AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Floods: ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗವನ್ನು ಸ್ಥಾಪಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

Bengaluru Floods: ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.

Bengaluru Floods: ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗವನ್ನು ಸ್ಥಾಪಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
Bengaluru Flood
TV9 Web
| Edited By: |

Updated on: Sep 07, 2022 | 3:59 PM

Share

ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನಿವಾಸಿಗಳ ಕುಂದುಕೊರತೆಯನ್ನು ಆಲಿಸಲು ಪ್ರತಿ ವಾರ್ಡ್​ನಲ್ಲೂ ಕುಂದುಕೊರತೆ ವಿಭಾಗವನ್ನು ಸ್ಥಾಪಿಸುವಂತೆ ಕರ್ನಾಟಕ ಹೈಕೋರ್ಟ್​ ಬಿಬಿಎಂಪಿಗೆ ಸೂಚನೆ ನೀಡಿದೆ.

ಬುಧವಾರ ಹೊರಡಿಸಿದ ಆದೇಶದಲ್ಲಿ ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿ ವಿಭಾಗವನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. ಪ್ರತಿ ವಿಭಾಗದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಎಂಜಿನಿಯರ್ ಇರುತ್ತಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿವಾಸಿಗಳ ಕುಂದುಕೊರತೆಗಳನ್ನು ನಿಭಾಯಿಸಲು ಪ್ರತಿ ವಾರ್ಡ್‌ನಲ್ಲಿರುವ ವಾರ್ಡ್ ಎಂಜಿನಿಯರ್‌ಗೆ ಸೂಚಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ನಿವಾಸಿಗಳ ಕುಂದುಕೊರತೆಗಳನ್ನು ಆಲಿಸುವ ಮತ್ತು ವ್ಯವಸ್ಥಿತ ನೀರಿನ ಹರಿವು ನಿರ್ವಹಿಸಲು ಪ್ರತಿ ವಾರ್ಡ್‌ಗೆ ಎಂಜಿನಿಯರ್‌ಗಳ ತಂಡವನ್ನು ಸ್ಥಾಪಿಸಲು ಸೂಚಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ಸೂಚಿಸಿದೆ.

ಪ್ರಸ್ತಾವನೆಯನ್ನು ತ್ವರಿತಗೊಳಿಸುವಂತೆ ಮತ್ತು ರಾಜ್ಯ ಸರ್ಕಾರದ ಅನುಮೋದನೆಯನ್ನು ಶೀಘ್ರವಾಗಿ ಪಡೆಯುವಂತೆ ನಾಗರಿಕ ಸಂಸ್ಥೆಗೆ ನಿರ್ದೇಶನ ನೀಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ನ್ಯಾಯಾಲಯದ ವಿಭಾಗೀಯ ಪೀಠವು ಬಿಬಿಎಂಪಿಯು ರಸ್ತೆಗಳ ಕಳಪೆ ನಿರ್ವಹಣೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಬಿಬಿಎಂಪಿ ವಕೀಲರು ನಗರದಲ್ಲಿ ಪ್ರವಾಹ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಬೆಂಗಳೂರಿನ ಎಲ್ಲಾ ಕೆರೆಗಳಿಗೆ ಸ್ಲೂಸ್ ಗೇಟ್ ಅಳವಡಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ತತ್‌ಕ್ಷಣದ ಕ್ರಮವಾಗಿ, ಪಂಪ್‌ಗಳನ್ನು ಬಳಸಿ ಜಲಾವೃತ ಪ್ರದೇಶಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ