AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಂಡ ಕಂಡಲ್ಲಿ ಕಸ ಎಸೆದರೆ ಹುಷಾರ್, ಬೀಳಲಿದೆ ಭಾರಿ ದಂಡ: ಕಠಿಣ ಕ್ರಮಕ್ಕೆ ಜಿಬಿಎ ಸಿದ್ಧತೆ

ಬೆಂಗಳೂರಿನ ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹೊರಟಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಇದೀಗ ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಸಿದ್ಧತೆ ಮಾಡಿದೆ. ಆ ಮೂಲಕ ರಾಜಧಾನಿಯ ಬ್ಲಾಕ್ ಸ್ಪಾಟ್​ಗಳ ನಿಯಂತ್ರಣಕ್ಕೆ ತಯಾರಾಗಿದೆ. ಏಕಬಳಕೆಯ ಪ್ಲಾಸ್ಟಿಕ್ ಬಳಕೆಗೂ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಂಡಿರುವ ಜಿಬಿಎ ಇದುವರೆಗೆ ಲಕ್ಷ ಲಕ್ಷ ರೂ. ದಂಡ ವಸೂಲಿ ಮಾಡಿದೆ.

ಬೆಂಗಳೂರಿನಲ್ಲಿ ಕಂಡ ಕಂಡಲ್ಲಿ ಕಸ ಎಸೆದರೆ ಹುಷಾರ್, ಬೀಳಲಿದೆ ಭಾರಿ ದಂಡ: ಕಠಿಣ ಕ್ರಮಕ್ಕೆ ಜಿಬಿಎ ಸಿದ್ಧತೆ
ಸಾಂದರ್ಭಿಕ ಚಿತ್ರ
ಶಾಂತಮೂರ್ತಿ
| Updated By: Ganapathi Sharma|

Updated on: Sep 13, 2025 | 11:28 AM

Share

ಬೆಂಗಳೂರು, ಸೆಪ್ಟೆಂಬರ್ 13: ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ತೀರ್ಮಾನಿಸಿದೆ. ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಬೇಕು ಎಂಬ ಉದ್ದೇಶದಿಂದ ಕಠಿಣ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಿರುವ ಮಾರ್ಷಲ್​ಗಳ, ಪದೇ ಪದೇ ಅದೇ ತಪ್ಪು ಮಾಡಿದರೆ 2 ಸಾವಿರ ರೂಪಾಯಿ ತನಕ ದಂಡ ವಸೂಲಿ ಮಾಡಲಿದ್ದಾರೆ. ಪ್ಲಾಸ್ಟಿಕ್ ನಿಷೇಧ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆ ಮಾಡುವವರಿಂದ ಬರೋಬ್ಬರಿ 38 ಲಕ್ಷ ರೂಪಾಯಿ ದಂಡ ಸಂಗ್ರಹಿಸಿದೆ.

ಬೆಂಗಳೂರಿನಲ್ಲಿ ಉತ್ಪತ್ತಿಯಾಗುವ ಕಸದ ವಿಲೇವಾರಿಗೆ ಕಣ್ಣೂರು ಲ್ಯಾಂಡ್ ಫಿಲ್ಲಿಂಗ್ ಬಳಕೆ ಮಾಡುತ್ತಿರುವ ಜಿಬಿಎ, ಇದೀಗ ಬೀದಿ ಬೀದಿಗಳಲ್ಲಿ ಕಸ ವಿಂಗಡನೆಯಿಂದ ಆಗುತ್ತಿದ್ದ ಸಮಸ್ಯೆಗೂ ಪರಿಹಾರ ಕಂಡುಹಿಡಿಯಲು ಚಿಂತನೆ ನಡೆಸಿದೆ. ಸದ್ಯ ಬೆಂಗಳೂರಿನ 26 ಕಡೆಗಳಲ್ಲಿ ಟ್ರಾನ್ಸ್ ಫಾರ್ಮಮೇಷನ್ ಸೆಂಟರ್ ನಿರ್ಮಾಣಕ್ಕೆ ಟೆಂಡರ್ ಕರೆಯಲು ಮುಂದಾಗಿರುವ ಜಿಬಿಎ, ಸಾರ್ವಜನಿಕ ಸ್ಥಳಗಳಲ್ಲಿ ಕಸದಿಂದ ಆಗುತ್ತಿರುವ ಸಮಸ್ಯೆಗಳನ್ನು ಪತ್ತೆಹಚ್ಚಲು ಹೊರಟಿದೆ. ಇತ್ತ ರಾಜಧಾನಿಯ ಕಸದ ಸಮಸ್ಯೆ ಬಗ್ಗೆ ಪದೇ ಪದೇ ದೂರು ಬರುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಜಿಬಿಎ, ಇದೀಗ ತ್ಯಾಜ್ಯ ವಿಲೇವಾರಿಯಲ್ಲಿ ಸುಧಾರಣೆ ತರಲು ತಯಾರಿ ನಡೆಸಿದೆ.

ಇದನ್ನೂ ಓದಿ: ಕೈಗೆ ಬಂದ ತುತ್ತು ಬಾಯಿಗಿಲ್ಲ? ಜಿಎಸ್​ಟಿ ದರ ಇಳಿಕೆ ಬೆನ್ನಲ್ಲೇ ವಾಣಿಜ್ಯ ಬಳಕೆ ವಿದ್ಯುತ್ ದರ ಹೆಚ್ಚಳಕ್ಕೆ ಮುಂದಾದ ಕರ್ನಾಟಕ

ಸದ್ಯ ಬ್ರ್ಯಾಂಡ್ ಬೆಂಗಳೂರಿನ ಕಸದ ಸಮಸ್ಯೆ ಮುಗಿಯದ ಕತೆಯಾಗಿದ್ದು, ತ್ಯಾಜ್ಯ ವಿಲೇವಾರಿಗೆ ಹೊಸ ಹೊಸ ಪ್ರಯೋಗ ಮಾಡಲು ಜಿಬಿಎ ಮುಂದಾಗಿದೆ. ಕಸ ಸಂಗ್ರಹಣಾ ಆಟೋದ ಸಮಯ ಬದಲಾವಣೆ ಮಾಡುವ ಮೂಲಕ ಸಮರ್ಪಕವಾಗಿ ಕಸ ಸಂಗ್ರಹ ಮಾಡಲು ಈಗಾಗಲೇ ಕ್ರಮ ಕೈಗೊಂಡಿದೆ. ಸದ್ಯ ಎಲ್ಲೆಂದರಲ್ಲಿ ಕಸ ಎಸೆಯುವ ಸಮಸ್ಯೆ ಬಗೆಹರಿಸಲು ದಂಡ ವಸೂಲಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ