಸಾವನ್ನಪ್ಪಿದ್ದು, ಉಳಿದ ಮೂವರು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕನೆ ಮಹಡಿಯಲ್ಲಿ ಸಣ್ಣದೊಂದು ರೂಮ್​ ಕೂಡ ಇದೆ.

ಮಾಜಿ ಶಾಸಕ ಆರ್.ವಿ.ದೇವರಾಜ್ ಹೇಳಿದ್ದಿಷ್ಟು 

ಇನ್ನು ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರ್.ವಿ.ದೇವರಾಜ್ ಭೇಟಿ ಬಳಿಕ ಹೇಳಿಕೆ ನೀಡಿದ್ದು, ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ಐವರು ಇರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯಗಳಿಂದ ಜನ ಬಂದು ಕಟ್ಟಡಗಳನ್ನು ಕಟ್ಟಿಕೊಳ್ಳುತ್ತಾರೆ. ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ದಟ್ಟ ಹೊಗೆ: ಶೋಧ ಕಾರ್ಯಕ್ಕೆ ಕಷ್ಟ

ಸದ್ಯ ಸ್ಥಳಕ್ಕೆ ಚಿಕ್ಕಪೇಟೆ ಶಾಸಕ‌ ಉದಯ್ ಗರುಡಾಚಾರ್ ಮತ್ತು ಪೂರ್ವ ವಿಭಾಗ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಟ್ಟಡದ ಬಳಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆಯಿಂದಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಗೂ ಕಷ್ಟವಾಗುತ್ತಿದೆ. ಪ್ಲಾಸ್ಟಿಕ್ ವಸ್ತು ಇರುವುದರಿಂದ ಕಟ್ಟಡದ ಒಳಗೆ ಹೊಗೆ ಆವರಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗೆ ಒಳಗೆ ಹೋಗಲಾಗುತ್ತಿಲ್ಲ. ಹಾಗಾಗಿ ಉಳಿದವರ ಶೋಧ ಕಾರ್ಯ ಕಷ್ಟವಾಗುತ್ತಿದೆ. ಇವರೆಗೆ ಎರಡು ಮೃತದೇಹಗಳು ಶಿಫ್ಟ್ ಮಾಡಲಾಗಿದೆ.

ಇಬ್ಬರು ಪುರುಷರ ಮೃತದೇಹ ಸಿಕ್ಕಿ: ಸೀಮಂತ್ ಕುಮಾರ್ 

ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಮುಂಜಾನೆ 3.30ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಬಂತು. ಈಗಾಗಲೇ ಇಬ್ಬರು ಪುರುಷರ ಮೃತದೇಹ ಸಿಕ್ಕಿದೆ. ನಾಪತ್ತೆಯಾದ ಇನ್ನೂ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ. ಕಟ್ಟಡದ ಬಾಗಿಲು ತೆಗೆಯಲು ಕಷ್ಟ ಆಗುತ್ತಿದೆ ಎಂದಿದ್ದಾರೆ.

ಇನ್ನು ಶನಿವಾರ ನಗರದ ಚಿನ್ನಯ್ಯನಪಾಳ್ಯದಲ್ಲಿನ ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಹಲವರಿಗೆ ಗಾಯಗಳಾಗಿದ್ದರೆ ಓರ್ವ ಬಾಲಕ ಮೃತಪಟ್ಟಿದ್ದ ಘಟನೆ ನಡೆದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:42 am, Sat, 16 August 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?