AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! ಅಗ್ನಿಶಾಮಕ ದಳಕ್ಕಿನ್ನು ರೋಬೋ ಬಲ

ಅಗ್ನಿ ಅವಘಡಗಳು ಸಂಭವಿಸಿದಾಗ ಅನೇಕ ಬಾರಿ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಲು ಸಾಧ್ಯವಾಗದೇ ಇರುವುದೇ ಅನಾಹುತವನ್ನು ತಡೆಯುವಲ್ಲಿ ಕಷ್ಟಕರವಾಗಿ ಪರಿಣಮಿಸುತ್ತದೆ. ಇಂಥ ಸಂದರ್ಭಗಳಲ್ಲಿ ಯಂತ್ರ ಮಾನವರಾದ ರೋಬೋಟ್​ಗಳು ನೆರವಾಗಬಲ್ಲವು.. ಹೀಗಾಗಿ ಇದರ ಪ್ರಯೋಜನ ಪಡೆಯಲು ರಾಜ್ಯ ಅಗ್ನಿಶಾಮಕದಳ ಮುಂದಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿಗೆ ಬೆಂಕಿ ನಂದಿಸಲು ರೋಬೋಟ್​ಗಳು ಬರಲಿವೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! ಅಗ್ನಿಶಾಮಕ ದಳಕ್ಕಿನ್ನು ರೋಬೋ ಬಲ
ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! (ಸಾಂದರ್ಭಿಕ ಚಿತ್ರ)
Kiran Surya
| Edited By: |

Updated on: Jul 10, 2024 | 7:40 AM

Share

ಬೆಂಗಳೂರು, ಜುಲೈ 10: ಬೆಂಗಳೂರು ನಗರದಲ್ಲಿ ಸಾಕಷ್ಟು ಬಾರಿ ಅಗ್ನಿ ಅವಘಡಗಳು ಸಂಭವಿಸಿದಾಗ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಿರಿದಾದ ರಸ್ತೆಗಳು, ಗೋಡೌನ್, ಬೇಸ್‌ಮೆಂಟ್, ಬಹುಮಹಡಿಗಳು ಸೇರಿದಂತೆ ಕೆಲವು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲು ಕಷ್ಟಪಡಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ರೋಬೋಟ್ ಬಳಕೆ ಮಾಡಿಕೊಂಡು ಬೆಂಕಿ ನಂದಿಸಬಹುದು. ಸಿಬ್ಬಂದಿ ತೆರಳಲು ಸಾಧ್ಯವಾಗದಂಥ ಸ್ಥಳಗಳಿಗೆ ರಿಮೋಟ್ ಕಂಟ್ರೋಲ್ ರೋಬೋಟ್ ಬಳಸಿಕೊಂಡು ಬೆಂಕಿ ಕಾರ್ಯಾಚರಣೆ ಮಾಡಬಹುದಾಗಿದೆ. ಇದೀಗ ಬೆಂಗಳೂರು ಅಗ್ನಿಶಾಮಕ ದಳದವರೂ ಈ ಕಾರ್ಯಕ್ಕೆ ಮುಂದಾಗಿದ್ದಾರೆ.

1 ಕೋಟಿ ರೂ.ನಲ್ಲಿ 10 ರೋಬೋಟ್ ಖರೀದಿ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ರೋಬೋಟ್​​ಗಳನ್ನು ಖರೀದಿ ಮಾಡಲು ಅಗ್ನಿಶಾಮಕ ದಳ ಮುಂದಾಗಿದೆ. ಈಗಾಗಲೇ ದೆಹಲಿ, ಮುಂಬೈ, ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ಅಗ್ನಿ ಶಾಮಕ ದಳಗಳಲ್ಲಿ ರೋಬೋಟ್​​ಗಳಿದ್ದು ಅವು ದುರ್ಗಮ ಸ್ಥಳಗಳಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಕೂಡ ಆಗಿವೆ.

ರೋಬೋಟ್ ಸಿಬ್ಬಂದಿಯ ವಿಶೇಷವೇನು?

ಈ ರೋಬೋಟ್‌ನಲ್ಲಿ ಅಗ್ನಿ ನಿರೋಧಕ ಹೊದಿಕೆ, ವಾಟರ್ ಚೆಟ್, ಚಿಕ್ಕ ಗಾಲಿಗಳು, ಚೈನ್ ವ್ಯವಸ್ಥೆ ಇರಲಿದೆ. ಎಲೆಕ್ಟ್ರಾನಿಕ್ ಸರ್ವೈಲೆನ್ಸ್ ಕ್ಯಾಮರಾದ ಕಣ್ಣು ಇರಲಿದ್ದು, ಘಟನಾ ಸ್ಥಳದ ಚಿತ್ರವನ್ನು ಸೆರೆ ಹಿಡಿದು ಕಂಟ್ರೋಲ್ ಯೂನಿಟ್‌ಗೆ ರವಾನಿಸಲಿದೆ. ದಿಢೀರ್ ಅಗ್ನಿ ಅವಘಡಗಳ ವೇಳೆ ಹೆಚ್ಚಿನ ಜೀವಹಾನಿ ತಪ್ಪಿಸಲು ಹಾಗೂ ಸಿಬ್ಬಂದಿ ನಿಖರವಾಗಿ ಕಾರ್ಯನಿರ್ವಹಿಸಲು ಈ ರೋಬೋಟ್ ನೆರವಾಗಲಿದೆ.

ಇದನ್ನೂ ಓದಿ: ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ; ಶಿವಮೊಗ್ಗದಲ್ಲಿ ಮಹಿಳೆ ಸಾವು

ಈ ರೋಬೋಟ್​​ಗಳು ಸುಮಾರು 100 ಅಡಿ ದೂರದಿಂದ ನೀರು ಸಿಂಪಡಿಸುವ ಸಾಮರ್ಥ್ಯ ಹೊಂದಿವೆ. ಜೆಟ್ ಮುಖಾಂತರ ಕೇವಲ ನೀರು ಮಾತ್ರವಲ್ಲದೆ, ನೊರೆ, ವಿವಿಧ ದ್ರಾವಣಗಳನ್ನು ಸಿಂಪಡಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ