AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ

ಬೆಂಗಳೂರಿನ ಅತ್ತಿಮರ ಗೊರವಿನಗೆರೆಯಲ್ಲಿ ಭೀಕರ ಹತ್ಯೆ ನಡೆದಿದೆ. ಸುತ್ತಿಗೆಯಿಂದ ಹೊಡೆದು ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಸ್ನೇಹಿತರ ನಡುವೆ ಉಂಟಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಒಂದೇ ರೂಮ್​ನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ: ಸುತ್ತಿಗೆಯಿಂದ ಹೊಡೆದು ಗೆಳೆಯನ ಬರ್ಬರ ಹತ್ಯೆ
ಪ್ರಾತಿನಿಧಿಕ ಚಿತ್ರImage Credit source: sydneycriminallawyers
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 17, 2026 | 6:44 PM

Share

ಬೆಂಗಳೂರು, ಮಾರ್ಚ್​ 17: ಸುತ್ತಿಗೆಯಿಂದ ಹೊಡೆದು ಸ್ನೇಹಿತನ (friend) ಬರ್ಬರ ಹತ್ಯೆ (kill) ಮಾಡಿರುವಂತಹ ಘಟನೆ ನಗರದ ಅತ್ತಿಮರ ಗೊರವಿನಗೆರೆಯಲ್ಲಿ ನಡೆದಿದೆ. ಮೊಹಮ್ಮದ್ ನಸ್ರುಲ್ಲಾ(24) ಎಂಬಾತನಿಂದ ಕುನಾಲ್ ಕುಮಾರ್(22)ನನ್ನು ಕೊಲೆ ಮಾಡಲಾಗಿದೆ. ಸದ್ಯ ಆವಲಹಳ್ಳಿ ಪೊಲೀಸರು ಮೊಹಮ್ಮದ್ ನಸ್ರುಲ್ಲಾನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ.

ನಡೆದಿದ್ದೇನು?

ಮೊಹಮ್ಮದ್ ನಸ್ರುಲ್ಲಾ, ಕುನಾಲ್ ಕುಮಾರ್​​ ಸೇರಿದಂತೆ ಮೂವರು ಸ್ನೇಹಿತರು ಎಸಿ ಸರ್ವಿಸ್ ಕೆಲಸ ಮಾಡಿಕೊಂಡಿದ್ದು, ಒಂದೇ ರೂಮ್​ನಲ್ಲಿ ವಾಸವಾಗಿದ್ದರು. ನಸ್ರುಲ್ಲಾ ತಾಯಿಯ ಬಗ್ಗೆ ಕುನಾಲ್ ಅವಾಚ್ಯಪದ ಬಳಸಿ ನಿಂದಿಸಿದ್ದಾನೆ. ಇದರಿಂದ ಕುಪಿತಗೊಂಡು ಕುನಾಲ್ ಕುಮಾರ್ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿ ಹತ್ಯೆಗೈಯಲಾಗಿದೆ.

ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​ಮ್ಯಾನ್​ ಸಾವು

ದುರಸ್ತಿ ವೇಳೆ ವಿದ್ಯುತ್​ ಪ್ರವಹಿಸಿ ಲೈನ್​ಮ್ಯಾನ್​ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ಅವಘಡ ಸಂಭವಿಸಿದೆ. 53 ವರ್ಷದ ಅಮರೇಶ್ ಟಿ.ಸಿ ಮೃತ ದುರ್ದೈವಿ. ಕೆಂಪಾಪುರ ದಾಸರಹಳ್ಳಿಯ ಕಾಫಿ ಬೋರ್ಡ್ ಲೇಔಟ್ ಮುಖ್ಯರಸ್ತೆಯಲ್ಲಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ 11ಕೆವಿ ತಂತಿ ತಗುಲಿ ಮೃತಪಟ್ಟಿದ್ದಾರೆ.

ಲಾರಿ, ಹಾಲಿನ ಕ್ಯಾಂಟರ್ ನಡುವೆ ಡಿಕ್ಕಿ: ಬೈಕ್​ ಸವಾರ ಸಾವು

ರಾಯಚೂರಿನಲ್ಲಿ ಲಾರಿ ಮತ್ತು ಹಾಲಿನ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಪಕ್ಕದಲ್ಲೇ ಹೊರಟಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಹಂಚಿನಾಳ ಬಳಿ ಘಟನೆ ನಡೆದಿದೆ.

ಅಬ್ದುಲ್ ರೆಹಮಾನ್ (23)ಮೃತ ಬೈಕ್ ಸವಾರ. ಸಿಂಧನೂರಿನಿಂದ ಹಂಚಿನಾಳ ಮಾರ್ಗವಾಗಿ ಗೊಬ್ಬರದ ಲಾರಿ ಹೊರಟಿತ್ತು. ಈ ವೇಳೆ ಸಿಂಧನೂರು ಕಡೆ ಹಾಲಿನ ಕ್ಯಾಂಟರ್ ಬರುತ್ತಿತ್ತು. ಅತೀ ವೇಗದಲ್ಲಿದ್ದ ಹಿನ್ನೆಲೆ ಮುಖಾಮುಖಿ ಡಿಕ್ಕಿ ಹೊಡೆದಿವೆ.

ಇದನ್ನೂ ಓದಿ: ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ಈ ವೇಳೆ ಅದೇ ಮಾರ್ಗವಾಗಿ ಬರ್ತಿದ್ದ ಬೈಕ್ ಸವಾರರ ಮೇಲೆ ಲಾರಿ ಹರಿದಿದೆ. ಘಟನೆಯಲ್ಲಿ ಲಾರಿ ಹಾಗೂ ಕ್ಯಾಂಟರ್ ಚಾಲಕರಿಬ್ಬರಿಗೂ ಗಾಯಗಳಾಗಿವೆ. ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ