AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳ ನಾಶ

ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಆವತಿ ಪ್ರದೇಶದ ಬಳಿ ಪೊಲೀಸರಿಗೆ ಸೇರಿದ ನಿರ್ಜನ ಪ್ರದೇಶದಲ್ಲಿ ನಾಶ ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಐಎಸ್​ಡಿ ಅಧಿಕಾರಿಗಳ ಜೊತೆ ಸೇರಿ ಸಿಸಿಬಿ ಪೊಲೀಸರಿಂದ ನಾಶ ಮಾಡಲಾಗಿದೆ.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳ ನಾಶ
ಗ್ರೆನೇಡ್​ಗಳನ್ನು ನಾಶ ಮಾಡಿದ ಸ್ಥಳ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on: Oct 20, 2023 | 7:29 PM

ಬೆಂಗಳೂರು, ಅಕ್ಟೋಬರ್​​​​​ 20: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳನ್ನು (grenades) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಆವತಿ ಪ್ರದೇಶದ ಬಳಿ ಪೊಲೀಸರಿಗೆ ಸೇರಿದ ನಿರ್ಜನ ಪ್ರದೇಶದಲ್ಲಿ ನಾಶ ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಐಎಸ್​ಡಿ ಅಧಿಕಾರಿಗಳ ಜೊತೆ ಸೇರಿ ಸಿಸಿಬಿ ಪೊಲೀಸರಿಂದ ನಾಶ ಮಾಡಲಾಗಿದೆ. ಜು.9ರಂದು ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸೈಯದ್ ಸುಹೇಲ್, ಉಮರ್, ಮುದಾಸಿರ್, ಜಾಹಿದ್ ಬಂಧಿತರು.

ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸುವ ಮೂಲಕ ಪಿಸ್ತೂಲ್, 4 ವಾಕಿಟಾಕಿ, ಫೋನ್, 5 ಜೀವಂತ ಗ್ರೆನೇಡ್ ಪತ್ತೆಯಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

ಶಂಕಿತ ಉಗ್ರನ ಮನೆ ಬೀರುವಿನಲ್ಲಿ 4 ಜೀವಂತ ಹ್ಯಾಂಡ್ ಗ್ರೆನೇಡ್​ಗಳು ಪತ್ತೆಯಾಗಿದ್ದವು. ಬೆಂಗಳೂರಿನ ಕೊಡಿಗೆಹಳ್ಳಿಯ ನಿವಾಸಿ ಜಾಹಿದ್ ತಬ್ರೇಜ್ ಸತ್ಯ ಬಾಯಿಬಿಟ್ಟಿದ್ದ. ಭದ್ರಪ್ಪ ಲೇಔಟ್​ನ ಮನೆಯ ರೂಮ್​​ನಲ್ಲಿ 4 ಗ್ರೆನೇಡ್ ಬಟ್ಟೆಯಲ್ಲಿ ಸುತ್ತಿ ಬೀರುವಿನಲ್ಲಿ ಇಟ್ಟಿದ. 4 ಹ್ಯಾಂಡ್ ಗ್ರೆನೇಡ್​ನ್ನ ಮಾಸ್ಟರ್​ಮೈಂಡ್ ಜುನೈದ್​ ಪಾರ್ಸೆಲ್ ಕಳಿಸಿದ್ದ ಎನ್ನಲಾಗಿತ್ತು.

ಜು 11ರಂದು ಗ್ರೆನೇಡ್ ಎಂಟನೇ ಶಂಕಿತ ಉಗ್ರ ಗ್ರೆನೇಡ್ ಪೂರೈಸಿದ್ದ. ನೆಲಮಂಗಲ ಟೋಲ್​ ಬಳಿ ಕಾರಲ್ಲಿ ತೆರಳಿ ಜಾಹಿದ್ ತಬ್ರೇಜ್ ಗ್ರೆನೇಡ್ ಪಡೆದಿದ್ದ. ಸೇಫ್ ಆಗಿ ಮನೆಯಲ್ಲಿ ಇಡುವಂತೆ ತಬ್ರೇಜ್​ಗೆ ಜುನೈದ್ ಸೂಚಿಸಿದ್ದ ಅನ್ನೋದ ಗೊತ್ತಾಗಿತ್ತು. ಕೆಲವೇ ದಿನದಲ್ಲಿ ಗ್ರೆನೇಡ್ ಸ್ಫೋಟಕ್ಕೆ ಸಂಚು ಹಾಕಿದ್ದರು ಎನ್ನಲಾಗಿತ್ತು. ಶಂಕಿತ ಉಗ್ರ ತಬ್ರೇಜ್ ಮನೆ ಮೇಲೆ ದಾಳಿ ಮಾಡಿದ್ದ ಸಿಸಿಬಿ 4 ಜೀವಂತ ಹ್ಯಾಂಡ್​ ಗ್ರೆನೇಡ್​ಗಳನ್ನ ವಶಕ್ಕೆ ಪಡೆದಿತ್ತು.

ಇದನ್ನೂ ಓದಿ: Bengaluru: ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಾಥಮಿಕ ತನಿಖಾ ವರದಿಯನ್ನ ಕೇಂದ್ರಕ್ಕೆ ಕಳುಹಿಸಿದ ಸಿಸಿಬಿ

ಸಿಸಿಬಿ ಪೊಲೀಸರು ಶಂಕಿತ ಉಗ್ರರ ಕಳೆದ ಎರಡು ವರ್ಷಗಳ ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರು ಈವರೆಗೆ ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದರು ಎಂದು ಯುಎಪಿಎ ಸೆಕ್ಷನ್ ಅಡಿಯಲ್ಲಿ ಎರಡು ವರ್ಷಗಳ ಸಿಡಿಆರ್ ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಅಲ್ಲದೆ ಈಗಾಗಲೇ ಕೆಲವರು ಸಿಮ್ ಬದಲಿಸಿ ಹೊಸ ಸಿಮ್​ಗಳ ಖರೀದಿ ಮಾಡಿದ್ದಾರೆ. ಈ ಹೊಸ ಸಿಮ್​ನಲ್ಲಿ ಯಾರಿಗೆಲ್ಲಾ ಕರೆ ಮಾಡಿದ್ದಾರೆ ಎಂದು ಸಿಸಿಬಿ ತನಿಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಭಾರಿ ಮಳೆ, ಕಾರವಾರ ಕೆಎಸ್ಆರ್​ಟಿಸಿ ಡಿಪೋ ಜಲಾವೃತ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ