AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಬೆನ್ನಲ್ಲೆ ಬಿಎಂಟಿಸಿಯ 10 ಭ್ರಷ್ಟ ಅಧಿಕಾರಿಗಳ ಅಮಾನತು, ಇಬ್ಬರು ವರ್ಗಾವಣೆ

ಫೋನ್​ಪೇ, ಗೂಗಲ್ ಪೇ ಮೂಲಕ ಲಂಚ ಪಡೆದ ಪ್ರಕರಣ ಸಂಬಂಧ ಬಿಎಂಟಿಸಿಯ ಹತ್ತು ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಇಬ್ಬರನ್ನು ವರ್ಗಾವಣೆ ಮಾಡಲಾಗಿದೆ.

ಟಿವಿ9 ವರದಿ ಬೆನ್ನಲ್ಲೆ ಬಿಎಂಟಿಸಿಯ 10 ಭ್ರಷ್ಟ ಅಧಿಕಾರಿಗಳ ಅಮಾನತು, ಇಬ್ಬರು ವರ್ಗಾವಣೆ
ಆಪ್ತರ ಮೂಲಕ ಲಂಚ ಪಡೆಯುತ್ತಿದ್ದ ಬಿಎಂಟಿಸಿ ಅಧಿಕಾರಿಗಳು ಸಸ್ಪೆಂಡ್​; ಇಬ್ಬರು ಎತ್ತಂಗಡಿ Image Credit source: ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on: Dec 12, 2022 | 12:09 PM

Share

ಬೆಂಗಳೂರು: ಬಿಎಂಟಿಸಿ (BMTC) ವಿಭಾಗದಲ್ಲಿನ ಲಂಚಾವತಾರದ ಬಗ್ಗೆ ಟಿವಿ9 ವರದಿ ಮಾಡಿದ ಬೆನ್ನಲ್ಲೆ ಹತ್ತು ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಇಬ್ಬರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಫೋನ್​ಪೇ, ಗೂಗಲ್ ಪೇ (Phonepe, Google Pay) ಮೂಲಕ ಲಂಚ (Bribery) ಪಡೆದ ಪ್ರಕರಣ ಸಂಬಂಧ ಬಿಎಂಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ್ ಹಾಗೂ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಗದೀಶ್ ಅವರನ್ನು ಕೆಎಸ್​​ಆರ್​​​ಟಿಸಿ ರಾಮನಗರ ವಿಭಾಗಕ್ಕೆ ವರ್ಗಾವಣೆ ಮಾಡಿದರೆ, ಚಂದ್ರಶೇಖರ್ ಅವರನ್ನು ಕೆಕೆಆರ್​​ಟಿಸಿ ಕಲಬುರಗಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಲಂಚ ಪಡೆದು ಬಸ್ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಡ್ಯೂಟಿ ನೀಡಿದ ಆರೋಪ ಬಿಎಂಟಿಸಿಯ 94 ಅಧಿಕಾರಿಗಳು ವಿರುದ್ಧ ಕೇಳಿಬಂದಿತ್ತು. ಬಿಎಂಟಿಸಿಯಲ್ಲಿ ಡ್ಯೂಟಿ ಬೇಕೆಂದರೆ ಚಾಲಕರು, ನಿರ್ವಾಹಕರು ಲಂಚ ನೀಡಬೇಕಾಗಿತ್ತು. ವಾರಕ್ಕೆ 500 ರೂ., ತಿಂಗಳಿಗೆ 2 ಸಾವಿರ ರೂಪಾಯಿ ಲಂಚ ನೀಡಬೇಕಾಗಿತ್ತು. ಈ ಲಂಚದ ಹಣವನ್ನು ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ ಪಡೆಯುತ್ತಿದ್ದರು. ಬಿಎಂಟಿಸಿ ಅಧಿಕಾರಿಗಳ ಈ ಲಂಚಾವತಾರದ ಬಗ್ಗೆ ಟಿವಿ9ನಲ್ಲಿ ನಿರಂತರ ವರದಿ ಮಾಡಲಾಗಿತ್ತು.

ಇದನ್ನೂ ಓದಿ: Crime News: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಆರ್​ಆರ್​ ನಗರ ಡಿಪೋ ಬಸ್ ಚಾಲಕ ಕಂ ಕಂಡಕ್ಟರ್​ ಹೊಳೆಬಸಪ್ಪ ಲಂಚ ನೀಡಿರಲಿಲ್ಲ. ಲಂಚ ನೀಡದಿದ್ದಕ್ಕೆ ಡಿಪೋ ಮ್ಯಾನೇಜರ್​ ಮಲ್ಲಿಕಾರ್ಜುನಯ್ಯ ಇವರಿಗೆ ಡ್ಯೂಟಿ ನೀಡಿರಲಿಲ್ಲ. ಇದರಿಂದ ನೊಂದ ಹೊಳೆಬಸಪ್ಪ, ವಿಭಾಗದಲ್ಲಿನ ಲಂಚಾವತಾರದ ಬಗ್ಗೆ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್​ನೋಟ್​ ಆಧಾರಿಸಿ ಬಿಎಂಟಿಸಿ ಎಂಡಿ ಜಿ.ಸತ್ಯವತಿ ಅವರು ತನಿಖೆಗೆ ಆದೇಶಿಸಿದ್ದರು. ಅದರಂತೆ, ನಿತಂತರ ತನಿಖೆ ಮಾಡುತ್ತಿರುವ ಜಿ.ರಾಧಿಕಾ ಅವರು ಭ್ರಷ್ಟ ಅಧಿಕಾರಿಗಳಿಗೆ ಬಿಸಿಮುಟ್ಟಿಸುತ್ತಿದ್ದಾರೆ. ಬಿಎಂಟಿಸಿ ಭದ್ರತೆ ಮತ್ತು ಜಾಗೃತದಳದ ಮುಖ್ಯಸ್ಥೆ ಜಿ.ರಾಧಿಕಾ ಅವರಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖಾ ಭಾಗವಾಗಿ ಹತ್ತು ಮಂದಿಯನ್ನು ಅಮಾನತು ಮಾಡಲಾಗಿದೆ.

ಫೋನ್​ಪೇ ಮೂಲಕ 51,630 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಕಾನ್ಸ್​ಟೇಬಲ್ ಕೆ.ರಮೇಶ್ ಅಮಾನತು ಆಗಿದ್ದಾರೆ. ಗೂಗಲ್​ಪೇ ಮೂಲಕ 20,600 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಮೇಲ್ವಿಚಾರಕ ಮೊಹಮ್ಮದ್ ರಫಿ, ಗೂಗಲ್ ಪೇ ಮೂಲಕ 7,28,045 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಕಿರಿಯ ಸಹಾಯಕ ಕೆ.ಎಸ್.ಚಂದನ್, ಫೋನ್​ಪೇ ಮೂಲಕ 46,631 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಕಾನ್ಸ್​ಟೇಬಲ್ ಇಬ್ರಾಹಿಂ ಜಬೀವುಲ್ಲಾ, ​ಗೂಗಲ್​ಪೇ, ಫೋನ್​ಪೇ ಮೂಲಕ 3,15,182 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಚಾಲಕ ಹೆಚ್.ಎಂ.ಗೋವರ್ಧನ್, ಗೂಗಲ್​ಪೇ, ಫೋನ್​ಪೇ ಮೂಲಕ 64,500 ರೂ. ಲಂಚ ಪಡೆದಿದ್ದ ಬಿಎಂಟಿಸಿ ಡಿಪೋ 8ರ ಅಂಕಿ ಅಂಶ ಸಹಾಯಕ ಕೆ.ಶರವಣ ಅವರನ್ನು ಅಮಾನತು ಮಾಡಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು