AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ತಟ್ಟಿದ ಧರ್ಮ ದಂಗಲ್ ಬಿಸಿ: ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಹೆಚ್​​​ಪಿ​ ಪೋಸ್ಟರ್

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಧರ್ಮ ದಂಗಲ್ ಬಿಸಿ ತಟ್ಟಿದ್ದು, ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ ಪೋಸ್ಟರ್​​ ಅಂಟಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ತಟ್ಟಿದ ಧರ್ಮ ದಂಗಲ್ ಬಿಸಿ: ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಹೆಚ್​​​ಪಿ​ ಪೋಸ್ಟರ್
ವಿಶ್ವ ಹಿಂದೂ ಪರಿಷತ್ ಅಭಿಯಾನ
TV9 Web
| Edited By: |

Updated on:Aug 28, 2022 | 4:18 PM

Share

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಗಣೇಶೋತ್ಸವಕ್ಕೆ (Ganesh Chaturthi) ಧರ್ಮ ದಂಗಲ್ ಬಿಸಿ ತಟ್ಟಿದ್ದು, ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಪೋಸ್ಟರ್​​ ಅಂಟಿಸುತ್ತಿದ್ದಾರೆ. ವಿಹೆಚ್​​​ಪಿ​ ಪೋಸ್ಟರ್​ಗೆ ವಿಶ್ವ ಸನಾತನ ಪರಿಷತ್ ಬೆಂಬಲ ನೀಡುತ್ತಿದೆ. ಗಣೇಶ ಚತುರ್ಥಿಗೆ ಬಟ್ಟೆ, ಹೂವು, ಹಣ್ಣು, ತರಕಾರಿಯನ್ನು ಹಿಂದೂಗಳ ಅಂಗಡಿಗಳಲ್ಲೇ ಖರೀದಿ ಮಾಡಿ ಎಂದು ಪೋಸ್ಟರ್​​ ಅಂಟಿಸುತ್ತಿದ್ದಾರೆ.

ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಕುರಿತು ಮಾತನಾಡಿದ ವಿಶ್ವ ಸನಾತನ ಪರಿಷತ್​​​​​​​​ ಅಧ್ಯಕ್ಷ ಭಾಸ್ಕರನ್ ಹಬ್ಬಕ್ಕೆ ಏನೇ ಖರೀದಿಸಬೇಕೆಂದರೂ ಹಿಂದೂ ಅಂಗಡಿಗೆ ಹೋಗಿ ಎಂದು ಮನವಿ ಮಾಡಿದ್ದಾರೆ.

ಕರೆ ಕೊಟ್ಟ ಸಂಘಟನೆ ವಿರುದ್ಧ ಮುಸ್ಲಿಂ ಮುಖಂಡ ಕಿಡಿ: ಈ ವಿಚಾರವಾಗಿ ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲೀದ್ ಕಿಡಿ ಕಾರಿದ್ದು, ಹಿಂದೂ ಸಂಘಟನೆಗಳ ಯಾವ ಅಭಿಯಾನ ಸಕ್ಸಸ್ ಆಗಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಚಾಲಕರ ನಿಷೇಧ, ಹಲಾಲ್, ಮಾವಿನ ಹಣ್ಣು ಖರೀದಿ, ಕುರಿ ವ್ಯಾಪಾರ ಬಹಿಷ್ಕಾರ ಸೇರಿದಂತೆ ಹಿಂದೂ ಸಂಘಟನೆಗಳು ಹಲವು ಬ್ಯಾನ್ ಅಭಿಯಾನ ಮಾಡಿದ್ದವು. ಯಾವುದಾದರೂ ಒಂದಾದರೂ ಯಶಸ್ವಿಯಾಗಿದೆಯಾ?  ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಇರುವ ಶೇ‌.90 ರಷ್ಟು ಹಿಂದೂಗಳು ವಿಶಾಲ ಹೃದಯದವರು. ಬಾಕಿ ಶೇ 10 ರಷ್ಟು ಮತೀಯವಾದಿಗಳಿದ್ದಾರೆ, ಅದು ಎಲ್ಲ ಧರ್ಮಗಳಲ್ಲೂ ಇರ್ತಾರೆ. ಇದು ತಮ್ಮ ಚಲಾವಣೆಗೋಸ್ಕರ ಮಾಡುತ್ತಿರೋ ಅಭಿಯಾನ. ಒಂದು ವರ್ಷದಿಂದ ಎಷ್ಟು ಅಭಿಯಾನ ಮಾಡಿದರು? ಇವರ ಅಭಿಯಾನದಿಂದ ಏನೂ ಮಾಡೋಕೆ ಆಗೊಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:47 pm, Sun, 28 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ