AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ತಟ್ಟಿದ ಧರ್ಮ ದಂಗಲ್ ಬಿಸಿ: ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಹೆಚ್​​​ಪಿ​ ಪೋಸ್ಟರ್

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಧರ್ಮ ದಂಗಲ್ ಬಿಸಿ ತಟ್ಟಿದ್ದು, ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ ಪೋಸ್ಟರ್​​ ಅಂಟಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ತಟ್ಟಿದ ಧರ್ಮ ದಂಗಲ್ ಬಿಸಿ: ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಹೆಚ್​​​ಪಿ​ ಪೋಸ್ಟರ್
ವಿಶ್ವ ಹಿಂದೂ ಪರಿಷತ್ ಅಭಿಯಾನ
TV9 Web
| Edited By: |

Updated on:Aug 28, 2022 | 4:18 PM

Share

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಗಣೇಶೋತ್ಸವಕ್ಕೆ (Ganesh Chaturthi) ಧರ್ಮ ದಂಗಲ್ ಬಿಸಿ ತಟ್ಟಿದ್ದು, ​​ಹಿಂದೂ ವರ್ತಕರಿಂದಲೇ ವಸ್ತು ಖರೀದಿಸುವಂತೆ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಪೋಸ್ಟರ್​​ ಅಂಟಿಸುತ್ತಿದ್ದಾರೆ. ವಿಹೆಚ್​​​ಪಿ​ ಪೋಸ್ಟರ್​ಗೆ ವಿಶ್ವ ಸನಾತನ ಪರಿಷತ್ ಬೆಂಬಲ ನೀಡುತ್ತಿದೆ. ಗಣೇಶ ಚತುರ್ಥಿಗೆ ಬಟ್ಟೆ, ಹೂವು, ಹಣ್ಣು, ತರಕಾರಿಯನ್ನು ಹಿಂದೂಗಳ ಅಂಗಡಿಗಳಲ್ಲೇ ಖರೀದಿ ಮಾಡಿ ಎಂದು ಪೋಸ್ಟರ್​​ ಅಂಟಿಸುತ್ತಿದ್ದಾರೆ.

ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಕುರಿತು ಮಾತನಾಡಿದ ವಿಶ್ವ ಸನಾತನ ಪರಿಷತ್​​​​​​​​ ಅಧ್ಯಕ್ಷ ಭಾಸ್ಕರನ್ ಹಬ್ಬಕ್ಕೆ ಏನೇ ಖರೀದಿಸಬೇಕೆಂದರೂ ಹಿಂದೂ ಅಂಗಡಿಗೆ ಹೋಗಿ ಎಂದು ಮನವಿ ಮಾಡಿದ್ದಾರೆ.

ಕರೆ ಕೊಟ್ಟ ಸಂಘಟನೆ ವಿರುದ್ಧ ಮುಸ್ಲಿಂ ಮುಖಂಡ ಕಿಡಿ: ಈ ವಿಚಾರವಾಗಿ ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲೀದ್ ಕಿಡಿ ಕಾರಿದ್ದು, ಹಿಂದೂ ಸಂಘಟನೆಗಳ ಯಾವ ಅಭಿಯಾನ ಸಕ್ಸಸ್ ಆಗಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಚಾಲಕರ ನಿಷೇಧ, ಹಲಾಲ್, ಮಾವಿನ ಹಣ್ಣು ಖರೀದಿ, ಕುರಿ ವ್ಯಾಪಾರ ಬಹಿಷ್ಕಾರ ಸೇರಿದಂತೆ ಹಿಂದೂ ಸಂಘಟನೆಗಳು ಹಲವು ಬ್ಯಾನ್ ಅಭಿಯಾನ ಮಾಡಿದ್ದವು. ಯಾವುದಾದರೂ ಒಂದಾದರೂ ಯಶಸ್ವಿಯಾಗಿದೆಯಾ?  ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಇರುವ ಶೇ‌.90 ರಷ್ಟು ಹಿಂದೂಗಳು ವಿಶಾಲ ಹೃದಯದವರು. ಬಾಕಿ ಶೇ 10 ರಷ್ಟು ಮತೀಯವಾದಿಗಳಿದ್ದಾರೆ, ಅದು ಎಲ್ಲ ಧರ್ಮಗಳಲ್ಲೂ ಇರ್ತಾರೆ. ಇದು ತಮ್ಮ ಚಲಾವಣೆಗೋಸ್ಕರ ಮಾಡುತ್ತಿರೋ ಅಭಿಯಾನ. ಒಂದು ವರ್ಷದಿಂದ ಎಷ್ಟು ಅಭಿಯಾನ ಮಾಡಿದರು? ಇವರ ಅಭಿಯಾನದಿಂದ ಏನೂ ಮಾಡೋಕೆ ಆಗೊಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:47 pm, Sun, 28 August 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ