AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ ಸಿಐಡಿಗೆ, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್​ ಅಗ್ನಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು. ಮೃತರ ಕುಟಂಬಸ್ಥರಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ ಸಿಐಡಿಗೆ, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಸಿಎಂ ಸಿದ್ದರಾಮಯ್ಯ
TV9 Web
| Updated By: ವಿವೇಕ ಬಿರಾದಾರ|

Updated on:Oct 08, 2023 | 2:42 PM

Share

ಬೆಂಗಳೂರು ಅ.08: ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿನ (Attibele) ಪಟಾಕಿ ಗೋಡೌನ್​ (Firecrackers Godown) ಅಗ್ನಿ ದುರಂತ (Explosion) ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಅಗ್ನಿಶಾಮಕ ಡಿಜಿ ಕಮಲ್​​ ಪಂತ್ ಅವರ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್​ ಅಗ್ನಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು. ಮೃತರ ಕುಟಂಬಸ್ಥರಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಶನಿವಾರ ಮಧ್ಯಾಹ್ನ 3.15ರಿಂದ 3.30ರ ನಡುವೆ ಘಟನೆ ನಡೆದಿದೆ. ತಮಿಳುನಾಡಿನಿಂದ ಟ್ರಕ್​​ನಲ್ಲಿ ಪಟಾಕಿಯನ್ನು ತರಲಾಗಿದೆ. ಅಗ್ನಿ ದುರಂತಕ್ಕೆ ಕಾರಣ ಏನೂ ಅಂತ ತಿಳಿದುಬಂದಿಲ್ಲ. ವಿದ್ಯುತ್​ ತಂತಿ ಅಥವಾ ಯುಪಿಎಸ್​​ನಿಂದ ಘಟನೆ ನಡೆದಿರುವ ಮಾಹಿತಿ ದೊರೆತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಗೋಡೌನ್​ನಲ್ಲಿ ಸುರಕ್ಷತಾ ಕ್ರಮ ಇಲ್ಲದಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದರು.

ಇದನ್ನೂ ಓದಿ: ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಡಿಕೆ ಶಿವಕುಮಾರ್​​ ಸೂಚನೆ

ಅಲ್ಲಿ ಕೆಲಸ ಮಾಡುತ್ತಿದ್ದವರು ಎಲ್ಲರೂ ವಿಧ್ಯಾರ್ಥಿಗಳು. ರಜೆ ಸಮಯದಲ್ಲಿ ದುಡಿಮೆಗೆ ಇಲ್ಲಿಗೆ ಬಂದಿದ್ದಾರೆ. ಘಟನೆ ನಡೆದಿರುವುದು ದುಃಖಕರ ಸಂಗತಿ. ಪ್ರಕರಣ ಸಂಬಂಧ ಪಟಾಕಿ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್​ ಮತ್ತು ಕಟ್ಟಡದ ಮಾಲೀಕ ಅನಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗೋಡೌನ್​​ನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪಟಾಕಿ ಮಾರಾಟ ಮಾಡಲು ಹಾಗೂ ಸಂಗ್ರಹಿಸಲು ಎರಡಕ್ಕೂ ಲೈಸೆನ್ಸ್  ಇದೆಯಾ? ಎಂಬುವುದನ್ನು ಪರಿಶೀಲಿಸಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್ ಮತ್ತು ಶಾಸಕ ಎಸ್​.ಟಿ.ಸೋಮಶೇಖರ್​ ಸೇರಿದಂತೆ ಹಲವರು ಸಾಥ್ ನೀಡಿದರು. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Sun, 8 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ