
ಬೆಂಗಳೂರು, ಮೇ 9: ಬೆಂಗಳೂರಿನ (Bengaluru) ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೋಟೆಲ್ ಒಳಗೆ ಸಿಲುಕಿದ್ದವರನ್ನು ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ. ದುರದೃಷ್ಟವಶಾತ್, ಅತಿಯಾದ ಹೊಗೆ ಸೇವನೆಯಿಂದ ಅಸ್ವಸ್ಥರಾಗಿದ್ದ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ: ಹೆಂಡತಿ, ಮಕ್ಕಳನ್ನು ಕಳುಹಿಸಿಕೊಡಿ ಎಂದಿದ್ದಕ್ಕೆ ಅಳಿಯನಿಗೆ ಬೆಂಕಿ ಹಚ್ಚಿ ಕೊಲೆ! ಮಾವ, ಭಾವ ಅಂದರ್
ಅಗ್ನಿ ಅವಘಡ ಸಂಭವಿಸಿದಾಗ ಸಿಬ್ಬಂದಿ ಹೋಟೆಲ್ನ ಮೇಲಿನ ಮಹಡಿಯಲ್ಲಿ ಇದ್ದರು. ಬೆಂಕಿಯ ಜ್ವಾಲೆಗಳು ಜೋರಾಗಿ ಮೇಲಿನ ಫ್ಲೋರ್ಗೂ ತಗುಲಿದ್ದಲ್ಲದೆ, ದಟ್ಟ ಹೊಗೆ ಆವರಿಸಿತ್ತು. ಈ ವೇಳೆ, ಒಳಗೆ ಐವರು ಸಿಬ್ಬಂದಿ ವಾಸವಿದ್ದ ಜಾಗಕ್ಕೂ ಬೆಂಕಿ ಆವರಿಸಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:53 am, Sat, 9 May 26