AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS ಅಧಿಕಾರಿ ಅಂತೇಳಿ 2.5 ಕೋಟಿ ರೂ. ವಂಚನೆ, ಪ್ರೊಬೇಷನರಿ SP ಎಂದು ಕೆಲ ಪೊಲೀಸ್ ಠಾಣೆಗಳಿಗೂ ಭೇಟಿ ಕೊಟ್ಟಿದ್ದ ಖದೀಮ

ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 2.5 ಕೋಟಿ ವಂಚನೆ ಮಾಡಿರುವ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IPS ಅಧಿಕಾರಿ ಅಂತೇಳಿ 2.5 ಕೋಟಿ ರೂ. ವಂಚನೆ, ಪ್ರೊಬೇಷನರಿ SP ಎಂದು ಕೆಲ ಪೊಲೀಸ್ ಠಾಣೆಗಳಿಗೂ ಭೇಟಿ ಕೊಟ್ಟಿದ್ದ ಖದೀಮ
ನಕಲಿ ಐಪಿಎಸ್​ ಆಫೀಸರ್​
ಕಿರಣ್ ಹನುಮಂತ್​ ಮಾದಾರ್
|

Updated on:Mar 14, 2023 | 12:25 PM

Share

ಬೆಂಗಳೂರು: ತಾನು ಐಪಿಎಸ್(IPS) ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 2.5 ಕೋಟಿ ವಂಚನೆ ಮಾಡಿರುವ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್ ಎಂಬಾತನೇ ಐಪಿಎಸ್​ ಎಂದು ವಂಚಿಸಿದ ಆರೋಪಿ. ತಾನು ಪ್ರೊಬೇಷನರಿ ಎಸ್​.ಪಿ ಎಂದು ಕೆಲ ಪೊಲೀಸ್ ಠಾಣೆಗಳಿಗೂ ಸಮವಸ್ತ್ರದಲ್ಲೆ ಹೋಗಿದ್ದನಂತೆ. ಈ ವೇಳೆ ತಲಘಟ್ಟಪುರ ನಿವಾಸಿ ಒರ್ವರಿಗೆ ಪರಿಚಯವಾಗಿದ್ದಾನೆ. ಬಳಿಕ ತಾನು ಮೈಸೂರಿನಲ್ಲಿ ಪ್ರಸ್ತುತ ಕೆಲಸ ಮಾಡುತ್ತಿದ್ದೇನೆ ಎಂದು ನಂಬಿಸಿ, ಮೈಸೂರಿನ ಲ್ಯಾಂಡ್ ವ್ಯವಹಾರದಲ್ಲಿ 450ಕೋಟಿ ವ್ಯವಹಾರ ಇದೆ ಅದು ಡೀಲ್ ಆದ್ರೆ 250 ಕೋಟಿ ಸಿಗುತ್ತೆ ಎಂದು ನಂಬಿಸಿ. ಸದ್ಯ ಒಂದಷ್ಟು ಹಣ ಬೇಕು ಎಂದು ಕೇಳಿದ್ದಾನೆ. ನಂತರ ಹಂತ ಹಂತವಾಗಿ 2.5 ಕೋಟಿ ರೂ ಪಡೆದು ವಂಚನೆ ಮಾಡಿದ್ದಾನೆ. ಘಟನೆ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ನಕಲಿ ಐಪಿಎಸ್ ಅಧಿಕಾರಿ ಶ್ರೀನಿವಾಸ್ ವಿರುದ್ದ ಕೇಸ್ ದಾಖಲಾಗಿದೆ.

 ಮಿಲಿಟರಿ ಡ್ರೆಸ್ ಧರಿಸಿ ಕೋಟಿ ಕೋಟಿ ವಂಚನೆ; ಬೆಂಗಳೂರಿನಲ್ಲಿ ಯುವತಿ ಅರೆಸ್ಟ್

ಬೆಂಗಳೂರು: ಮಿಲಿಟರಿ ಡ್ರೆಸ್ ಹಾಕಿಕೊಂಡು DRDO ಕಮಾಂಡರ್ ಎಂದು ಹೇಳಿಕೊಂಡು 5 ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ ಅಸ್ಸಾಂ ಮೂಲದ ದರ್ಶನಾ ಭಾರದ್ವಾಜ್​ ಎಂಬ ಮಹಿಳೆಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಬಂಧಿತ ದರ್ಶನಾ ಭಾರದ್ವಾಜ್ ಅವರನ್ನ ತೀವ್ರ ವಿಚಾರಣೆ ನಡೆಸಿದ್ದಾರೆ. ಆರೋಪಿ ದರ್ಶನಾಳ ಮೇಲೆ ನಗರದ ಮೂರು ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ಸೇನೆ ಹೆಸರಿನಲ್ಲಿ DRDO ಕಮಾಂಡರ್ ಎಂದು ಹೇಳಿಕೊಂಡು 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ. ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಅನೇಕ ಸಂಗತಿಗಳು ಬಯಲಾಗುತ್ತಿವೆ. ದರ್ಶನಾಳಿಗೆ ನಗರದ ಬಿಲ್ಡರ್​ಗಳೇ ಮೇನ್ ಟಾರ್ಗೆಟ್.

ಇದನ್ನೂ ಓದಿ:Duplicate gold: ನಕಲಿ ಚಿನ್ನದ ದೋಖಾ -ಬೆಣ್ಣೆ ನಗರಿ ದಾವಣಗೆರೆಯಲ್ಲಿ ಬೆಣ್ಣೆ ಮಾತುಗಳಿಗೆ ಕರಗಿ ಲಕ್ಷ ಲಕ್ಷ ರೂ ಕಳೆದುಕೊಂಡ ರೈತ!

ಇನ್ನು ಈ ವಂಚಕಿ ಸೇನೆಯ ಕಟ್ಟಡ ನಿರ್ಮಾಣ ಹಾಗೂ ಮೇಂಟೆನೆನ್ಸ್ ಟೆಂಡರ್ ಕೊಡಿಸುವುದಾಗಿ ವಂಚನೆ ಮಾಡುತ್ತಿದ್ದಳು. DRDO ವೆಬ್ ಸೈಟ್​ನಲ್ಲಿರುವ ಟೆಂಡರ್ ತೋರಿಸಿ 40 ಕೋಟಿ, 20 ಕೋಟಿ, 10 ಕೋಟಿ ಯಾವ ಟೆಂಡರ್ ಬೇಕು ಅದನ್ನ ಮಾಡಿಸ್ತೀನಿ ಅಂತಿದ್ಳು. ಸುಮಾರು 66 ಕೋಟಿ ಪ್ರಾಜೆಕ್ಟ್ ಕೊಡಿಸುವುದಾಗಿ ಮೂವರು ಬಿಲ್ಡರ್​ಗಳಿಗೆ ವಂಚನೆ ಮಾಡಿದ್ದಾಳೆ. ಸುಮಾರು 5 ಕೋಟಿಗೂ ಅಧಿಕ ಹಣವನ್ನು ಪಡೆದು ವಂಚಿಸಿದ್ದಾಳೆ.

ಇನ್ನಷ್ಟು ರಾಜ್ಯಸುದ್ಇಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:01 am, Tue, 14 March 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ