AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಣೆಯಾಗಿದ್ದ ಗೋವಿಂದ ರಾಜು ಚಾರ್ಮಾಡಿ ಘಾಟ್ ಬಳಿ ಶವವಾಗಿ ಪತ್ತೆ

ಕೆಲ ದಿನಗಳ ಹಿಂದೆ ಯುವತಿಗೆ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಯುವತಿಯ ಸೋದರ ಮಾವ ಗೋವಿಂದರಾಜುನನ್ನ ಕರೆಯಿಸಿ ಮೆಸೇಜ್ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿ, ಆತನನ್ನ ಹತ್ಯೆ ಮಾಡಲಾಗಿದೆ ಎಂದು ಆತನ ಸಂಬಂಧಿಕರು ಪೊಲೀಸ್​ ಕಂಪ್ಲೇಂಟ್​ ನೀಡಿದ್ದು, ಇದೀಗ ಯುವಕನ ಶವ ಪತ್ತೆಯಾಗಿದೆ.

ಬೆಂಗಳೂರು: ಕಾಣೆಯಾಗಿದ್ದ ಗೋವಿಂದ ರಾಜು ಚಾರ್ಮಾಡಿ ಘಾಟ್ ಬಳಿ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 01, 2023 | 1:43 PM

Share

ಬೆಂಗಳೂರು: ಕೆಲ ದಿನಗಳ ಹಿಂದೆ ಯುವತಿಗೆ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಗೋವಿಂದರಾಜುನನ್ನ ಯುವತಿಯ ಸೋದರ ಮಾವ ಕರೆಯಿಸಿ ಮೆಸೇಜ್ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿ, ಬಳಿಕ ಆತನನ್ನು ಬ್ಯಾಡರಹಳ್ಳಿಯ ತೋಟಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಗೋವಿಂದರಾಜು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಧರ್ಮಸ್ಥಳದ ಚಾರ್ಮಾಡಿ ಘಾಟ್ ಬಳಿ ರಸ್ತೆಯಿಂದ ಸುಮಾರು 400 ಮೀಟರ್​ನಿಂದ ‘500 ಮೀಟರ್ ಆಳದಲ್ಲಿ ಗೋವಿಂದರಾಜು ಶವ ಪತ್ತೆಯಾಗಿದೆ.

ವೃತ್ತಿಯಲ್ಲಿ ಪೇಂಟರ್ ಆಗಿರುವ ಗೋವಿಂದರಾಜು ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯ ಹಿಂದೆ ಬಿದ್ದಿದ್ದನಂತೆ. ಹುಡುಗಿ ಕಾಲೇಜಿಗೆ ಹೊದಾಗ ಗೊವಿಂದರಾಜು ಯುವತಿಗೆ ಕರೆ ಮಾಡಿದ್ದಾನೆ. ಆದರೆ ಕಾಲೇಜಿಗೆ ಹೊಗುವಾಗ ಯುವತಿ ಮನೆಯಲ್ಲಿಯೇ ಮೊಬೈಲ್ ಬಿಟ್ಟು ಹೊಗಿದ್ದಾಳೆ. ನಂತರ ಮೆಸೇಜ್​ ಮಾಡಿದ್ದಾನೆ. ಅದನ್ನ ಆಕೆಯ ಸೋದರ ಮಾವ ನೋಡಿದ್ದು, ತಾನು ಮದುವೆಯಾಗಬೇಕು ಅಂದುಕೊಂಡಿದ್ದ ಹುಡುಗಿಗೆ ಆತ ಕಳುಹಿಸಿದ ಮೆಸೆಜ್ ನೋಡಿ ಕೊಪಗೊಂಡಿದ್ದಾನೆ. ಬಳಿಕ ಯುವಕನನ್ನ ಮಾತಾಡೊ ನೆಪದಲ್ಲಿ ಕರೆಸಿ ಕೊಲೆ ಮಾಡಿದ್ದಾರೆ ಎಂದು ಗೊವಿಂದರಾಜ್ ಸಂಬಂಧಿ ಪ್ರಕಾಶ್ ಎಂಬುವವರು ಹೇಳಿದ್ದಾರೆ.

ನಾಪತ್ತೆಯಾಗಿದ್ದ ಗೊವಿಂದರಾಜ್​ ಸಂಬಂಧಿಕರ ಮಾಹಿತಿ ಮೆರೆಗೆ ಯಶವಂತಪುರ ಪೋಲಿಸರು ಆರೋಪಿ ಅನಿಲ್ ಮತ್ತು ಭರತ್​ನನ್ನು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕಿದ್ದು, ಇಂದು ಯುವಕನ ಶವವನ್ನು ಚಾರ್ಮುಂಡಿಘಾಟ್ ನಲ್ಲಿ ಬಿಸಾಡಿರೊದಾಗಿ ಹೇಳಿದ್ದು, ಮಾಹಿತಿ ಆಧರಿಸಿ ಚಾರ್ಮುಡಿ ಘಾಟ್​ಗೆ ತೆರಳಿದ ಖಾಕಿ ತಂಡ ಮೃತದೇಹವನ್ನ ಹುಡುಕಿದ್ದು, ಪ್ರಕರಣ ಆರೋಪಿ ಅನಿಲ್ ಸೇರಿದಂತೆ ಮೂವರನ್ನ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿಗಳನ್ನು ಠಾಣೆಗೆ ಕರೆ ತರುತ್ತಿದ್ದಂತೆ ಸಂಬಂಧಿಕರು ಮನಸೊ ಇಚ್ಛೆ ಥಳಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:42 pm, Wed, 1 February 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ