AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್! 6 ಹೋಟೆಲ್​ಗಳಿಗೆ ಒಟ್ಟೂ 1.6 ಲಕ್ಷ ರೂ ಭಾರಿ ದಂಡ

ಆಹಾರ ಸುರಕ್ಷತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಉಲ್ಲಂಘಿಸಿದ ಬೆಂಗಳೂರಿನ 6 ಪ್ರಸಿದ್ಧ ಹೋಟೆಲ್‌ಗಳಿಗೆ ಉತ್ತರ ನಗರ ಪಾಲಿಕೆ 1.6 ಲಕ್ಷ ರೂ. ದಂಡ ವಿಧಿಸಿದೆ. ಪೀಪೈ ಬ್ರೂವರಿ, ಹಯಾತ್ ಸೆಂಟ್ರಿಕ್ ಸೇರಿದಂತೆ ಹಲವು ರೆಸ್ಟೋರೆಂಟ್‌ಗಳಲ್ಲಿ ಅವಧಿ ಮುಗಿದ ಆಹಾರ ಮತ್ತು ಅಸಮರ್ಪಕ ನೈರ್ಮಲ್ಯ ಪತ್ತೆಯಾಗಿದ್ದು, ಅಧಿಕಾರಿಗಳು ಖಡಕ್ ಕ್ರಮಕೈಗೊಂಡಿದ್ದಾರೆ.

ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್! 6 ಹೋಟೆಲ್​ಗಳಿಗೆ ಒಟ್ಟೂ 1.6 ಲಕ್ಷ ರೂ ಭಾರಿ ದಂಡ
ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೆ ಶಾಕ್!
ಭಾವನಾ ಹೆಗಡೆ
|

Updated on: Aug 15, 2026 | 8:36 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಆರು ಪ್ರಸಿದ್ಧ ಹೋಟೆಲ್‌ಗಳಿಗೆ ಭಾರಿ ದಂಡ ವಿಧಿಸಲಾಗಿದೆ.
  • ಅವಧಿ ಮುಗಿದ ಎಣ್ಣೆ, ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ.
  • ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಲೋಪಕ್ಕೆ ಪಾಲಿಕೆಯಿಂದ ಖಡಕ್ ಎಚ್ಚರಿಕೆ.

ಬೆಂಗಳೂರು, ಆಗಸ್ಟ್ 15: ನಗರದಲ್ಲಿ ಆಹಾರ ಸುರಕ್ಷತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಗಾಳಿಗೆ ತೂರಿದ್ದ 6 ಪ್ರಸಿದ್ಧ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಭಾರಿ ದಂಡ ವಿಧಿಸಿದೆ. ಒಟ್ಟು 1.60 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದ ಸಂಸ್ಥೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಪಾಲಿಕೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ಆರೋಗ್ಯ ಅಧಿಕಾರಿಗಳ ತಂಡವು ಬ್ಯಾಟರಾಯನಪುರ ಮತ್ತು ಯಲಹಂಕ ವಲಯಗಳ ವ್ಯಾಪ್ತಿಯಲ್ಲಿ ಬರುವ ಹೋಟೆಲ್‌ಗಳ ಮೇಲೆ ದಿಢೀರ್ ಪರಿಶೀಲನೆ ನಡೆಸಿತು. ಈ ವೇಳೆ ಅಡುಗೆ ಕೋಣೆಗಳಲ್ಲಿ ಅಸಮರ್ಪಕ ತ್ಯಾಜ್ಯ ವಿಂಗಡಣೆ, ಶುಚಿತ್ವದ ಕೊರತೆ, ನೊಣಗಳ ಹಾವಳಿ ಹಾಗೂ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಸುತ್ತಿರುವುದು ಕಂಡುಬಂದಿದೆ.

ಯಾವ ಹೋಟೆಲ್‌ಗೆ ಎಷ್ಟು ದಂಡ ಮತ್ತು ಕಾರಣಗಳು?

  • ಪೀಪೈ ಬ್ರೂವರಿ ಮತ್ತು ಕಿಚನ್: ಸಂಸ್ಥೆಯ ಕೋಲ್ಡ್ ಸ್ಟೋರೇಜ್‌ನಲ್ಲಿ ಅವಧಿ ಮುಗಿದ ಅಡುಗೆ ಎಣ್ಣೆ, ಸರಿಯಾಗಿ ಮುಚ್ಚದ ಮತ್ತು ಲೇಬಲ್ ಇಲ್ಲದ ಮಾಂಸ ಪತ್ತೆಯಾಗಿದೆ. ಮಾಂಸ ಖರೀದಿಸಿದ ದಿನಾಂಕದ ಬಿಲ್ ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಅತಿ ಹೆಚ್ಚು ಅಂದರೆ 80,000 ರೂ. ದಂಡ ವಿಧಿಸಿದ್ದಾರೆ.
  • ಹಯಾತ್ ಸೆಂಟ್ರಿಕ್: ತ್ಯಾಜ್ಯ ವಿಂಗಡಣೆ ಮಾಡದಿರುವುದು ಮತ್ತು ಕಿಚನ್‌ನಲ್ಲಿ ನೊಣಗಳು ಕಂಡುಬಂದ ಹಿನ್ನೆಲೆಯಲ್ಲಿ 40,000 ರೂ. ದಂಡ ಹಾಕಲಾಗಿದೆ.
  • ತಲಶ್ಶೇರಿ ರೆಸ್ಟೋರೆಂಟ್: ನೈರ್ಮಲ್ಯ ಕೊರತೆ, ನೊಣಗಳ ಕಾಟ ಮತ್ತು ಪ್ಲಾಸ್ಟಿಕ್ ಬಳಸಿದ್ದಕ್ಕೆ 20,000 ರೂ. ದಂಡ ವಿಧಿಸಲಾಗಿದೆ.
  • ನಂದನ ಪ್ಯಾಲೇಸ್: ಅಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ಬಳಕೆಗೆ 15,000 ರೂ. ದಂಡ.
  • ಚಿಕ್ಕಪೇಟೆ ಡೊಣ್ಣೆ ಬಿರಿಯಾನಿ: ಶುಚಿತ್ವದ ಲೋಪಕ್ಕೆ 5,000 ರೂ. ದಂಡ.
  • ಸ್ವಾತಿ ಹೋಟೆಲ್: ಅಡುಗೆ ಮನೆ ನೈರ್ಮಲ್ಯದಿಂದ ಕೂಡಿರದ ಕಾರಣ ನೋಟಿಸ್ ಜಾರಿ ಮಾಡಲಾಗಿದೆ.

ಅಪೋಲೊ ಆಸ್ಪತ್ರೆ ಕಿಚನ್ ಮೇಲೆಯೂ ದಾಳಿ

ಮತ್ತೊಂದೆಡೆ, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಮಂಡಳಿ (FDA) ಅಧಿಕಾರಿಗಳು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯ ಕಿಚನ್ ಪರಿಶೀಲಿಸಿದಾಗ, ಅವಧಿ ಮುಗಿದ ರವೆ, ಮೈದಾ, ಐಸಿಂಗ್ ಶುಗರ್, ಹಳೆಯ ಬ್ರೆಡ್ ಹಾಗೂ ನಕಲಿ ಲೇಬಲ್‌ನ ಧಾನ್ಯಗಳು ಪತ್ತೆಯಾಗಿವೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಹೋಟೆಲ್‌ಗಳ ವಿರುದ್ಧ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Live: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
Live: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಇಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರಾವಣ ಶನಿವಾರ
ಇಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರಾವಣ ಶನಿವಾರ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ