AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಗ್ನಿ ದುರಂತ: ಲಾಡ್ಜ್​​ನ ಒಂದೇ ರೂಮಿನಲ್ಲಿದ್ದ ಯುವಕ-ಯುವತಿ ಸಜೀವ ದಹನ

ಬೆಂಗಳೂರಿನ ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿದ್ದ ಲಾಡ್ಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಗದಗ ಮೂಲದ ಯುವಕ ಮತ್ತು ಹುನಗುಂದ ಮೂಲದ ಯುವತಿ ಸಜೀವ ದಹನವಾಗಿರುವಂತಹ ಘಟನೆ ನಡೆದಿದೆ. ಸದ್ಯ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಅಗ್ನಿ ದುರಂತ: ಲಾಡ್ಜ್​​ನ ಒಂದೇ ರೂಮಿನಲ್ಲಿದ್ದ ಯುವಕ-ಯುವತಿ ಸಜೀವ ದಹನ
ಬೆಂಕಿ ಅನಾಹುತ
ಗಂಗಾಧರ​ ಬ. ಸಾಬೋಜಿ
|

Updated on:Oct 09, 2025 | 9:00 PM

Share

ಬೆಂಗಳೂರು, ಅಕ್ಟೋಬರ್​ 09: ಬೆಂಕಿ ಅನಾಹುತದಿಂದ (Fire accident) ಯುವಕ ಮತ್ತು ಯುವತಿ ಸಜೀವ ದಹನವಾಗಿರುವಂತಹ (death) ಘಟನೆ ಬೆಂಗಳೂರಿನ ಯಲಹಂಕದಲ್ಲಿರುವ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಲಾಡ್ಜ್​ನಲ್ಲಿ ನಡೆದಿದೆ. ಗದಗ ಮೂಲದ ಯುವಕ ರಮೇಶ್ ಮತ್ತು ಹುನಗುಂದ ಮೂಲದ ಕಾವೇರಿ ಬಡಿಗೇರ್ ಮೃತರು. ಸದ್ಯ ಇಬ್ಬರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಡೆದದ್ದೇನು?

ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್​​ನಲ್ಲಿದ್ದ ಲಾಡ್ಜ್​​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಯುವಕ ಮತ್ತು ಯುವತಿ ಲಾಡ್ಜ್​ನ ಒಂದೇ ರೂಮಿನಲ್ಲಿದ್ದರು. ಲಾಡ್ಜ್​ನ ಬಾತ್​ರೂಂ‌ ಒಳಗಡೆ ಯುವತಿ ಇದ್ದು, ಬಾಗಿಲು ಹಾಕಲಾಗಿತ್ತು. ಹೊಗೆ ಬಂದ ತಕ್ಷಣ ಯುವತಿಯೇ ಲಾಡ್ಜ್​​​ನವರಿಗೆ ಕರೆ ಮಾಡಿದ್ದಳು. ರೂಂ ಕೂಡ ಲಾಕ್ ಆಗಿತ್ತು. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬಂದು ಬಾಗಿಲು ಹೊಡೆದು ಒಳಹೋಗಿದ್ದಾರೆ. ಅಷ್ಟೊತ್ತಿಗಾಗಲೇ ಇಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ಮೂಡಲಗಿ: ಪತ್ನಿ ಕೊಂದು 2 ದಿನ ಶವದೊಂದಿಗೆ ಕಳೆದ ಪತಿ, ಕೊಲೆಗೆ ಅದೇ ಕಾರಣನಾ?

ಮೃತ ಯುವಕ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ರೆಸ್ಟೋರೆಂಟ್ ಸಮೀಪದ ಬಿಲ್ಡಿಂಗ್ ಸ್ಫಾನಲ್ಲಿ ಯುವತಿ ಕೆಲಸ‌ ಮಾಡುತ್ತಿದ್ದಳು. ರೆಸ್ಟೋರೆಂಟ್​ನ 3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ಮತ್ತು ಗ್ರಾಹಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ರಕ್ಷಣೆ ಕಾರ್ಯ ಮಾಡಲಾಗುತ್ತಿದೆ.

ಡಿಸಿಪಿ ಸಜೀತ್ ಹೇಳಿದ್ದಿಷ್ಟು

ಈ ಬಗ್ಗೆ ಬೆಂಗಳೂರು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಹೇಳಿಕೆ ನೀಡಿದ್ದು, ಯಲಹಂಕದ ಕಿಚನ್ 6 ರೆಸ್ಟೋರೆಂಟ್​​ನಲ್ಲಿ ಅವಘಡ ಸಂಭವಿಸಿದೆ. ಲಾಡ್ಜ್​​ನ 3ನೇ ಮಹಡಿಯ ರೂಮ್​​ನಲ್ಲಿದ್ದ ರಮೇಶ್ ಮತ್ತು ಕಾವೇರಿ ಬಡಿಗೇರ ಮೃತಪಟ್ಟಿದ್ದಾರೆ. ಆತ್ಮಹತ್ಯೆನಾ ಅಥವಾ ಏನು ಎಂದು ತನಿಖೆ ಮಾಡುತ್ತೇವೆ. ಇಬ್ಬರು ಕಳೆದ 1 ವಾರದಿಂದ ಲಾಡ್ಜ್​ನಲ್ಲಿದ್ದರು ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ರಮೇಶ್, ಕಾವೇರಿ ನಡುವೆ ಜಗಳವಾಗಿತ್ತು. ಮಧ್ಯಾಹ್ನ ಕಾವೇರಿ ರೂಮ್​ನಲ್ಲಿದ್ದರೆ, ರಮೇಶ್ ಹೊರಹೋಗಿದ್ದ. ರೂಮ್​ಗೆ ಹಿಂದಿರುಗುವಾಗ ಪೆಟ್ರೋಲ್ ತುಂಬಿದ್ದ ಬಾಟಲಿ ತಂದಿದ್ದ. ರೂಮ್​ನಲ್ಲಿ ರಮೇಶ್, ಕಾವೇರಿ ಮತ್ತೆ ಜಗಳವಾಡಿರುವ ಸಾಧ್ಯತೆ ಇದ್ದು, ಜಗಳ ವಿಕೋಪವಾಗಿ ರಮೇಶ್ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಾವೇರಿ ಬಾತ್​ರೂಮ್​ಗೆ ಓಡಿದ್ದಾಳೆ ಎಂದರು.

ಇದನ್ನೂ ಓದಿ: ಚಡಚಣ SBI ದರೋಡೆ ಕೇಸ್​: 3 ಆರೋಪಿಗಳ ಬಂಧನ; 9 ಕೆ.ಜಿ. ಚಿನ್ನ, 86 ಲಕ್ಷ ರೂ. ನಗದು ರಿಕವರಿ

ಬಾತ್​ರೂಮ್ ಡೋರ್ ಲಾಕ್ ಮಾಡಿಕೊಂಡಿದ್ದ ಕಾವೇರಿ, ತನ್ನ ಸ್ಪಾ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಳು. ಅಷ್ಟೊತ್ತಿಗಾಗಲೇ ಬೆಂಕಿ ಕೆನ್ನಾಲಿಗೆ ಇಡೀ ರೂಮ್​ಗೆ ವ್ಯಾಪಿಸಿತ್ತು. ಬೆಂಕಿ ಜ್ವಾಲೆಯಲ್ಲಿ ಸಿಲುಕಿ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೊಗೆಯಿಂದ ಉಸಿರುಗಟ್ಟಿ ಕಾವೇರಿ ಕೂಡ ಮೃತಪಟ್ಟಿದ್ದಾಳೆ. ಸದ್ಯ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ಡಿಸಿಪಿ ವಿ.ಜೆ.ಸಜೀತ್ ಹೇಳಿದ್ದಾರೆ.

ವರದಿ: ಪ್ರದೀಪ್​​ ಚಿಕ್ಕಾಟೆ ಕ್ರೈಂ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:51 pm, Thu, 9 October 25

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು