AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್

ಬೆಂಗಳೂರಿನ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯನ್ನು 2027ರ ಜನಗಣತಿ ಕಾರ್ಯಕ್ಕೆ ನಿಯೋಜಿಸುತ್ತಿರುವುದರಿಂದ ರೋಗಿಗಳಿಗೆ ಚಿಕಿತ್ಸೆ ಸಿಗುವುದು ಕಷ್ಟವಾಗಲಿದೆ. ಲ್ಯಾಬ್ ಟೆಕ್ನಿಶಿಯನ್ಸ್ ಸೇರಿದಂತೆ ತುರ್ತು ಸೇವಾ ಸಿಬ್ಬಂದಿಯನ್ನು ಈ ಕಾರ್ಯಕ್ಕೆ ಬಳಸುವುದರಿಂದ ಆರೋಗ್ಯ ಸೇವೆಗಳ ಮೇಲೆ ನಕಾರಾತ್ಮಕ ಪರಿಣಾಮ ಆಗಲಿದ್ದು, ಗಣತಿಯಿಂದ ಕೈಬಿಡುವಂತೆ ಆರೋಗ್ಯ ಇಲಾಖೆ ನೌಕರರ ಸಂಘ ಮನವಿ ಮಾಡಿದೆ.

ಜನಗಣತಿ ಕಾರ್ಯಕ್ಕೆ ಆಸ್ಪತ್ರೆ ಸಿಬ್ಬಂದಿ ನಿಯೋಜನೆ: ರೋಗಿಗಳಿಗೆ ವೈದ್ಯಕೀಯ ಸೇವೆ ಸಿಗೋದು ಡೌಟ್
ಸಾಂದರ್ಭಿಕ ಚಿತ್ರImage Credit source: TV9 Network
Vinay Kashappanavar
| Edited By: |

Updated on: Apr 07, 2026 | 11:27 AM

Share

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನ (Bangalore) ಸರ್ಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ತಜ್ಞರು ಮತ್ತು ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ 2027ರ ಜನಗಣತಿ ಸಮೀಕ್ಷಾ ಕಾರ್ಯಕ್ಕೆ ಆರೋಗ್ಯ ಇಲಾಖೆಯ ನೌಕರರನ್ನು ಬಳಸಿಕೊಳ್ಳುತ್ತಿರುವುದು ರೋಗಿಗಳಿಗೆ ಭಾರಿ ಸಂಕಷ್ಟ ತಂದೊಡ್ಡಲಿದೆ. ವೈದ್ಯಕೀಯ ಸೇವೆಗಳ ಮೇಲೆ ಪರಿಣಾಮ ಬೀರಲಿದ್ದು, ಆಸ್ಪತ್ರೆ ಸಿಬ್ಬಂದಿಯನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳದಂತೆ ಮನವಿ ಮಾಡಲಾಗಿದೆ.

ಯಾರೆಲ್ಲಾ ಜನಗಣತಿ ಕಾರ್ಯಕ್ಕೆ?

ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ಸಿಬ್ಬಂದಿ, ಲ್ಯಾಬ್ ಟೆಕ್ನಿಶಿಯನ್ಸ್, ಎಕ್ಸರೆ ಟೆಕ್ನಾಲಜಿಸ್ಟ್, ಫಿಸಿಯೋಥೆರಫಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್ ಹಾಗೂ ನೇತ್ರಾಧಿಕಾರಿಗಳನ್ನು ಜನಗಣತಿ ಕೆಲಸಕ್ಕೆ ನಿಯೋಜಿಸಲಾಗಿದೆ. ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯೊಂದರಲ್ಲೇ ಸುಮಾರು 20ಕ್ಕೂ ಹೆಚ್ಚು ನೌಕರರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿರುವುದು ಆಸ್ಪತ್ರೆಯ ದೈನಂದಿನ ಕಾರ್ಯಚಟುವಟಿಕೆಗೆ ಹೊಡೆತ ನೀಡಲಿದೆ.

ರೋಗಿಗಳ ಗೋಳು ಕೇಳುವವರಾರು?

ಸರ್ಕಾರಿ ಆಸ್ಪತ್ರೆಗಳಿಗೆ ಪ್ರತಿನಿತ್ಯ 800 ರಿಂದ 1000ಕ್ಕೂ ಹೆಚ್ಚು ರೋಗಿಗಳು ಒಪಿಡಿ ಸೇವೆಗೆ ಬರುತ್ತಾರೆ. ಎಕ್ಸರೆ ಮತ್ತು ಲ್ಯಾಬ್ ಟೆಸ್ಟ್‌ಗಳಿಗೆ ಈಗಾಗಲೇ ಜನದಟ್ಟಣೆ ಇರುತ್ತದೆ. ಈಗ ಇರುವ ಸಿಬ್ಬಂದಿಯನ್ನೂ ಜನಗಣತಿಗೆ ಕಳುಹಿಸಿದರೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವುದು ಅಸಾಧ್ಯವಾಗಲಿದೆ.

ಇದನ್ನೂ ಓದಿ: ಇಂದಿನಿಂದ ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?

ಆರೋಗ್ಯ ಇಲಾಖೆಯು ತುರ್ತು ಸೇವೆ ನೀಡುವ ವಿಭಾಗವಾಗಿರುವುದರಿಂದ, ಸಾರ್ವಜನಿಕ ಹಿತದೃಷ್ಟಿಯಿಂದ ಆರೋಗ್ಯ ಸಿಬ್ಬಂದಿಯನ್ನು ಜನಗಣತಿ ಕಾರ್ಯದಿಂದ ಕೈಬಿಡಬೇಕು ಎಂದು ಆಸ್ಪತ್ರೆಗಳ ಅಧೀಕ್ಷಕರು ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ