AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Floods: ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗವನ್ನು ಸ್ಥಾಪಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

Bengaluru Floods: ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.

Bengaluru Floods: ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗವನ್ನು ಸ್ಥಾಪಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
Bengaluru Flood
TV9 Web
| Edited By: |

Updated on: Sep 07, 2022 | 3:59 PM

Share

ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನಿವಾಸಿಗಳ ಕುಂದುಕೊರತೆಯನ್ನು ಆಲಿಸಲು ಪ್ರತಿ ವಾರ್ಡ್​ನಲ್ಲೂ ಕುಂದುಕೊರತೆ ವಿಭಾಗವನ್ನು ಸ್ಥಾಪಿಸುವಂತೆ ಕರ್ನಾಟಕ ಹೈಕೋರ್ಟ್​ ಬಿಬಿಎಂಪಿಗೆ ಸೂಚನೆ ನೀಡಿದೆ.

ಬುಧವಾರ ಹೊರಡಿಸಿದ ಆದೇಶದಲ್ಲಿ ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿ ವಿಭಾಗವನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. ಪ್ರತಿ ವಿಭಾಗದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಎಂಜಿನಿಯರ್ ಇರುತ್ತಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿವಾಸಿಗಳ ಕುಂದುಕೊರತೆಗಳನ್ನು ನಿಭಾಯಿಸಲು ಪ್ರತಿ ವಾರ್ಡ್‌ನಲ್ಲಿರುವ ವಾರ್ಡ್ ಎಂಜಿನಿಯರ್‌ಗೆ ಸೂಚಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ನಿವಾಸಿಗಳ ಕುಂದುಕೊರತೆಗಳನ್ನು ಆಲಿಸುವ ಮತ್ತು ವ್ಯವಸ್ಥಿತ ನೀರಿನ ಹರಿವು ನಿರ್ವಹಿಸಲು ಪ್ರತಿ ವಾರ್ಡ್‌ಗೆ ಎಂಜಿನಿಯರ್‌ಗಳ ತಂಡವನ್ನು ಸ್ಥಾಪಿಸಲು ಸೂಚಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ಸೂಚಿಸಿದೆ.

ಪ್ರಸ್ತಾವನೆಯನ್ನು ತ್ವರಿತಗೊಳಿಸುವಂತೆ ಮತ್ತು ರಾಜ್ಯ ಸರ್ಕಾರದ ಅನುಮೋದನೆಯನ್ನು ಶೀಘ್ರವಾಗಿ ಪಡೆಯುವಂತೆ ನಾಗರಿಕ ಸಂಸ್ಥೆಗೆ ನಿರ್ದೇಶನ ನೀಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ನ್ಯಾಯಾಲಯದ ವಿಭಾಗೀಯ ಪೀಠವು ಬಿಬಿಎಂಪಿಯು ರಸ್ತೆಗಳ ಕಳಪೆ ನಿರ್ವಹಣೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಬಿಬಿಎಂಪಿ ವಕೀಲರು ನಗರದಲ್ಲಿ ಪ್ರವಾಹ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಬೆಂಗಳೂರಿನ ಎಲ್ಲಾ ಕೆರೆಗಳಿಗೆ ಸ್ಲೂಸ್ ಗೇಟ್ ಅಳವಡಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ತತ್‌ಕ್ಷಣದ ಕ್ರಮವಾಗಿ, ಪಂಪ್‌ಗಳನ್ನು ಬಳಸಿ ಜಲಾವೃತ ಪ್ರದೇಶಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ