ಬೆಂಗಳೂರು: ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ಆರೋಪ; ಮಾಜಿ ಕಾರ್ಪೊರೇಟರ್​​ನ ಬಂಧನ

ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಸಿದ್ದಾರೆ.

ಬೆಂಗಳೂರು: ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ಆರೋಪ; ಮಾಜಿ ಕಾರ್ಪೊರೇಟರ್​​ನ ಬಂಧನ
ಮಾಜಿ ಕಾರ್ಪೊರೇಟರ್​ ವಿ.ಬಾಲಕೃಷ್ಣ
Edited By: ವಿವೇಕ ಬಿರಾದಾರ

Updated on: Jan 20, 2023 | 6:50 AM

ಬೆಂಗಳೂರು: ಕರ್ತವ್ಯನಿರತ ಸಿಪಿಐ (CPI) ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು (Former Corporator V Balakrishnan) ಕಗ್ಗಲೀಪುರ ಪೊಲೀಸರು ಬಂಧಸಿದ್ದಾರೆ. ವಿ.ಬಾಲಕೃಷ್ಣ ಯಲಚೇನಹಳ್ಳಿ ವಾರ್ಡ್ ನಂ.​185ರ ಮಾಜಿ ಕಾರ್ಪೊರೇಟರ್​ ಆಗಿದ್ದಾನೆ. ನಿನ್ನೆ ಸಂಜೆ (ಜ.19) ವಿ.ಬಾಲಕೃಷ್ಣ ಮತ್ತು ಸಿಪಿಐ ವಿಜಯ್ ಕುಮಾರ್​ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ವಿ.ಬಾಲಕೃಷ್ಣ, ಸಿಪಿಐ ವಿಜಯ್ ಕುಮಾರ್ ಅವರ ಕತ್ತಿನ ಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ತಕ್ಷಣವೇ​ ಕಗ್ಗಲೀಪುರ ಪೊಲೀಸರು ವಿ. ಬಾಲಕೃಷ್ಣನನ್ನು ವಶಕ್ಕೆ ಪಡೆದಿದ್ದಾರೆ. ಸಿಪಿಐ ವಿಜಯ್ ಕುಮಾರ್ ದೂರಿನ ಮೇರೆಗೆ, ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐಪಿಸಿ ಸೆಕ್ಷನ್ 353 ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಐಪಿಸಿ ಸೆಕ್ಷನ್ 332-ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಂದು (ಜ.20) ಪೊಲೀಸರು ಆರೋಪಿಯನ್ನು ಕೋರ್ಟ್​ಗೆ ಹಾಜರು ಪಡಿಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಘಟನೆ ಸಂಬಂಧ ವಿ.ಬಾಲಕೃಷ್ಣ ಪರ ವಕೀಲ ನಾರಾಯಣಸ್ವಾಮಿ ಟಿವಿ9 ಜೊತೆ ಮಾತನಾಡಿ ನಿನ್ನೆ (ಜ.19) ಸಂಜೆ 7 ಗಂಟೆಗೆ ಘಟನೆ ಬಗ್ಗೆ ಮಾಹಿತಿ ಬಂತು. ಘಟನೆ ಬಗ್ಗೆ ಮಾಹಿತಿ ಪಡೆಯಲು ನಾವು ಠಾಣೆಗೆ ಹೋಗಿದ್ವಿ. ಆದರೆ ಠಾಣೆಯಲ್ಲಿ ನಮಗೆ ಮಾತಾಡಲು ಅವಕಾಶ ನೀಡಲಿಲ್ಲ. ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ. ಬಾಲಕೃಷ್ಣ 3-4 ಬಾರಿ ಕಾರ್ಪೊರೇಟರ್​ ಆಗಿ ಸೇವೆ ಸಲ್ಲಿಸಿದ್ದಾರೆ. ಪೊಲೀಸರು ಬಾಲಕೃಷ್ಣ ಮೇಲೆ ಹಲ್ಲೆ ಮಾಡಿದ್ದಾರಾ? ಅಥವಾ ಬಾಲಕೃಷ್ಣ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರಾ? ನೋಡಬೇಕಿದೆ. ಬಾಲಕೃಷ್ಣ ಹೊರಬಂದರೆ ಏನಾಗಿದೆ ಅನ್ನೋದು ತಿಳಿಯುತ್ತೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us