AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ

ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆ ಬಿಯರ್ ಮಾರಾಟದಲ್ಲಿ ಶೇ 50 ರಷ್ಟು ಭಾರಿ ಏರಿಕೆ ಕಂಡಿದೆ. ಮದ್ಯಪ್ರಿಯರು ಹಾರ್ಡ್ ಡ್ರಿಂಕ್ಸ್ ಬಿಟ್ಟು ಕೋಲ್ಡ್ ಬಿಯರ್ ಮೊರೆ ಹೋಗುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಬಿಯರ್ ಸ್ಟಾಕ್ ಕೊರತೆ ಎದುರಾಗಿದೆ. ನಗರದ ಕೆಲವು ಔಟ್​ಲೆಟ್​​ಗಳಲ್ಲಿ ಪ್ರತಿ ದಿನ ಮಾರಾಟವಾಗುವ ಬಿಯರ್ ಸಂಖ್ಯೆ ಇದೀಗ ದುಪ್ಪಟ್ಟಾಗಿದೆ.

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ
ಸಾಂದರ್ಭಿಕ ಚಿತ್ರ (ಎಐ)Image Credit source: Google Gemini
ಕಿರಣ್​ ಸೂರ್ಯ
| Edited By: |

Updated on: Apr 28, 2026 | 8:13 AM

Share

ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ (Beer Supply Shortage) ಆಗದಿರುವುದು ಮದ್ಯ ಮಾರಾಟಗಾರರ ಆತಂಕಕ್ಕೆ ಕಾರಣವಾಗಿದೆ.

ಬಿಯರ್ ಹವಾ, ಐಎಂಎಲ್ ಡೌನ್

ಬೆಂಗಳೂರಿನಲ್ಲಿ ತಾಪಮಾನವು ಈಗಾಗಲೇ 36 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಜನರು ತಂಪು ಪಾನೀಯಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮದ್ಯದ ವಿಚಾರಕ್ಕೆ ಬಂದರೆ, ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಐಎಂಎಲ್ (IML) ಅಥವಾ ಹಾರ್ಡ್ ಡ್ರಿಂಕ್ಸ್ ವ್ಯಾಪಾರವು ಶೇ 20 ರಷ್ಟು ಕುಸಿತ ಕಂಡಿದೆ. ಇದಕ್ಕೆ ವಿರುದ್ಧವಾಗಿ ಬಿಯರ್ ಮಾರಾಟ ದುಪ್ಪಟ್ಟಾಗಿದೆ. ಈ ಹಿಂದೆ ದಿನಕ್ಕೆ 100 ಬಿಯರ್ ಬಾಟಲಿಗಳು ಮಾರಾಟವಾಗುತ್ತಿದ್ದ ಮಳಿಗೆಗಳಲ್ಲಿ ಈಗ 200ಕ್ಕೂ ಹೆಚ್ಚು ಬಿಯರ್ ಬಾಟಲಿಗಳು ಖಾಲಿಯಾಗುತ್ತಿವೆ.

ಬಿಯರ್ ಪೂರೈಕೆಯಲ್ಲಿ ಸಮಸ್ಯೆ

ಬಿಯರ್ ಗೆ ಭಾರಿ ಡಿಮ್ಯಾಂಡ್ ಸೃಷ್ಟಿಯಾಗಿದ್ದರೂ, ಮದ್ಯದಂಗಡಿಗಳಿಗೆ ಸರಿಯಾದ ಸಮಯಕ್ಕೆ ಸ್ಟಾಕ್ ತಲುಪುತ್ತಿಲ್ಲ ಎಂದು ವ್ಯಾಪಾರಿಗಳು ದೂರಿದ್ದಾರೆ. ‘ಬಿಸಿಲಿನಿಂದಾಗಿ ಜನರು ಹಾಟ್ ಡ್ರಿಂಕ್ಸ್ ಬಿಟ್ಟು ಬಿಯರ್ ಕೇಳುತ್ತಿದ್ದಾರೆ, ಆದರೆ ಸಪ್ಲೈ ಸರಿಯಾಗಿಲ್ಲದಿದ್ದರೆ ವ್ಯಾಪಾರಕ್ಕೆ ತೊಂದರೆಯಾಗುತ್ತದೆ’ ಎಂದು ಮದ್ಯ ಮಾರಾಟಗಾರರಾದ ರಾಮಕೃಷ್ಣ ಅಳಲು ತೋಡಿಕೊಂಡಿದ್ದಾರೆ. ಇತ್ತ ಮದ್ಯಪ್ರಿಯರು ಕೂಡ ‘ಬಿಸಿಲಿನ ತಾಪಕ್ಕೆ ದಿನಕ್ಕೆರಡು ಚಿಲ್ಡ್ ಬಿಯರ್ ಕುಡಿದರಷ್ಟೇ ಸಮಾಧಾನ’ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ!

ಒಟ್ಟಾರೆಯಾಗಿ, ಈ ಬಾರಿಯ ಕಡು ಬೇಸಿಗೆಯು ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕುತ್ತಿದ್ದರೂ, ರಾಜ್ಯ ಸರ್ಕಾರದ ಖಜಾನೆಗೆ ಮಾತ್ರ ಬಿಯರ್ ಮಾರಾಟದ ಮೂಲಕ ಭರ್ಜರಿ ಆದಾಯವನ್ನು ತಂದುಕೊಡುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!