AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇ ಖಾತಾ ಮಾಹಿತಿ ನೀಡಲು ಬರಲಿದೆ ಮೊಬೈಲ್ ಆ್ಯಪ್!

ಇ-ಖಾತಾ ಮೂಲಕ ಆಸ್ತಿದಾರರಿಗೆ ಹೊಸ ಟಾಸ್ಕ್ ನೀಡಿದ್ದ ಸರ್ಕಾರ, ಇದೀಗ ಇ-ಖಾತಾ ನೋಂದಣಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಹೊಸ ಪ್ರಯೋಗ ನಡೆಸಲು ಸಜ್ಜಾಗಿದೆ. ಆಸ್ತಿ ಮಾಲೀಕರಿಗೆ ಇ ಖಾತಾ ಬಗ್ಗೆ ಮಾಹಿತಿ ನೀಡಲು ಮೊಬೈಲ್ ಆ್ಯಪ್ ಪರಿಚಯಿಸಲು ಜಿಬಿಎ ಸಜ್ಜಾಗುತ್ತಿದ್ದರೆ, ಇತ್ತ ಈಗ ಇರುವ ಸಮಸ್ಯೆಗಳನ್ನೇ ಬಗೆಹರಿಸದ ಜಿಬಿಎ ನಡೆಗೆ ಆಸ್ತಿಮಾಲೀಕರ ಅಸಮಾಧಾನ ವ್ಯಕ್ತವಾಗುತ್ತಿದೆ.

ಬೆಂಗಳೂರು: ಇ ಖಾತಾ ಮಾಹಿತಿ ನೀಡಲು ಬರಲಿದೆ ಮೊಬೈಲ್ ಆ್ಯಪ್!
ಸಾಂದರ್ಭಿಕ ಚಿತ್ರ
ಶಾಂತಮೂರ್ತಿ
| Edited By: |

Updated on: Sep 29, 2025 | 7:51 AM

Share

ಬೆಂಗಳೂರು, ಸೆಪ್ಟೆಂಬರ್ 29: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಖರೀದಿ ಹಾಗೂ ಮಾರಾಟದಲ್ಲಿ ಯಾವುದೇ ಸಮಸ್ಯೆ ಆಗಬಾರದು ಎಂದು ಇ ಖಾತಾ ಪರಿಚಯಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಅಂದಾಜು 25 ಲಕ್ಷ ಆಸ್ತಿಗಳಿದ್ದು ಇಲ್ಲಿಯ ವರೆಗೆ 5 ಲಕ್ಷದ ಆಸ್ತಿಗಳಿಗೆ ಮಾತ್ರ ಇ ಖಾತಾ ನೀಡಲಾಗಿದೆ. ಇದೀಗ ಕೊನೆಗೂ ಇ ಖಾತಾ ಸಮಸ್ಯೆಗೆ ಪರಿಹಾರ ಹುಡುಕಲು ಹೊರಟಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA) ಇ-ಖಾತಾ (E Khata) ನೋಂದಣಿ ಹಾಗೂ ಮಾಹಿತಿ ಪಡೆಯಲು ಮೊಬೈಲ್ ಆ್ಯಪ್ ಪರಿಚಯಿಸಲು ಸಜ್ಜಾಗಿದೆ.

ಬೆಂಗಳೂರಿನಲ್ಲಿ ಇ ಖಾತಾ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಪರಿಚಯಿಸುತ್ತಿರುವ ಹೊಸ ಆ್ಯಪ್​​ನಿಂದ ಆಸ್ತಿ ಮಾಲೀಕರಿಗೆ ಅರ್ಜಿ ಪ್ರಕ್ರಿಯೆ ಜೊತೆಗೆ ಇ ಖಾತಾ ಕುರಿತ ಮಾಹಿತಿಗಳನ್ನು ಪಡೆಯಲು ಸುಲಭವಾಗಲಿದೆ ಎಂಬುದು ಜಿಬಿಎ ಲೆಕ್ಕಾಚಾರ. ಆದರೆ, ಇತ್ತ ಈಗಾಗಲೇ ಇ ಖಾತಾ ನೋಂದಣಿಯಲ್ಲಿರುವ ಸರ್ವರ್ ಸಮಸ್ಯೆ, ಅರ್ಜಿ ನೋಂದಣಿಯ ವಿಳಂಬದ ಸಮಸ್ಯೆ ಬಗೆಹರಿಸದ ಜಿಬಿಎ ಇದೀಗ ಆ್ಯಪ್ ಪರಿಚಯಿಸಲು ಹೊರಟಿರುವುದು ಹಾಸ್ಯಾಸ್ಪದ ಎಂದು ಬೆಂಗಳೂರಿನ ಆಸ್ತಿ ಮಾಲೀಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಅಲ್ಲದೇ, ಮೊಬೈಲ್ ಆ್ಯಪ್ ಮೂಲಕ ಇ ಖಾತಾ ನೋಂದಣಿ ಅಸಾಧ್ಯ ಎಂದಿದ್ದಾರೆ.

ಸ್ಮಾರ್ಟ್‌ಫೋನ್​ನಿಂದಲೇ ನೇರವಾಗಿ ಇ-ಖಾತಾ ಅರ್ಜಿ ಸಲ್ಲಿಸಲು ಅವಕಾಶ

ಸದ್ಯ ಬೆಂಗಳೂರಿನಲ್ಲಿ ಇ-ಖಾತಾ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್, ಬೆಂಗಳೂರು ಒನ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳ ಮೂಲಕ ನಿರ್ವಹಿಸಲಾಗುತ್ತಿತ್ತು. ಹೊಸ ಅಪ್ಲಿಕೇಶನ್‌ನೊಂದಿಗೆ, ಆಸ್ತಿ ಮಾಲೀಕರು ಇನ್ಮುಂದೆ ತಮ್ಮ ಸ್ಮಾರ್ಟ್‌ಫೋನ್‌ಗಳಿಂದ ನೇರವಾಗಿ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ರದ್ದಾಗುತ್ತಾ ಅನರ್ಹ ಬಿಪಿಎಲ್ ಕಾರ್ಡ್​? ಸ್ವಯಂ ಪ್ರೇರಿತವಾಗಿ ಎಪಿಎಲ್​​ಗೆ ಬರುವಂತೆ ಸಚಿವ ಮುನಿಯಪ್ಪ ಮನವಿ

ಈವರೆಗೆ ಇ ಖಾತಾ ವಿತರಣೆಗೆ ಅನೇಕ ಹೊಸ ಹೊಸ ಟಾಸ್ಕ್​ಗಳನ್ನು ಜಿಬಿಎ ಅನುಷ್ಠಾನಗೊಳಿಸಿದೆ. ಆದಾಗ್ಯೂ, ವಿತರಣೆಯಾದ ಇ ಖಾತಾಗಳ ಸಂಖ್ಯೆ ಅಷ್ಟಕ್ಕಷ್ಟೆ. ಸದ್ಯ ಜಿಬಿಎ ಜಾರಿ ಮಾಡಲು ಹೊರಟಿರುವ ಹೊಸ ಪ್ಲಾನ್ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು