AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಮನೆಯೊಳಗೆ ಬರುತ್ತಿವೆ ವಿಷಕಾರಿ ಹಾವುಗಳು

ಬೆಂಗಳೂರಿನಲ್ಲಿ ಏರುತ್ತಿರುವ ತಾಪಮಾನದಿಂದಾಗಿ ಜನರು ಬಿಸಿಲಿನಿಂದ ಬಳಲುತ್ತಿದ್ದಾರೆ. ಇದೇ ವೇಳೆ, ತಂಪಾದ ಸ್ಥಳಗಳನ್ನು ಹುಡುಕುತ್ತಾ ಹಾವುಗಳು ಮನೆಗಳೊಳಗೆ ನುಗ್ಗುತ್ತಿವೆ. ಉರಗ ತಜ್ಞರ ಪ್ರಕಾರ, ಜನವರಿ-ಫೆಬ್ರುವರಿ ಹಾವುಗಳ ಸಂತಾನೋತ್ಪತ್ತಿ ಕಾಲ. ಹೀಗಾಗಿ ತಂಪಾದ ವಾತಾವರಣ ಅರಿಸಿ ಹಾವುಗಳು ಮನೆಯೊಳಕ್ಕೆ ಬರುತ್ತಿವೆ ಎಂದು ಹೇಳಿದರು. ಹೆಚ್ಚಿನ ಎಚ್ಚರಿಕೆ ಅಗತ್ಯ ಎಂದರು.

ಬಿಸಿಲಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಮನೆಯೊಳಗೆ ಬರುತ್ತಿವೆ ವಿಷಕಾರಿ ಹಾವುಗಳು
ಹಾವು
Kiran Surya
| Edited By: |

Updated on: Feb 21, 2025 | 8:19 AM

Share

ಬೆಂಗಳೂರು, ಫೆಬ್ರವರಿ 21: ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ (Summer) ಆರಂಭಕ್ಕೂ ಮುನ್ನವೇ ಬಿಸಿಲಿಗೆ ಜನರು ಹೈರಾಣಾಗುತ್ತಿದ್ದಾರೆ. ನಗರದಲ್ಲಿ ಜನರು ಬಿಸಿಲಿನ ಹೊಡೆತಕ್ಕೆ ಕಂಗಲಾಗಿದ್ದರೇ, ಇತ್ತ ವಿಷಕಾರಿ ಹಾವುಗಳು (Snakes) ತಣ್ಣಗಿನ ಜಾಗವನ್ನು ಹುಡುಕಿಕೊಂಡು ಮನೆಯೊಳಗೆ ಬರುತ್ತಿವೆ ಎಂದು ಭಯಗೊಂಡಿದ್ದಾರೆ. ಅಡುಗೆ ಮನೆ, ಹಾಲ್, ಬಾತ್ ರೂಮ್, ವಾಟರ್ ಟ್ಯಾಂಕ್ ಸೇರಿದಂತೆ ಎಲ್ಲಾ ಕಡೆ ಹಾವುಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಮನೆಯೊಳಗೆ ಇರಲು ನಿವಾಸಿಗಳು ಭಯ ಬೀಳುತ್ತಿದ್ದಾರೆ.

ಈ ಬಗ್ಗೆ ಉರಗ ತಜ್ಞ ಮೋಹನ್ ಮಾತನಾಡಿ, ಜನವರಿ, ಫೆಬ್ರವರಿ ಹಾವುಗಳು ಮಿಲನವಾಗುವ ಸಮಯ. ಹೀಗಾಗಿ, ತಂಪಾಗಿರುವ ಜಾಗವನ್ನು ಅರಿಸಿಕೊಂಡು ಹಾವುಗಳು ಮನೆಯೊಳಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪೋಷಕರು ನಿಮ್ಮ ಮಕ್ಕಳ ಮೇಲೆ ನಿಗಾ ಇಟ್ಟಿರಿ. ಮನೆಗಳಲ್ಲಿ ಹಾವುಗಳು ಕಾಣಿಸಿಕೊಂಡಾಗ ಯೂಟ್ಯೂಬ್, ಸಾಮಾಜಿಕ ಜಲತಾಣ ನೋಡಿ ಹಾವುಗಳು ಹಿಡಿಯಲು ಹೋಗಬೇಡಿ. ಇದರಿಂದ ಹಾವುಗಳು ಸಾಯಬಹುದು ಇಲ್ಲವೇ, ವಿಷಕಾರಿ ಸರ್ಪಗಳು ಕಚ್ಚಿ ಸಾವು-ನೋವು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ದಯವಿಟ್ಟು ಎಚ್ಚರದಿಂದ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಮನೆಯ ಸಂದಿ ಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿವೆ. ಸಧ್ಯ ಹೆಲ್ಮೆಟ್, ಕಾಂಪೌಂಡ್, ಶೂಸ್, ವಾಟಾರ್ ಟ್ಯಾಂಕರ್, ಫುಟ್ ಪಾಥ್, ಕಾರಿನ ಸಂದಿಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಮನೆಯಿಂದ ಹೊರಗೆ ಹೋಗುವ ಜನರು ಒಮ್ಮೆ ಹುಷಾರಾಗಿ ಎಲ್ಲಾವನ್ನ ಚೆಕ್ ಮಾಡಿ ಮನೆಯಿಂದ ಹೊರಹೋಗುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಹೆಲ್ಮೆಟ್​​​ನೊಳಗೆ ಅಡಗಿ ಕೂತಿದ್ದ ವಿಷಕಾರಿ ಹಾವು

ಒಟ್ಟಾರೆ ಬಿಸಿಲ ಬೇಗೆ ಮನುಷ್ಯರನ್ನು ತತ್ತರಿಸುವಂತೆ ಮಾಡುತ್ತಿದ್ದರೇ, ಇತ್ತ ವಿಷಕಾರಿ ಹಾವುಗಳು ತಣ್ಣಗಿನ ಜಾಗಕ್ಕಾಗಿ ಮನೆಗಳಿಗೆ ನುಗ್ಗುತ್ತಿವೆ. ಹೀಗಾಗಿ ನಿಮ್ಮ ಮಕ್ಕಳನ್ನು ಆಟವಾಡಲು ಕಳುಹಿಸಿ ಹೊರಗೆ ಬಿಡುವ ಮುನ್ನ ನೂರು ಬಾರಿ ಯೋಚಿಸಿ ಇಲ್ಲವಾದಲ್ಲಿ ಸಮಸ್ಯೆ ಕಟ್ಟಿಟ್ಟಬುತ್ತಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ