AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಮನೆಯೊಳಗೆ ಬರುತ್ತಿವೆ ವಿಷಕಾರಿ ಹಾವುಗಳು

ಬೆಂಗಳೂರಿನಲ್ಲಿ ಏರುತ್ತಿರುವ ತಾಪಮಾನದಿಂದಾಗಿ ಜನರು ಬಿಸಿಲಿನಿಂದ ಬಳಲುತ್ತಿದ್ದಾರೆ. ಇದೇ ವೇಳೆ, ತಂಪಾದ ಸ್ಥಳಗಳನ್ನು ಹುಡುಕುತ್ತಾ ಹಾವುಗಳು ಮನೆಗಳೊಳಗೆ ನುಗ್ಗುತ್ತಿವೆ. ಉರಗ ತಜ್ಞರ ಪ್ರಕಾರ, ಜನವರಿ-ಫೆಬ್ರುವರಿ ಹಾವುಗಳ ಸಂತಾನೋತ್ಪತ್ತಿ ಕಾಲ. ಹೀಗಾಗಿ ತಂಪಾದ ವಾತಾವರಣ ಅರಿಸಿ ಹಾವುಗಳು ಮನೆಯೊಳಕ್ಕೆ ಬರುತ್ತಿವೆ ಎಂದು ಹೇಳಿದರು. ಹೆಚ್ಚಿನ ಎಚ್ಚರಿಕೆ ಅಗತ್ಯ ಎಂದರು.

ಬಿಸಿಲಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಮನೆಯೊಳಗೆ ಬರುತ್ತಿವೆ ವಿಷಕಾರಿ ಹಾವುಗಳು
ಹಾವು
Follow us
Kiran Surya
| Updated By: ವಿವೇಕ ಬಿರಾದಾರ

Updated on: Feb 21, 2025 | 8:19 AM

ಬೆಂಗಳೂರು, ಫೆಬ್ರವರಿ 21: ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ (Summer) ಆರಂಭಕ್ಕೂ ಮುನ್ನವೇ ಬಿಸಿಲಿಗೆ ಜನರು ಹೈರಾಣಾಗುತ್ತಿದ್ದಾರೆ. ನಗರದಲ್ಲಿ ಜನರು ಬಿಸಿಲಿನ ಹೊಡೆತಕ್ಕೆ ಕಂಗಲಾಗಿದ್ದರೇ, ಇತ್ತ ವಿಷಕಾರಿ ಹಾವುಗಳು (Snakes) ತಣ್ಣಗಿನ ಜಾಗವನ್ನು ಹುಡುಕಿಕೊಂಡು ಮನೆಯೊಳಗೆ ಬರುತ್ತಿವೆ ಎಂದು ಭಯಗೊಂಡಿದ್ದಾರೆ. ಅಡುಗೆ ಮನೆ, ಹಾಲ್, ಬಾತ್ ರೂಮ್, ವಾಟರ್ ಟ್ಯಾಂಕ್ ಸೇರಿದಂತೆ ಎಲ್ಲಾ ಕಡೆ ಹಾವುಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಮನೆಯೊಳಗೆ ಇರಲು ನಿವಾಸಿಗಳು ಭಯ ಬೀಳುತ್ತಿದ್ದಾರೆ.

ಈ ಬಗ್ಗೆ ಉರಗ ತಜ್ಞ ಮೋಹನ್ ಮಾತನಾಡಿ, ಜನವರಿ, ಫೆಬ್ರವರಿ ಹಾವುಗಳು ಮಿಲನವಾಗುವ ಸಮಯ. ಹೀಗಾಗಿ, ತಂಪಾಗಿರುವ ಜಾಗವನ್ನು ಅರಿಸಿಕೊಂಡು ಹಾವುಗಳು ಮನೆಯೊಳಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪೋಷಕರು ನಿಮ್ಮ ಮಕ್ಕಳ ಮೇಲೆ ನಿಗಾ ಇಟ್ಟಿರಿ. ಮನೆಗಳಲ್ಲಿ ಹಾವುಗಳು ಕಾಣಿಸಿಕೊಂಡಾಗ ಯೂಟ್ಯೂಬ್, ಸಾಮಾಜಿಕ ಜಲತಾಣ ನೋಡಿ ಹಾವುಗಳು ಹಿಡಿಯಲು ಹೋಗಬೇಡಿ. ಇದರಿಂದ ಹಾವುಗಳು ಸಾಯಬಹುದು ಇಲ್ಲವೇ, ವಿಷಕಾರಿ ಸರ್ಪಗಳು ಕಚ್ಚಿ ಸಾವು-ನೋವು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ದಯವಿಟ್ಟು ಎಚ್ಚರದಿಂದ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಮನೆಯ ಸಂದಿ ಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿವೆ. ಸಧ್ಯ ಹೆಲ್ಮೆಟ್, ಕಾಂಪೌಂಡ್, ಶೂಸ್, ವಾಟಾರ್ ಟ್ಯಾಂಕರ್, ಫುಟ್ ಪಾಥ್, ಕಾರಿನ ಸಂದಿಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಮನೆಯಿಂದ ಹೊರಗೆ ಹೋಗುವ ಜನರು ಒಮ್ಮೆ ಹುಷಾರಾಗಿ ಎಲ್ಲಾವನ್ನ ಚೆಕ್ ಮಾಡಿ ಮನೆಯಿಂದ ಹೊರಹೋಗುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಹೆಲ್ಮೆಟ್​​​ನೊಳಗೆ ಅಡಗಿ ಕೂತಿದ್ದ ವಿಷಕಾರಿ ಹಾವು

ಒಟ್ಟಾರೆ ಬಿಸಿಲ ಬೇಗೆ ಮನುಷ್ಯರನ್ನು ತತ್ತರಿಸುವಂತೆ ಮಾಡುತ್ತಿದ್ದರೇ, ಇತ್ತ ವಿಷಕಾರಿ ಹಾವುಗಳು ತಣ್ಣಗಿನ ಜಾಗಕ್ಕಾಗಿ ಮನೆಗಳಿಗೆ ನುಗ್ಗುತ್ತಿವೆ. ಹೀಗಾಗಿ ನಿಮ್ಮ ಮಕ್ಕಳನ್ನು ಆಟವಾಡಲು ಕಳುಹಿಸಿ ಹೊರಗೆ ಬಿಡುವ ಮುನ್ನ ನೂರು ಬಾರಿ ಯೋಚಿಸಿ ಇಲ್ಲವಾದಲ್ಲಿ ಸಮಸ್ಯೆ ಕಟ್ಟಿಟ್ಟಬುತ್ತಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ