AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಬೆನ್ನಲ್ಲೆ ಬಿಎಂಟಿಸಿಯ 10 ಭ್ರಷ್ಟ ಅಧಿಕಾರಿಗಳ ಅಮಾನತು, ಇಬ್ಬರು ವರ್ಗಾವಣೆ

ಫೋನ್​ಪೇ, ಗೂಗಲ್ ಪೇ ಮೂಲಕ ಲಂಚ ಪಡೆದ ಪ್ರಕರಣ ಸಂಬಂಧ ಬಿಎಂಟಿಸಿಯ ಹತ್ತು ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಇಬ್ಬರನ್ನು ವರ್ಗಾವಣೆ ಮಾಡಲಾಗಿದೆ.

ಟಿವಿ9 ವರದಿ ಬೆನ್ನಲ್ಲೆ ಬಿಎಂಟಿಸಿಯ 10 ಭ್ರಷ್ಟ ಅಧಿಕಾರಿಗಳ ಅಮಾನತು, ಇಬ್ಬರು ವರ್ಗಾವಣೆ
ಆಪ್ತರ ಮೂಲಕ ಲಂಚ ಪಡೆಯುತ್ತಿದ್ದ ಬಿಎಂಟಿಸಿ ಅಧಿಕಾರಿಗಳು ಸಸ್ಪೆಂಡ್​; ಇಬ್ಬರು ಎತ್ತಂಗಡಿ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Dec 12, 2022 | 12:09 PM

Share

ಬೆಂಗಳೂರು: ಬಿಎಂಟಿಸಿ (BMTC) ವಿಭಾಗದಲ್ಲಿನ ಲಂಚಾವತಾರದ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೆ ಹತ್ತು ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಇಬ್ಬರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಫೋನ್​ಪೇ, ಗೂಗಲ್ ಪೇ (Phonepe, Google Pay) ಮೂಲಕ ಲಂಚ (Bribery) ಪಡೆದ ಪ್ರಕರಣ ಸಂಬಂಧ ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಹಾಗೂ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಗದೀಶ್ ಅವರನ್ನು ಕೆಎಸ್​​ಆರ್​​​ಟಿಸಿ ರಾಮನಗರ ವಿಭಾಗಕ್ಕೆ ವರ್ಗಾವಣೆ ಮಾಡಿದರೆ, ಚಂದ್ರಶೇಖರ್ ಅವರನ್ನು ಕೆಕೆಆರ್​​ಟಿಸಿ ಕಲಬುರಗಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಲಂಚ ಪಡೆದು ಬಸ್ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಡ್ಯೂಟಿ ನೀಡಿದ ಆರೋಪ ಬಿಎಂಟಿಸಿಯ 94 ಅಧಿಕಾರಿಗಳು ವಿರುದ್ಧ ಕೇಳಿಬಂದಿತ್ತು. ಬಿಎಂಟಿಸಿಯಲ್ಲಿ ಡ್ಯೂಟಿ ಬೇಕೆಂದರೆ ಚಾಲಕರು, ನಿರ್ವಾಹಕರು ಲಂಚ ನೀಡಬೇಕಾಗಿತ್ತು. ವಾರಕ್ಕೆ 500 ರೂ., ತಿಂಗಳಿಗೆ 2 ಸಾವಿರ ರೂಪಾಯಿ ಲಂಚ ನೀಡಬೇಕಾಗಿತ್ತು. ಈ ಲಂಚದ ಹಣವನ್ನು ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ ಪಡೆಯುತ್ತಿದ್ದರು. ಬಿಎಂಟಿಸಿ ಅಧಿಕಾರಿಗಳ ಈ ಲಂಚಾವತಾರದ ಬಗ್ಗೆ ಟಿವಿ9ನಲ್ಲಿ ನಿರಂತರ ವರದಿ ಮಾಡಲಾಗಿತ್ತು.

ಇದನ್ನೂ ಓದಿ: Crime News: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಆರ್​ಆರ್​ ನಗರ ಡಿಪೋ ಬಸ್ ಚಾಲಕ ಕಂ ಕಂಡಕ್ಟರ್​ ಹೊಳೆಬಸಪ್ಪ ಲಂಚ ನೀಡಿರಲಿಲ್ಲ. ಲಂಚ ನೀಡದಿದ್ದಕ್ಕೆ ಡಿಪೋ ಮ್ಯಾನೇಜರ್​ ಮಲ್ಲಿಕಾರ್ಜುನಯ್ಯ ಇವರಿಗೆ ಡ್ಯೂಟಿ ನೀಡಿರಲಿಲ್ಲ. ಇದರಿಂದ ನೊಂದ ಹೊಳೆಬಸಪ್ಪ, ವಿಭಾಗದಲ್ಲಿನ ಲಂಚಾವತಾರದ ಬಗ್ಗೆ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್​ನೋಟ್​ ಆಧಾರಿಸಿ ಬಿಎಂಟಿಸಿ ಎಂಡಿ ಜಿ.ಸತ್ಯವತಿ ಅವರು ತನಿಖೆಗೆ ಆದೇಶಿಸಿದ್ದರು. ಅದರಂತೆ, ನಿತಂತರ ತನಿಖೆ ಮಾಡುತ್ತಿರುವ ಜಿ.ರಾಧಿಕಾ ಅವರು ಭ್ರಷ್ಟ ಅಧಿಕಾರಿಗಳಿಗೆ ಬಿಸಿಮುಟ್ಟಿಸುತ್ತಿದ್ದಾರೆ. ಬಿಎಂಟಿಸಿ ಭದ್ರತೆ ಮತ್ತು ಜಾಗೃತದಳದ ಮುಖ್ಯಸ್ಥೆ ಜಿ.ರಾಧಿಕಾ ಅವರಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖಾ ಭಾಗವಾಗಿ ಹತ್ತು ಮಂದಿಯನ್ನು ಅಮಾನತು ಮಾಡಲಾಗಿದೆ.

ಫೋನ್​ಪೇ ಮೂಲಕ 51,630 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಕಾನ್ಸ್​ಟೇಬಲ್ ಕೆ.ರಮೇಶ್ ಅಮಾನತು ಆಗಿದ್ದಾರೆ. ಗೂಗಲ್​ಪೇ ಮೂಲಕ 20,600 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಮೇಲ್ವಿಚಾರಕ ಮೊಹಮ್ಮದ್ ರಫಿ, ಗೂಗಲ್ ಪೇ ಮೂಲಕ 7,28,045 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಕಿರಿಯ ಸಹಾಯಕ ಕೆ.ಎಸ್.ಚಂದನ್, ಫೋನ್​ಪೇ ಮೂಲಕ 46,631 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಕಾನ್ಸ್​ಟೇಬಲ್ ಇಬ್ರಾಹಿಂ ಜಬೀವುಲ್ಲಾ, ​ಗೂಗಲ್​ಪೇ, ಫೋನ್​ಪೇ ಮೂಲಕ 3,15,182 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಚಾಲಕ ಹೆಚ್.ಎಂ.ಗೋವರ್ಧನ್, ಗೂಗಲ್​ಪೇ, ಫೋನ್​ಪೇ ಮೂಲಕ 64,500 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಅಂಕಿ ಅಂಶ ಸಹಾಯಕ ಕೆ.ಶರವಣ ಅವರನ್ನು ಅಮಾನತು ಮಾಡಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ