AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ!

ಬೆಂಗಳೂರಿನ ಯುವತಿಯೊಬ್ಬಳು ಅಮ್ಮ ಹಾಗೂ ದೊಡ್ಡಮ್ಮನ ಖಾಸಗಿ, ನಗ್ನ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿರುವ ಅಘಾತಕಾರಿ ಘಟನೆ ವರದಿಯಾಗಿದೆ. ಈ ಬಗ್ಗೆ ಕುಟುಂಬದವರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಗಳ ವಿದ್ಯಾಭ್ಯಾಸಕ್ಕೆ ನೆರವಾಗಲಿ ಎಂದು ಮೊಬೈಲ್ ತೆಗೆದುಕೊಟ್ಟ ಪೋಷಕರು ಇಕ್ಕಟ್ಟಿಗೆ ಸಿಲುಕುವಂತಾಗಿದೆ.

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ!
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on:Feb 09, 2026 | 2:27 PM

Share

ಬೆಂಗಳೂರು, ಫೆಬ್ರವರಿ 9: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದ್ಯಾಭ್ಯಾಸಕ್ಕಾಗಿ ಮೊಬೈಲ್ ಬೇಕೆಂದು ಯುವತಿ ಕೇಳಿದ್ದ ಕಾರಣ ಪೋಷಕರು ಮೊಬೈಲ್ ತೆಗೆದು ಕೊಟ್ಟಿದ್ದರು. ಕೆಲವು ದಿನಗಳ ಹಿಂದೆ ಆಕೆ ಅಪರಿಚಿತ ಯುವಕನೊಂದಿಗೆ ಮಾತನಾಡುತ್ತಿದ್ದ ವಿಚಾರ ಕುಟುಂಬದ ಗಮನಕ್ಕೆ ಬಂದಿತ್ತು. ಈ ವಿಚಾರವನ್ನು ಆಕೆಯ ತಾಯಿ ಪತಿಗೆ ತಿಳಿಸಿದ್ದರು. ಅದಾದ ನಂತರ ಅನುಮಾನ ಬಂದು ಮೊಬೈಲ್ ಪರಿಶೀಲನೆ ನಡೆಸಿದಾಗ ಕುಟುಂಬ ಸದಸ್ಯರ ಖಾಸಗಿ ಅಂಗಾಗಗಳ ಫೋಟೋಗಳನ್ನು ರಹಸ್ಯವಾಗಿ ತೆಗೆದು ಪ್ರಿಯಕರನಿಗೆ ಕಳುಹಿಸಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ಮಲಗಿದ್ದ ವೇಳೆ ಖಾಸಗಿ ಅಂಗದ ಫೋಟೊ ತೆಗೆದಿದ್ದ ಯುವತಿ

ಆರೋಪಿ ಯುವತಿಯು ತಾಯಿ ಮಲಗಿದ್ದ ವೇಳೆ ಅವರ ಖಾಸಗಿ ಅಂಗಾಂಗಗಳ ಫೋಟೋಗಳನ್ನು ತೆಗೆದು ಕಳುಹಿಸಿದ್ದಳು ಎಂಬುದು ಮೊಬೈಲ್ ಪರಿಶೀಲಿಸಿದಾಗ ಗೊತ್ತಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲದೆ, ಯುವತಿಯು ತನ್ನ ದೊಡ್ಡಮ್ಮ ಸ್ನಾನ ಮಾಡುತ್ತಿದ್ದಾಗ ಅವರಿಗೆ ಗೊತ್ತಾಗದಂತೆ ನಗ್ನ ಫೋಟೊ ತೆಗೆದಿದ್ದಾಳೆ. ಅದನ್ನು ಕೂಡ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಷಯ ತಿಳಿದು ಮಗಳಿಗೆ ಬುದ್ಧಿ ಹೇಳಿ ಫೋಟೋಗಳನ್ನು ಅಳಿಸಿಹಾಕಿದ್ದೇವೆ ಎಂದು ತಾಯಿ ಹೇಳಿದ್ದಾರೆ. ಅಲ್ಲದೆ, ಭವಿಷ್ಯದಲ್ಲಿ ಆ ಫೋಟೊಗಳು ದುರುಪಯೋಗವಾಗುವ ಭಯದಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಡ್ಡೆ ಹುಡುಗರ ಬಲೆಗೆ ಬೀಳಿಸಲು ಹೆಸರೇ ಬದಲಾಯಿಸಿದ್ದ ಸುಚಿತ್ರಾ! ಖತರ್ನಾಕ್ ಪ್ಲಾನ್ ರಹಸ್ಯ ಬಟಾಬಯಲು

ಸದ್ಯ, ಯುವತಿ ಹಾಗೂ ಆಕೆಯ ಪ್ರಿಯಕರ ವರುಣ್ ಅಲಿಯಾಸ್ ಗಿರಿಧರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಕಾಲೇಜಿಗೆ ಹೋಗುವ ಮಗಳು ಓದುವುದಕ್ಕೆ ಅಗತ್ಯ ಎಂದು ಕೇಳಿದ್ದರಿಂದ ಮೊಬೈಲ್ ತೆಗೆದುಕೊಟ್ಟ ಪೋಷಕರು ಅದರಿಂದಲೇ ಇಕ್ಕಟ್ಟಿಗೆ ಸಿಲುಕುವಂತಾಗಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Mon, 9 February 26

Follow Us
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು