AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳ ನಾಶ

ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಆವತಿ ಪ್ರದೇಶದ ಬಳಿ ಪೊಲೀಸರಿಗೆ ಸೇರಿದ ನಿರ್ಜನ ಪ್ರದೇಶದಲ್ಲಿ ನಾಶ ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಐಎಸ್​ಡಿ ಅಧಿಕಾರಿಗಳ ಜೊತೆ ಸೇರಿ ಸಿಸಿಬಿ ಪೊಲೀಸರಿಂದ ನಾಶ ಮಾಡಲಾಗಿದೆ.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳ ನಾಶ
ಗ್ರೆನೇಡ್​ಗಳನ್ನು ನಾಶ ಮಾಡಿದ ಸ್ಥಳ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 20, 2023 | 7:29 PM

Share

ಬೆಂಗಳೂರು, ಅಕ್ಟೋಬರ್​​​​​ 20: ಐವರು ಶಂಕಿತ ಉಗ್ರರ ಬಂಧನ ವೇಳೆ ಸಿಕ್ಕಿದ್ದ 5 ಗ್ರೆನೇಡ್​ಗಳನ್ನು (grenades) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಆವತಿ ಪ್ರದೇಶದ ಬಳಿ ಪೊಲೀಸರಿಗೆ ಸೇರಿದ ನಿರ್ಜನ ಪ್ರದೇಶದಲ್ಲಿ ನಾಶ ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಐಎಸ್​ಡಿ ಅಧಿಕಾರಿಗಳ ಜೊತೆ ಸೇರಿ ಸಿಸಿಬಿ ಪೊಲೀಸರಿಂದ ನಾಶ ಮಾಡಲಾಗಿದೆ. ಜು.9ರಂದು ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸೈಯದ್ ಸುಹೇಲ್, ಉಮರ್, ಮುದಾಸಿರ್, ಜಾಹಿದ್ ಬಂಧಿತರು.

ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸುವ ಮೂಲಕ ಪಿಸ್ತೂಲ್, 4 ವಾಕಿಟಾಕಿ, ಫೋನ್, 5 ಜೀವಂತ ಗ್ರೆನೇಡ್ ಪತ್ತೆಯಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

ಶಂಕಿತ ಉಗ್ರನ ಮನೆ ಬೀರುವಿನಲ್ಲಿ 4 ಜೀವಂತ ಹ್ಯಾಂಡ್ ಗ್ರೆನೇಡ್​ಗಳು ಪತ್ತೆಯಾಗಿದ್ದವು. ಬೆಂಗಳೂರಿನ ಕೊಡಿಗೆಹಳ್ಳಿಯ ನಿವಾಸಿ ಜಾಹಿದ್ ತಬ್ರೇಜ್ ಸತ್ಯ ಬಾಯಿಬಿಟ್ಟಿದ್ದ. ಭದ್ರಪ್ಪ ಲೇಔಟ್​ನ ಮನೆಯ ರೂಮ್​​ನಲ್ಲಿ 4 ಗ್ರೆನೇಡ್ ಬಟ್ಟೆಯಲ್ಲಿ ಸುತ್ತಿ ಬೀರುವಿನಲ್ಲಿ ಇಟ್ಟಿದ. 4 ಹ್ಯಾಂಡ್ ಗ್ರೆನೇಡ್​ನ್ನ ಮಾಸ್ಟರ್​ಮೈಂಡ್ ಜುನೈದ್​ ಪಾರ್ಸೆಲ್ ಕಳಿಸಿದ್ದ ಎನ್ನಲಾಗಿತ್ತು.

ಜು 11ರಂದು ಗ್ರೆನೇಡ್ ಎಂಟನೇ ಶಂಕಿತ ಉಗ್ರ ಗ್ರೆನೇಡ್ ಪೂರೈಸಿದ್ದ. ನೆಲಮಂಗಲ ಟೋಲ್​ ಬಳಿ ಕಾರಲ್ಲಿ ತೆರಳಿ ಜಾಹಿದ್ ತಬ್ರೇಜ್ ಗ್ರೆನೇಡ್ ಪಡೆದಿದ್ದ. ಸೇಫ್ ಆಗಿ ಮನೆಯಲ್ಲಿ ಇಡುವಂತೆ ತಬ್ರೇಜ್​ಗೆ ಜುನೈದ್ ಸೂಚಿಸಿದ್ದ ಅನ್ನೋದ ಗೊತ್ತಾಗಿತ್ತು. ಕೆಲವೇ ದಿನದಲ್ಲಿ ಗ್ರೆನೇಡ್ ಸ್ಫೋಟಕ್ಕೆ ಸಂಚು ಹಾಕಿದ್ದರು ಎನ್ನಲಾಗಿತ್ತು. ಶಂಕಿತ ಉಗ್ರ ತಬ್ರೇಜ್ ಮನೆ ಮೇಲೆ ದಾಳಿ ಮಾಡಿದ್ದ ಸಿಸಿಬಿ 4 ಜೀವಂತ ಹ್ಯಾಂಡ್​ ಗ್ರೆನೇಡ್​ಗಳನ್ನ ವಶಕ್ಕೆ ಪಡೆದಿತ್ತು.

ಇದನ್ನೂ ಓದಿ: Bengaluru: ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಾಥಮಿಕ ತನಿಖಾ ವರದಿಯನ್ನ ಕೇಂದ್ರಕ್ಕೆ ಕಳುಹಿಸಿದ ಸಿಸಿಬಿ

ಸಿಸಿಬಿ ಪೊಲೀಸರು ಶಂಕಿತ ಉಗ್ರರ ಕಳೆದ ಎರಡು ವರ್ಷಗಳ ಕರೆಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರು ಈವರೆಗೆ ಯಾರ ಯಾರ ಜೊತೆ ಸಂಪರ್ಕ ಹೊಂದಿದ್ದರು ಎಂದು ಯುಎಪಿಎ ಸೆಕ್ಷನ್ ಅಡಿಯಲ್ಲಿ ಎರಡು ವರ್ಷಗಳ ಸಿಡಿಆರ್ ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಅಲ್ಲದೆ ಈಗಾಗಲೇ ಕೆಲವರು ಸಿಮ್ ಬದಲಿಸಿ ಹೊಸ ಸಿಮ್​ಗಳ ಖರೀದಿ ಮಾಡಿದ್ದಾರೆ. ಈ ಹೊಸ ಸಿಮ್​ನಲ್ಲಿ ಯಾರಿಗೆಲ್ಲಾ ಕರೆ ಮಾಡಿದ್ದಾರೆ ಎಂದು ಸಿಸಿಬಿ ತನಿಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ