
ಬೆಂಗಳೂರು, ಜೂನ್ 7: ಮುಂದಿನ 30 ವರ್ಷಗಳಿಗೆ ಬೆಂಗಳೂರಿನ ಕಸ ನಿರ್ವಹಿಸುವ ಗುತ್ತಿಗೆಗೆ (Garbage Management) ಅನುಮೋದನೆ ನೀಡಿದ್ದ ಸರ್ಕಾರ ಇದೀಗ ಮನಸು ಬದಲಾಯಿಸಿದೆ. 39,437 ಕೋಟಿ ರೂಗಳ ಬೃಹತ್ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಈ ಟೆಂಡರ್ನಲ್ಲಿನ ವೆಚ್ಚವು ಅತಿಯಾಗಿದೆಯೆಂದು ಮತ್ತು 30 ವರ್ಷಗಳ ಸುದೀರ್ಘ ಅವಧಿಗೆ ಒಂದೇ ಕಂಪನಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲವೆಂದು ರಾಜ್ಯ ಹಣಕಾಸು ಇಲಾಖೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ನಿಯಮಗಳನ್ನು ಪರಿಶೀಲಿಸಲು ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಡೆಕನ್ ಹೆರಾಲ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ.
ಈ ನಾಲ್ಕು ಸದಸ್ಯರ ಸಮಿತಿಯಲ್ಲಿ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ಗ್ರೇಟರ್ ಬೆಂಗಳೂರು ಅಥಾರಿಟಿಯ (GBA) ಮುಖ್ಯ ಇಂಜಿನಿಯರ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ (ಸದಸ್ಯ ಕಾರ್ಯದರ್ಶಿ) ಇದ್ದಾರೆ.
ಇದನ್ನೂ ಓದಿ: ಬೆಂಗಳೂರು ಪೂರ್ವ ನಗರ ನಿಗಮದಿಂದ ಬೃಹತ್ ಸ್ವಚ್ಛತಾ ಸಪ್ತಾಹ; 100 ಟನ್ ಕಸ ವಿಲೇವಾರಿ!
ಹಣಕಾಸು ಇಲಾಖೆ ಎತ್ತಿರುವ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಏಳು ದಿನಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: Bengaluru Air Quality: ಬೆಂಗಳೂರಿನಲ್ಲಿ ಉತ್ತಮ ವಾಯು ಗುಣಮಟ್ಟ: ಸಿಲ್ಕ್ ಬೋರ್ಡ್ನಲ್ಲಿ ಮಾತ್ರ ಕೊಂಚ ಏರಿಕೆ
ಈ ಟೆಂಡರ್ ಅನ್ನು ದೆಹಲಿ ಮೂಲದ ‘ಡೆಲ್ಲಿ ಎಂಎಸ್ಡಬ್ಲ್ಯೂ ಸೊಲ್ಯೂಷನ್ಸ್ ಲಿಮಿಟೆಡ್’ಗೆ ನೀಡಲಾಗಿದೆ. ಇದು ಹೈದರಾಬಾದ್ ಮೂಲದ ರಾಮ್ಕಿ ಗ್ರೂಪ್ನ ಸಹವರ್ತಿ ಸಂಸ್ಥೆಯಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ