AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೃಷಿ ವಿವಿಗೆ ರಾಜ್ಯಪಾಲರ ದಿಢೀರ್ ಭೇಟಿ, ವಿದ್ಯಾರ್ಥಿಗಳೊಂದಿಗೆ ಕುಳಿತು ಪಾಠ ಕೇಳಿದ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಇಂದು ದಿಢೀರ್ ಭೇಟಿ ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೂರು ಗಂಟೆಗಳ ಕಾಲ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್​ ಹಾಗೂ ಗೋಶಾಲೆಗೂ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರು ಕೃಷಿ ವಿವಿಗೆ ರಾಜ್ಯಪಾಲರ ದಿಢೀರ್ ಭೇಟಿ, ವಿದ್ಯಾರ್ಥಿಗಳೊಂದಿಗೆ ಕುಳಿತು ಪಾಠ ಕೇಳಿದ ಥಾವರ್ ಚಂದ್ ಗೆಹ್ಲೋಟ್
ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗೊಳೊಂದಿಗೆ ಪಾಠ ಕೇಳುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ಎಡ ಚಿತ್ರ) ಮತ್ತು ಗೋಶಾಲೆಯಲ್ಲಿ ಗೋವುಗಳಿಗೆ ಫಲಹಾರ ನೀಡುತ್ತಿರುವ ರಾಜ್ಯಪಾಲರು (ಬಲಚಿತ್ರ)
TV9 Web
| Edited By: Rakesh Nayak Manchi|

Updated on:Jan 23, 2023 | 8:31 PM

Share

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ (Bangalore Agricultural University) ಇಂದು ದಿಢೀರ್ ಭೇಟಿ ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot) ಅವರು ಮೂರು ಗಂಟೆಗಳ ಕಾಲ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್​ಗೂ ಭೇಟಿ ನೀಡಿ ಪರಿಶೀಲಿಸಿದರು. ಗ್ರಂಥಾಲಯಕ್ಕೆ ತೆರಳಿ ವಿವಿಧ ವಿಭಾಗಗಳಲ್ಲಿ ಲಭ್ಯವಿರುವ ಪುಸ್ತಕಗಳನ್ನು ಪರಿಶೀಲಿಸಿದ ಬಳಿಕ ಸ್ಮಾರ್ಟ್​ ಕ್ಲಾಸ್​​ಗೆ ಭೇಟಿಕೊಟ್ಟು ವಿದ್ಯಾರ್ಥಿಗಳೊಂದಿಗೆ ಕುಳಿತುಕೊಂಡು ಮಾತನಾಡಿದರು. ಅಷ್ಟೇ ಅಲ್ಲದೆ ಗೋ ಶಾಲೆಗೆ ಭೇಟಿ ನೀಡಿ ಗೋವುಗಳ ಸಾಕಾಣಿಕೆಯ ವ್ಯವಸ್ಥೆ ಪರಿಶೀಲಿಸಿ ಗೋವುಗಳಿಗೆ ಫಲಹಾರ ನೀಡಿದರು.

ಕೃಷಿ ವಿಶ್ವವಿದ್ಯಾಲಯದ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಭೇಟಿ ನೀಡಿದರು. ವಿವಿಯ ನಾವೀನ್ಯತೆ ಕೇಂದ್ರ, ಗ್ರಂಥಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಜೈವಿಕ ಯಂತ್ರ ಗ್ಯಾಲರಿ ಮತ್ತು ಸಂಶೋಧನೆ ಕೇಂದ್ರ, ಮಣ್ಣುರಹಿತ ವಾಣಿಜ್ಯ ಬೀಜೋತ್ಪಾದನಾ ಘಟಕ, ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರ, ಖುಷ್ಕಿ ಬೇಸಾಯ ಸಂಶೋಧನಾ ಪ್ರಾಯೋಜನೆ, ತೋಟಗಾರಿಕೆಯ ಸಸ್ಯ ಅಂಗಾಂಶ ಕೃಷಿ ಪ್ರಯೋಗಾಲಯ ವಿಭಾಗ, ಕೀಟಗಳ ಪ್ರಯೋಗಾಲಯ ಸೇರಿದಂತೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬಯಲು ಸೀಮೆಯ ಬರದ ನಾಡು ಈಗ ಮಲೆನಾಡು! ಎಲ್ಲಿ ನೋಡಿದರೂ ನೀರು ಹಚ್ಚ ಹಸಿರು, ಇಲ್ಲಿದೆ ನೋಡಿ ಅದರ ಝಲಕ್

ಬಳಿಕ ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ಶಾಲೆಗೆ ಭೇಟಿಕೊಟ್ಟ ರಾಜ್ಯಪಾಲ ಗೆಹ್ಲೋಟ್, ಅಡುಗೆ ಮನೆ ಪರಿಶೀಲನೆ ನಡೆಸಿದರು. ಇದೇ ವೇಳೆ ವಿದ್ಯಾರ್ಥಿನಿಯರಿಗೆ ನೀಡಲಾಗುವ ಆಹಾರ ತಯಾರಿಕೆ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ನಂತರ ಗ್ರಂಥಾಲಯಕ್ಕೆ ತೆರಳಿದ ರಾಜ್ಯಪಾಲರು, ವಿವಿಧ ವಿಭಾಗಗಳಲ್ಲಿ ಲಭ್ಯವಿರುವ ಪುಸ್ತಕಗಳನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು.

ವಿದ್ಯಾರ್ಥಿನಿಯರ ವಸತಿ ಶಾಲೆಯ ಕಾರ್ಯವೈಕರಿ ಹಾಗೂ ಸ್ವಚ್ಛತೆ ಪರಿಶೀಲಿಸಿದ ನಂತರ ರಾಜ್ಯಪಾಲರು ಸ್ಮಾರ್ಟ್ ಕ್ಲಾಸ್ ಕುರಿತು ಪರಿಶೀಲಿಸಲು ತರಗತಿಗೆ ಭೇಟಿ ನೀಡಿದರು. ಇಲ್ಲಿ ವಿದ್ಯಾರ್ಥಿಗಳೊಂದಿಗೆ ತರಗತಿಯಲ್ಲಿ ಕುಳಿತ ರಾಜ್ಯಪಾಲ ಗೆಹ್ಲೋಟ್, ಕೆಲ ಕಾಲ ತರಗತಿಯಲ್ಲೇ ಕಳೆದರು. ತದನಂತರ ಗೋ ಶಾಲೆಗೆ ಭೇಟಿನೀಡಿ ಗೋವು ಸಾಕಾಣಿಕೆಯ ವ್ಯವಸ್ಥೆ ಪರಿಶೀಲಿಸಿ ಗೋವುಗಳಿಗೆ ಫಲಹಾರ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Mon, 23 January 23

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ