AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೃಹಸಚಿವರ ಆಪ್ತ ಕಾರ್ಯದರ್ಶಿ ಎಂದು ಸ್ನೇಹಿತನಿಗೇ ವಂಚನೆ; ಸರ್ಕಾರಿ ಕೆಲಸದ ಆಸೆಗೆ ಬಿದ್ದು ಹಣ ಕಳೆದುಕೊಂಡ ಉದ್ಯಮಿ

ಎಸ್​ಡಿಎ ಕೆಲಸಕ್ಕೆ 10 ಲಕ್ಷ ಆಗುತ್ತದೆ. ಈ  ಸರ್ಕಾರಿ ಕೆಲಸ ಮಿಸ್ ಮಾಡಿಕೊಳ್ಳಬೇಡ ಎಂದು ಆರೋಪಿ ಶ್ರೀನಿವಾಸ್ ನಂಬಿಸಿದ್ದ. ಇದಕ್ಕೆ ಯಾಮಾರಿದ್ದ ಉದ್ಯಮಿ ರಾಮಚಂದ್ರ ಅವರು 2021 ರಿಂದ ಹಂತ ಹಂತವಾಗಿ ಹತ್ತು ಲಕ್ಷ ನೀಡಿ, ಇದೀಗ ಹಣ ಕಳೆದುಕೊಂಡು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಗೃಹಸಚಿವರ ಆಪ್ತ ಕಾರ್ಯದರ್ಶಿ ಎಂದು ಸ್ನೇಹಿತನಿಗೇ ವಂಚನೆ; ಸರ್ಕಾರಿ ಕೆಲಸದ ಆಸೆಗೆ ಬಿದ್ದು ಹಣ ಕಳೆದುಕೊಂಡ ಉದ್ಯಮಿ
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 30, 2023 | 3:51 PM

Share

ಬೆಂಗಳೂರು, ನ.30: ಗೃಹಸಚಿವರ ಆಪ್ತ ಕಾರ್ಯದರ್ಶಿ(private secretary) ಎಂದು ಸ್ನೇಹಿತನಿಗೇ ವಂಚನೆ ಮಾಡಿದ ಘಟನೆ ನಡೆದಿದೆ. ಸರ್ಕಾರಿ ಕೆಲಸ(Government job)ದ ಆಸೆಗೆ ಬಿದ್ದ ರಿಯಲ್ ಎಸ್ಟೇಟ್ ಉದ್ಯಮಿ ರಾಮಚಂದ್ರ ಎಂಬುವವರು ಹಣ ಕಳೆದುಕೊಂಡಿದ್ದಾರೆ. ನಕಲಿ ಆಪ್ತ ಕಾರ್ಯದರ್ಶಿ ಶ್ರೀನಿವಾಸ್, ಎಸ್​ಡಿಎ ಕೆಲಸ ಕೊಡಿಸುತ್ತೇನೆ, ಮೂರು ವರ್ಷ ಅದು ತಾತ್ಕಾಲಿಕವಾಗಿರುತ್ತದೆ. ಅದಾದ ಬಳಿಕ ಪರ್ಮನೆಂಟ್ ಆಗುತ್ತದೆ ಎಂದು ಆರೋಪಿ ನಂಬಿಸಿದ್ದ.

ಎಸ್​ಡಿಎ ಕೆಲಸಕ್ಕೆ 10 ಲಕ್ಷ ರೂ.

ಇನ್ನು ಎಸ್​ಡಿಎ ಕೆಲಸಕ್ಕೆ 10 ಲಕ್ಷ ಆಗುತ್ತದೆ. ಈ  ಸರ್ಕಾರಿ ಕೆಲಸ ಮಿಸ್ ಮಾಡಿಕೊಳ್ಳಬೇಡ ಎಂದು ಆರೋಪಿ ಶ್ರೀನಿವಾಸ್ ನಂಬಿಸಿದ್ದ. ಇದಕ್ಕೆ ಯಾಮಾರಿದ್ದ ಉದ್ಯಮಿ ರಾಮಚಂದ್ರ ಅವರು 2021 ರಿಂದ ಹಂತ ಹಂತವಾಗಿ ಹತ್ತು ಲಕ್ಷ ನೀಡಿದ್ದರು. ಹಣ ನೀಡಿ ಎರಡು ವರ್ಷಗಳ ಕಾಲ ಆರ್ಡರ್ ಕಾಪಿ ಬರುತ್ತೆ ಎಂದು ಕಾದು ಉದ್ಯಮಿ ಕೂತಿದ್ದರು. ಆದರೆ, ಇದಾದ ಬಳಿಕ ಆರ್ಡರ್ ಕಾಪಿ ಅಲ್ಲ, ಎಸ್ ಡಿ ಎ ಕೆಲಸವೇ ಇಲ್ಲ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ:ಡಿಜಿಟಲ್ ಟೋಪಿ! 113 ರೂ ರಿಫಂಡ್​​ಗಾಗಿ 4.9 ಲಕ್ಷ ರೂಪಾಯಿ ಕಳೆದುಕೊಂಡ ಡಾಕ್ಟರ್​​, Google ಕ್ಯಾಬ್ ಕಸ್ಟಮರ್​​ ಹೆಸರಿನಲ್ಲಿ ಸೈಬರ್​ ವಂಚನೆ

ಈ ಹಿನ್ನಲೆ ವಂಚನೆಯಾಗಿರುವ ಬಗ್ಗೆ ಅರಿವಾಗುತ್ತಿದ್ದಂತೆ ಹಣ ವಾಪಾಸ್ ಕೇಳಿದ್ದಾರೆ. ಹಣ ಕೊಡದಿದ್ದರೆ ಕೇಸು ಹಾಕುವುದಾಗಿ ಹೇಳಿದಾಗ ಶ್ರೀನಿವಾಸ್, 5 ಲಕ್ಷ ಹಣ ವಾಪಾಸ್ ನೀಡಿದ್ದನಂತೆ. ಉಳಿದ ಹಣ ಕೇಳಿದರೆ ಜೀವ ಬೆದರಿಕೆ ಹಾಕಿದ್ದು, ಈ ಕುರಿತು ಉದ್ಯಮಿ ರಾಮಚಂದ್ರ  ಅವರು ಠಾಣೆ ಮೆಟ್ಟಿಲೇರಿದ್ದಾರೆ. ನಡೆದ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದು, ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 30 November 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!