Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಬುಧವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲೆ ನಿಗದಿಯಾದಂತೆ ಹೆಚ್​ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಇಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ  ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿಬಂದಿತ್ತು.

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
Sunil MH
| Updated By: ವಿವೇಕ ಬಿರಾದಾರ

Updated on:Aug 30, 2023 | 9:57 AM

ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಅವರು ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್​.ಡಿ  ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್​ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ.

ಹಲವು ವರ್ಷಗಳಿಂದ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ನ್ಯಾಯಾಲಯದಲ್ಲಿ ಭೂ ವಿವಾದವಿತ್ತು, ನ್ಯಾಯಾಲಯದಲ್ಲಿ ‌ಅರಣ್ಯ ಇಲಾಖೆ ಪರ ಆದೇಶ ಬಂದ ಹಿನ್ನೆಲೆಯಲ್ಲಿ  ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ, ಚಿಂತಗುಂಡ, ಕೇತಗಾನಹಳ್ಳಿ ಬಳಿ ಕಳೆದ 6 ದಿನಗಳಲ್ಲಿ ಇದುವರೆಗೆ ಸುಮಾರು 560 ಎಕರೆ ಒತ್ತುವರಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆದಿದೆ.  ತೆರವು ಕಾರ್ಯಾಚರಣೆ ವೇಳೆ ಕೋಳಿ ಫಾರಂಗಳು, ಮಾವಿನ ಮರಗಳು, ಎಲೆಕೋಸು, ಕ್ಯಾಪ್ಸಿಕಂ ಹಾಗೂ ಇತರೆ ಬೆಳೆಗಳು, ಪಂಪ್ ಸೆಟ್, ಬೋರ್ ವೆಲ್ ಎಲ್ಲವನ್ನೂ ತೆರವು ನಾಶಪಡಿಸಿದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಗನ ರಾಜಕೀಯ ಭವಿಷ್ಯ ನುಡಿದ ಅಪ್ಪ ಹೆಚ್​ಡಿ ಕುಮಾರಸ್ವಾಮಿ: ಮುಂದಿನ 5 ವರ್ಷ ನೋ ಪಾಲಿಟಿಕ್ಸ್​

ವಿಧಾನಸಭೆ ಚುನಾವಣೆ ಸಮಯದಲ್ಲೂ ಆಸ್ಪತ್ರೆಗೆ ದಾಖಲು

ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿಯವರಿಗೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಕೂಡ ಇತ್ತು. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Wed, 30 August 23

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ