AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Floods: ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗವನ್ನು ಸ್ಥಾಪಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

Bengaluru Floods: ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.

Bengaluru Floods: ಪ್ರತಿ ವಾರ್ಡ್‌ನಲ್ಲೂ ನಿವಾಸಿಗಳ ಕುಂದುಕೊರತೆ ವಿಭಾಗವನ್ನು ಸ್ಥಾಪಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
Bengaluru Flood
TV9 Web
| Edited By: |

Updated on: Sep 07, 2022 | 3:59 PM

Share

ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನಿವಾಸಿಗಳ ಕುಂದುಕೊರತೆಯನ್ನು ಆಲಿಸಲು ಪ್ರತಿ ವಾರ್ಡ್​ನಲ್ಲೂ ಕುಂದುಕೊರತೆ ವಿಭಾಗವನ್ನು ಸ್ಥಾಪಿಸುವಂತೆ ಕರ್ನಾಟಕ ಹೈಕೋರ್ಟ್​ ಬಿಬಿಎಂಪಿಗೆ ಸೂಚನೆ ನೀಡಿದೆ.

ಬುಧವಾರ ಹೊರಡಿಸಿದ ಆದೇಶದಲ್ಲಿ ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿ ವಿಭಾಗವನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. ಪ್ರತಿ ವಿಭಾಗದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಎಂಜಿನಿಯರ್ ಇರುತ್ತಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ನಿವಾಸಿಗಳ ಕುಂದುಕೊರತೆಗಳನ್ನು ನಿಭಾಯಿಸಲು ಪ್ರತಿ ವಾರ್ಡ್‌ನಲ್ಲಿರುವ ವಾರ್ಡ್ ಎಂಜಿನಿಯರ್‌ಗೆ ಸೂಚಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ನಿವಾಸಿಗಳ ಕುಂದುಕೊರತೆಗಳನ್ನು ಆಲಿಸುವ ಮತ್ತು ವ್ಯವಸ್ಥಿತ ನೀರಿನ ಹರಿವು ನಿರ್ವಹಿಸಲು ಪ್ರತಿ ವಾರ್ಡ್‌ಗೆ ಎಂಜಿನಿಯರ್‌ಗಳ ತಂಡವನ್ನು ಸ್ಥಾಪಿಸಲು ಸೂಚಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ಸೂಚಿಸಿದೆ.

ಪ್ರಸ್ತಾವನೆಯನ್ನು ತ್ವರಿತಗೊಳಿಸುವಂತೆ ಮತ್ತು ರಾಜ್ಯ ಸರ್ಕಾರದ ಅನುಮೋದನೆಯನ್ನು ಶೀಘ್ರವಾಗಿ ಪಡೆಯುವಂತೆ ನಾಗರಿಕ ಸಂಸ್ಥೆಗೆ ನಿರ್ದೇಶನ ನೀಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ನ್ಯಾಯಾಲಯದ ವಿಭಾಗೀಯ ಪೀಠವು ಬಿಬಿಎಂಪಿಯು ರಸ್ತೆಗಳ ಕಳಪೆ ನಿರ್ವಹಣೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಬಿಬಿಎಂಪಿ ವಕೀಲರು ನಗರದಲ್ಲಿ ಪ್ರವಾಹ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಬೆಂಗಳೂರಿನ ಎಲ್ಲಾ ಕೆರೆಗಳಿಗೆ ಸ್ಲೂಸ್ ಗೇಟ್ ಅಳವಡಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ತತ್‌ಕ್ಷಣದ ಕ್ರಮವಾಗಿ, ಪಂಪ್‌ಗಳನ್ನು ಬಳಸಿ ಜಲಾವೃತ ಪ್ರದೇಶಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!