AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್​ಮೆಂಟ್​ನ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ಓದುತ್ತಿದ್ದ 12 ವರ್ಷದ ಬಾಲಕಿ ಬುಧವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಅಪಾರ್ಟ್​ಮೆಂಟ್​ನ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಅಪಾರ್ಟ್​ಮೆಂಟ್​​ನಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಅಪಾರ್ಟ್​ಮೆಂಟ್​ನ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Jan 24, 2024 | 10:00 AM

Share

ಬೆಂಗಳೂರು, ಜನವರಿ 24: ನಗರದ ಬೇಗೂರು (Begur) ಬಳಿ ಇರುವ ಅಪಾರ್ಟ್​ಮೆಂಟ್​ನ (Apartment) 29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹುಳಿಮಾವು ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಅಪಾರ್ಟ್​ಮೆಂಟ್​ನಲ್ಲಿ ಅಪ್ಪ-ಅಮ್ಮನ ಜೊತೆಗೆ ವಾಸವಿದ್ದಳು. ಇಂದು (ಜ.24) ನಸುಕಿನ ಜಾವ 5 ಗಂಟೆ ಸುಮಾರಿಗೆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಲಕಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ತಂದೆ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿ. ನಸುಕಿನ ಜಾವ 4.30ರ ಸುಮಾರ ಎಚ್ಚರಗೊಂಡು ಬಾಲಕಿ ಮನೆಯ ಪಡಸಾಲೆಗೆ ಬಂದಿದ್ದಾಳೆ. ಈ ವೇಳೆ ತಾಯಿ ಬಾಲಕಿಗೆ ಪ್ರಶ್ನೆ ಮಾಡಿದ್ದಾರೆ. ತಾಯಿಯ ಪ್ರಶ್ನೆಗೆ ಬಾಲಕಿ ಸರಿಯಾಗಿ ಉತ್ತರ ಕೊಡದೆ ಮತ್ತೆ ಮಲಗುವುದಾಗಿ ಹೇಳಿ ರೂಮಿಗೆ ಹೋಗಿದ್ದಾಳೆ. ತಾಯಿ ಕೂಡ ಕೋಣೆಯೊಳಗೆ ಹೋಗಿದ್ದಾರೆ.

ಇದನ್ನೂ ಓದಿ: ಮೀಟರ್​ ಬಡ್ಡಿ ದಂಧೆ ಹಾವಳಿ, ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಎಚ್ಚೆತ್ತ ತುಮಕೂರು ಪೊಲೀಸರಿಂದ ಸಹಾಯವಾಣಿ

ಆದರೆ ಸ್ವಲ್ಪಹೊತ್ತಿನ ಬಳಿಕ 5 ಗಂಟೆ ಸುಮಾರಿಗೆ ಬಾಲಕಿ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಿಕಿ ಬೀಳುತ್ತಿದ್ದಂತೆ ಜೋರಾದ ಶಬ್ದ ಕೇಳಿಬಂದಿದೆ. ಕೂಡಲೇ ಅಪಾರ್ಟ್ಮೆಂಟ್ ಕಾವಲುಗಾರ ಹೊರ ಬಂದು ನೋಡಿದಾಗ ಬಾಲಕಿಯ ರಕ್ತಸಿಕ್ತ ಶವ ಕಂಡಿದೆ. ತತಕ್ಷಣ ಕಾವಲುಗಾರ ಪೋಷಕರಿಗೆ ಮತ್ತು ಅಪಾರ್ಟ್ಮೆಂಟ್ ಅಸೋಸಿಯೇಷನ್​ಗೆ ಮಾಹಿತಿ ನೀಡಿದ್ದಾರೆ. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ನೆಲಮಂಗಲ: ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಜಗದೀಶ್ (42) ಮೃತ ವ್ಯಕ್ತಿ. ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್