AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಫ್ಲೈಓವರ್‌ ಮೇಲೆ ಮೊಳೆಗಳ ರಾಶಿ, ಇದು ಪಂಚರ್​​​ ಗ್ಯಾಂಗ್​​ಗಳ ಕೈಚಳಕ

ಮಂದರಗಿರಿ ಬೆಟ್ಟದ ಬಳಿಯ ಬೆಂಗಳೂರಿನ ಫ್ಲೈಓವರ್‌ನಲ್ಲಿ ಭಾರೀ ದೊಡ್ಡ ವಂಚನೆ ಜಾಲವೊಂದು ಪತ್ತೆಯಾಗಿದೆ. ಜನರಿಂದ ಹೇಗೆಲ್ಲ ವಸೂಲಿ ಮಾಡಬಹುದು ಎಂಬುದನ್ನು ಈ ವಿಡಿಯೋ ನೋಡಿದ ಮೇಲೆ ತಿಳಿಯುತ್ತದೆ. ಈ ವಿಡಿಯೋದಲ್ಲಿ ಫ್ಲೈಓವರ್‌ ಮೇಲೆ ರಸ್ತೆಯೂದ್ದಕ್ಕೂ ಮೊಳೆಗಳನ್ನು ಹಾಕಿರುವುದನ್ನು ತೋರಿಸಲಾಗಿದೆ. ರಸ್ತೆಗಳ ಮೇಲೆ ಮೊಳೆಗಳನ್ನು ಹಾಕಿ, ವಾಹನಗಳನ್ನು ಪಂಚರ್​​ ಮಾಡುವುದೇ ಇವರ ಉದ್ದೇಶವಾಗಿದೆ. ಪಂಚರ್​​ ಮಾಡಿದ ನಂತರ ಏನು ಮಾಡುತ್ತಾರೆ ಎಂಬ ಬಗ್ಗೆ ಇಲ್ಲಿದೆ ನೋಡಿ.

ಬೆಂಗಳೂರಿನ ಫ್ಲೈಓವರ್‌ ಮೇಲೆ ಮೊಳೆಗಳ ರಾಶಿ, ಇದು ಪಂಚರ್​​​ ಗ್ಯಾಂಗ್​​ಗಳ ಕೈಚಳಕ
ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Oct 07, 2025 | 5:00 PM

Share

ಬೆಂಗಳೂರು, ಅ.7: ಬೆಂಗಳೂರಿನ ಫ್ಲೈಓವರ್‌ನಲ್ಲಿ (Bengaluru flyover scam) ನಡೆದ ಒಂದು ಅಘಾತಕಾರಿ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇದೀಗ ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ಮಂದರಗಿರಿ ಬೆಟ್ಟದ ಬಳಿಯ ಬೆಂಗಳೂರಿನ ಫ್ಲೈಓವರ್‌ನಲ್ಲಿ ಈ ಘಟನೆ ನಡೆದಿದೆ. ಇದೀಗ ಇದರಿಂದ ವಾಹನ ಸವಾರರಿಗೆ ಸುರಕ್ಷತಾ ಕಳವಳವನ್ನುಂಟು ಮಾಡಿದೆ. ಪ್ರವಾಸ ಮುಗಿಸಿ, ಐಕಿಯಾ ಶೋ ರೂಂ ಮುಂಭಾಗದ ಫ್ಲೈಓವರ್ ಬಳಿಯ ರಸ್ತೆಯಲ್ಲಿ ಬರಬೇಕಾದರೆ ರಸ್ತೆಯ ಮೇಲೆ ಭಾರೀ ಪ್ರಮಾಣದ ಮೊಳೆಗಳು ಬಿದ್ದದರಿಂದ ಬೈಕ್ ಟೈರ್ ಪಂಚರ್​ ಆಗಿದೆ. ಸವಾರರ ಬಳಿ ಬಿಡಿ ಟ್ಯೂಬ್ ಇತ್ತು. ತಕ್ಷಣ ಬದಲಾವಣೆ ಮಾಡಿ ಮುಂದಕ್ಕೆ ಸಾಗಿದ್ದಾರೆ. ಆದರೆ ಮುಂದಕ್ಕೆ ಹೋಗುತ್ತಿದ್ದಂತೆ  ರಸ್ತೆ ಪೂರ್ತಿ ಈ ಮೊಳೆಗಳು ಇದೆ.  ರಸ್ತೆಯಲ್ಲಿ ಹರಡಿರುವ ಮೊಳೆಗಳ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಮೂಲಕ ಬೆಂಗಳೂರಿನ ಫ್ಲೈಓವರ್‌ನಲ್ಲಿ ಸಂಚಾರಿಸುವಾಗ ಎಚ್ಚರದಿಂದ ಇರುವಂತೆ ಕೇಳಿಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

ಈ ವಿಡಿಯೋದಲ್ಲಿ ಅದೇ ಸ್ಥಳದಲ್ಲಿ ಮತ್ತೊಬ್ಬ ಸೈಕಲ್​​ ಸವಾರನ ಟಯರ್​​​​​ ಕೂಡ ಪಂಚರ್ ಆಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಹೇಳಲಾಗಿದೆ.  ಸುಲಿಗೆ ಮಾಡಲು ಇಂತಹ ಕೃತ್ಯವನ್ನು ಮಾಡಲಾಗುತ್ತಿದೆ. ವಾಹನಗಳನ್ನು ಪಂಚರ್​​ ಮಾಡಿ ಅಲ್ಲಿರುವ ಪಂಚರ್​​​ ಶಾಪ್​​​ಗೆ ಜನ ಬರುವಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಇದೊಂದು ರೀತಿಯ ವಂಚನೆ ಎಂದು ಹೇಳಲಾಗಿದೆ. ನಂತರ ರಿಪೇರಿಯ ಹೆಸರಿನಲ್ಲಿ ಹೆಚ್ಚು ಹೆಚ್ಚು ಹಣವನ್ನು ಪಡೆಯುವುದು ಈ ಗ್ಯಾಂಗ್​​​ನ ಕೆಲಸ ಆಗಿದೆ.

ಇದನ್ನೂ ಓದಿ: ಇದು ಬೆಂಗಳೂರು ರಸ್ತೆಗಳ ಗೋಳು, 11 ತಿಂಗಳಲ್ಲಿ 10 ಬಾರಿ ರಸ್ತೆ ಅಗೆಯುವ ಬಿಬಿಎಂಪಿ

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ:

ಈ ವಿಡಿಯೋವನ್ನು ಎಕ್ಸ್​​ನಲ್ಲಿ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ನೋಡಿ ಅನೇಕ ಬಳಕೆದಾರರೂ ಕಮೆಂಟ್​ ಮಾಡಿದ್ದಾರೆ. ಇದು ಕೆಲವು ವರ್ಷಗಳ ಹಿಂದೆ ಎಚ್‌ಎಸ್‌ಆರ್ ಅಗರ ಫ್ಲೈಓವರ್‌ನಲ್ಲಿ ನಡೆಯುತ್ತಿತ್ತು ಎಂದು ಒಬ್ಬ ಬಳಕೆದಾರ ಹೇಳಿದ್ದಾರೆ. ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಇಟ್ಟು ವಂಚನೆ ಮಾಡಿರುವ ಪಂಕ್ಚರ್ ಗ್ಯಾಂಗ್‌ಗಳು ಇವೆ. ಈ ಗ್ಯಾಂಗ್​​ಗಳು ಟ್ಯೂಬ್ ಮಾತ್ರವಲ್ಲ, ವಾಹನದಲ್ಲಿ ಕೆಲವೊಂದು ರಿಪೇರಿ ಇದೆ ಎಂದು ಹೆಚ್ಚು ಹಣ ವಸೂಲಿ ಮಾಡುತ್ತಾರೆ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ಆರ್.ಆರ್. ನಗರದಲ್ಲಿ ಇದೇ ರೀತಿಯ ನೂರಾರು ಮೊಳೆಗಳು ಕಂಡುಬಂದಿವೆ ಮತ್ತು ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸರಿಗೆ ದೂರು ನೀಡಿದ್ದೆ ಅದರ ಬಗ್ಗೆ ಏನಾಯಿತು ಎಂಬ ಬಗ್ಗೆ ಇಂದಿಗೂ ತಿಳಿದಿಲ್ಲ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ