AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಕೂದಲು ಜೋಪಾನ: ಬೆಂಗಳೂರಲ್ಲಿ ಅದನ್ನೂ ಬಿಡದೆ ಕದ್ದೊಯ್ದ ಕಳ್ಳರು

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ 27 ಮೂಟೆ ಕೂದಲು ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಚೀನಾ, ಬರ್ಮಾ, ಹಾಂಕಾಂಗ್‌ಗೆ ರಫ್ತು ಮಾಡಲು ಸಂಗ್ರಹಿಸಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೂದಲನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತಲೆಕೂದಲು ಜೋಪಾನ: ಬೆಂಗಳೂರಲ್ಲಿ ಅದನ್ನೂ ಬಿಡದೆ ಕದ್ದೊಯ್ದ ಕಳ್ಳರು
ಕೂದಲು (ಸಾಂದರ್ಭಿಕ ಚಿತ್ರ) ಹಾಗೂ ಕೂದಲು ಕಳ್ಳತನದ ಸಿಸಿಟಿವಿ ದೃಶ್ಯದ ಸ್ಕ್ರೀನ್​​ಗ್ರ್ಯಾಬ್
Follow us
Jagadisha B
| Updated By: Ganapathi Sharma

Updated on:Mar 06, 2025 | 2:53 PM

ಬೆಂಗಳೂರು, ಮಾರ್ಚ್ 6: ನಗದು, ಚಿನ್ನಾಭರಣ ಕಳವಾದ (Theft) ಬಗ್ಗೆ ಆಗಾಗ್ಗೆ ವರದಿಗಳಾಗುತ್ತಿರುತ್ತವೆ. ದೇವಸ್ಥಾನ ಹುಂಡಿಗೂ ಕನ್ನ ಹಾಕುವುದನ್ನು ಕೇಳಿರುತ್ತೇವೆ. ಆದರೆ ಈಗ ಬೆಂಗಳೂರಿನಲ್ಲಿ ವಿಚಿತ್ರ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರೊಂದಿಗೆ, ಬೆಂಗಳೂರಲ್ಲಿ (Bengaluru) ಏನು ಸಿಕ್ಕಿದರೂ ಕಳ್ಳರು ಬಿಡುವುದಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗಿದೆ. ಬೈಕ್ ಆಯ್ತು, ಚಪ್ಪಲಿ ಆಯ್ತು, ದೇವಸ್ಥಾನ ಹುಂಡಿಯೂ ಆಯ್ತು, ಇದೀಗ ಖತರ್ನಾಕ್ ಕಳ್ಳರು ತಲೆಗೂದಲನ್ನೂ ಕದ್ದೊಯ್ದಿದ್ದಾರೆ! ಹೌದು, ಬರೋಬ್ಬರಿ 27 ಮೂಟೆಗ ಕೂದಲು ಕಳವಾಗಿದೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ (Soladevanahalli Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖದೀಮರ ಕುಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಂದಲ್ಲ, ಎರಡಲ್ಲ ಮೂಟೆಗಟ್ಟಲೇ ಕೂದಲನ್ನು ಕಳ್ಳರು ಕದೊಯ್ದಿದ್ದಾರೆ. ಸೋಲದೇವನಹಳ್ಳಿ ಬಳಿಯ ಲಕ್ಷ್ಮೀ ಪುರ ಕ್ರಾಸ್‌ನಲ್ಲಿರುವ ಗೋಡೌನ್‌ನಲ್ಲಿ ಕೂದಲನ್ನು ಸಂಗ್ರಹಿಸಿಡಲಾಗಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಬೆಲೆಬಾಳುವ ಕೂದಲಿನ ಮೂಟೆಗಳನ್ನು ಎರಡು ದಿನಗಳ ಹಿಂದೆ ಕಳ್ಳತನ ಮಾಡಲಾಗಿದೆ.

ಈ ಸಂಬಂದ ಗೋಡೌನ್ ಮಾಲೀಕ ವೆಂಕಟರಮಣ ಎಂಬವರು ದೂರು ನೀಡಿದ್ದಾರೆ. ಆರು ಜನ ಖದೀಮರು ವಾಹನದಲ್ಲಿ ಬಂದು ಕೂದಲು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ
Image
ಬಂಗ್ಲೆಯಂಥ ಮನೆಯಲ್ಲಿ ಹೇರಳ ಚಿನ್ನಾಭರಣ ಮತ್ತು ನಗದು!
Image
ಯುವತಿ ಜತೆ ಲಿವ್ ಇನ್​ನಲ್ಲಿದ್ದ ಯುವಕ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
Image
ವೈಟ್​​ ಆ್ಯಂಡ್​ ಬ್ಲಾಕ್​ ದಂಧೆ ಹೆಸರಿನಲ್ಲಿ ಕೋಟ್ಯಂತರ ರೂ ದರೋಡೆ: 3 ಬಂಧನ
Image
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!

ಚೀನಾ, ಬರ್ಮಾ, ಹಾಂಕಾಂಗ್​ಗೆ ರಫ್ತಾಗುತ್ತಿತ್ತು ಕೂದಲು

ಮಾಲೀಕ ವೆಂಕಟರಮಣ ಅವರು ಚೀನಾ, ಬರ್ಮಾ, ಹಾಂಕಾಂಗ್‌ಗೆ ಕೂದಲು ರಫ್ತು ಮಾಡುವ ಉದ್ಯಮ ಹೊಂದಿದ್ದಾರೆ. ಕಳೆದ ವಾರ ಚೀನಾದ ವ್ಯಕ್ತಿಗಳು ಬಂದು ವಿಗ್ ತಯಾರಿಕೆಗೆ ಕೂದಲು ಕಳುಹಿಸುವಂತೆ ಮಾತುಕತೆ ನಡೆಸಿದ್ದರು. ಅವರಿಗೆ ಕಳುಹಿಸಿಕೊಡುವುದಕ್ಕಾಗಿ ಕೂದಲನ್ನು ಮೂಟೆ ಕಟ್ಟಿ ಇಡಲಾಗಿತ್ತು. ಇನ್ನೇನು ಎರಡು ದಿನಗಳಲ್ಲಿ ಕೂದಲು ರಫ್ತು ಆಗಬೇಕು ಎನ್ನುವಷ್ಟರಲ್ಲಿ ತಲೆಗೂದಲು ಕಳ್ಳರ ಪಾಲಾಗಿದೆ. 27 ಮೂಟೆಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. CCTVದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮನೆ ದರೋಡೆಗೆ ಪೊಲೀಸ್​ನಿಂದಲೇ ಟ್ರೈನಿಂಗ್! ಆರೋಪಿ ಅಂದರ್

ಬೆಂಗಳೂರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ವೈಟ್ ಅಂಡ್ ಬ್ಲಾಕ್ ದಂಧೆ ಮೂಲಕ ಕೋಟ್ಯಂತರ ರೂಪಾಯಿ ರೋಡೆ ಮಾಡಿದ್ದ ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬುಧವಾರವಷ್ಟೇ ಬಂಧಿಸಿದ್ದರು. ಇದೀಗ ಅದರ ಬೆನ್ನಲ್ಲೇ, ಕೂದಲನ್ನೆ ಕಳವು ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮನೆಯ ಹೊರಗಡೆ ಇಟ್ಟಿರುವ ಚಪ್ಪಲಿ ಕಳ್ಳತನ, ದೇಗುಲಗಳ ಹುಂಡಿಯಿಂದ ಕಳವು ಮಾಡುವುದು ಇತ್ಯಾದಿ ಪ್ರಕರಣಗಳು ಕೂಡ ಬೆಂಗಳೂರಿನಲ್ಲಿ ಹೆಚ್ಚಾಗಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:18 pm, Thu, 6 March 25

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ