AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! ಅಗ್ನಿಶಾಮಕ ದಳಕ್ಕಿನ್ನು ರೋಬೋ ಬಲ

ಅಗ್ನಿ ಅವಘಡಗಳು ಸಂಭವಿಸಿದಾಗ ಅನೇಕ ಬಾರಿ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಲು ಸಾಧ್ಯವಾಗದೇ ಇರುವುದೇ ಅನಾಹುತವನ್ನು ತಡೆಯುವಲ್ಲಿ ಕಷ್ಟಕರವಾಗಿ ಪರಿಣಮಿಸುತ್ತದೆ. ಇಂಥ ಸಂದರ್ಭಗಳಲ್ಲಿ ಯಂತ್ರ ಮಾನವರಾದ ರೋಬೋಟ್​ಗಳು ನೆರವಾಗಬಲ್ಲವು.. ಹೀಗಾಗಿ ಇದರ ಪ್ರಯೋಜನ ಪಡೆಯಲು ರಾಜ್ಯ ಅಗ್ನಿಶಾಮಕದಳ ಮುಂದಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿಗೆ ಬೆಂಕಿ ನಂದಿಸಲು ರೋಬೋಟ್​ಗಳು ಬರಲಿವೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! ಅಗ್ನಿಶಾಮಕ ದಳಕ್ಕಿನ್ನು ರೋಬೋ ಬಲ
ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! (ಸಾಂದರ್ಭಿಕ ಚಿತ್ರ)
ಕಿರಣ್​ ಸೂರ್ಯ
| Edited By: |

Updated on: Jul 10, 2024 | 7:40 AM

Share

ಬೆಂಗಳೂರು, ಜುಲೈ 10: ಬೆಂಗಳೂರು ನಗರದಲ್ಲಿ ಸಾಕಷ್ಟು ಬಾರಿ ಅಗ್ನಿ ಅವಘಡಗಳು ಸಂಭವಿಸಿದಾಗ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಿರಿದಾದ ರಸ್ತೆಗಳು, ಗೋಡೌನ್, ಬೇಸ್‌ಮೆಂಟ್, ಬಹುಮಹಡಿಗಳು ಸೇರಿದಂತೆ ಕೆಲವು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲು ಕಷ್ಟಪಡಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ರೋಬೋಟ್ ಬಳಕೆ ಮಾಡಿಕೊಂಡು ಬೆಂಕಿ ನಂದಿಸಬಹುದು. ಸಿಬ್ಬಂದಿ ತೆರಳಲು ಸಾಧ್ಯವಾಗದಂಥ ಸ್ಥಳಗಳಿಗೆ ರಿಮೋಟ್ ಕಂಟ್ರೋಲ್ ರೋಬೋಟ್ ಬಳಸಿಕೊಂಡು ಬೆಂಕಿ ಕಾರ್ಯಾಚರಣೆ ಮಾಡಬಹುದಾಗಿದೆ. ಇದೀಗ ಬೆಂಗಳೂರು ಅಗ್ನಿಶಾಮಕ ದಳದವರೂ ಈ ಕಾರ್ಯಕ್ಕೆ ಮುಂದಾಗಿದ್ದಾರೆ.

1 ಕೋಟಿ ರೂ.ನಲ್ಲಿ 10 ರೋಬೋಟ್ ಖರೀದಿ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ರೋಬೋಟ್​​ಗಳನ್ನು ಖರೀದಿ ಮಾಡಲು ಅಗ್ನಿಶಾಮಕ ದಳ ಮುಂದಾಗಿದೆ. ಈಗಾಗಲೇ ದೆಹಲಿ, ಮುಂಬೈ, ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ಅಗ್ನಿ ಶಾಮಕ ದಳಗಳಲ್ಲಿ ರೋಬೋಟ್​​ಗಳಿದ್ದು ಅವು ದುರ್ಗಮ ಸ್ಥಳಗಳಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಕೂಡ ಆಗಿವೆ.

ರೋಬೋಟ್ ಸಿಬ್ಬಂದಿಯ ವಿಶೇಷವೇನು?

ಈ ರೋಬೋಟ್‌ನಲ್ಲಿ ಅಗ್ನಿ ನಿರೋಧಕ ಹೊದಿಕೆ, ವಾಟರ್ ಚೆಟ್, ಚಿಕ್ಕ ಗಾಲಿಗಳು, ಚೈನ್ ವ್ಯವಸ್ಥೆ ಇರಲಿದೆ. ಎಲೆಕ್ಟ್ರಾನಿಕ್ ಸರ್ವೈಲೆನ್ಸ್ ಕ್ಯಾಮರಾದ ಕಣ್ಣು ಇರಲಿದ್ದು, ಘಟನಾ ಸ್ಥಳದ ಚಿತ್ರವನ್ನು ಸೆರೆ ಹಿಡಿದು ಕಂಟ್ರೋಲ್ ಯೂನಿಟ್‌ಗೆ ರವಾನಿಸಲಿದೆ. ದಿಢೀರ್ ಅಗ್ನಿ ಅವಘಡಗಳ ವೇಳೆ ಹೆಚ್ಚಿನ ಜೀವಹಾನಿ ತಪ್ಪಿಸಲು ಹಾಗೂ ಸಿಬ್ಬಂದಿ ನಿಖರವಾಗಿ ಕಾರ್ಯನಿರ್ವಹಿಸಲು ಈ ರೋಬೋಟ್ ನೆರವಾಗಲಿದೆ.

ಇದನ್ನೂ ಓದಿ: ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ; ಶಿವಮೊಗ್ಗದಲ್ಲಿ ಮಹಿಳೆ ಸಾವು

ಈ ರೋಬೋಟ್​​ಗಳು ಸುಮಾರು 100 ಅಡಿ ದೂರದಿಂದ ನೀರು ಸಿಂಪಡಿಸುವ ಸಾಮರ್ಥ್ಯ ಹೊಂದಿವೆ. ಜೆಟ್ ಮುಖಾಂತರ ಕೇವಲ ನೀರು ಮಾತ್ರವಲ್ಲದೆ, ನೊರೆ, ವಿವಿಧ ದ್ರಾವಣಗಳನ್ನು ಸಿಂಪಡಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?