ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರ ಸಮಯದಲ್ಲಿ ಬದಲಾವಣೆ 

ಬೆಂಗಳೂರು ಮಹಾನಗರದ ಒಳಗೆ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು ಹಲವು ಹೊಸ ಹೊಸ ಉಪಕ್ರಮಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ ಬೆಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಭಾರಿ ವಾಹನ ಸಂಚಾರ ಸಮಯದಲ್ಲಿ ಕೆಲವು ಮಾರ್ಪಾಟು ಮಾಡಿದ್ದಾರೆ.

ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರ ಸಮಯದಲ್ಲಿ ಬದಲಾವಣೆ 
ಸಾಂದರ್ಭಿಕ ಚಿತ್ರ
Follow us
|

Updated on:Aug 06, 2024 | 8:13 AM

ಬೆಂಗಳೂರು, ಆಗಸ್ಟ್​ 04: ನಗರದಲ್ಲಿ ಸಂಚಾರ ದಟ್ಟಣೆಯನ್ನು (Bengaluru Traffic) ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರಿಗೆ, ಪಾದಾಚಾರಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸುತ್ತಿದ್ದಾರೆ. ಜೊತೆಗೆ ಹೊಸ ಹೊಸ ಉಪಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಇದೀಗ ನಗರದ ಒಳಗೆ ಭಾರಿ ಸರಕು ವಾಹನ (Heavy goods vehicle) ಸಂಚಾರ ಸಮಯದಲ್ಲಿ ಕೊಂಚ ಬದಲಾವಣೆ ಮಾಡಿದ್ದಾರೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಹೊರಡಿಸಿರುವ ಅಧಿಕೃತ ಹೇಳಿಕೆಯ ಪ್ರಕಾರ, ಭಾರಿ ಸರಕು ವಾಹನಗಳನ್ನು ವಾರದ ಎಲ್ಲ ದಿನಗಳಲ್ಲಿ ನಿರ್ದಿಷ್ಟ ಸಮಯದಲ್ಲಿ ನಿರ್ಬಂಧಿಸಲಾಗಿದೆ. ನಗರದಲ್ಲಿ ಸುಮಗಮ ಸಂಚಾರಕ್ಕೆ ನಿರ್ಬಂಧ ಅಗತ್ಯ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ನಗರ ಪ್ರವೇಶಕ್ಕೆ ಸಮಯ

ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಮಾಡುವ ಉದ್ದೇಶದೊಂದಿಗೆ ಭಾರಿ ವಾಹನಗಳಿಗೆ ನಗರ ಪ್ರವೇಶಕ್ಕೆ ಸಮಯ ನಿರ್ಬಂಧ ಹೇರಿದ ಕುರಿತು ಸಂಚಾರ ವಿಭಾಗದ ಪೊಲೀಸ್​ ಅಧಿಕಾರಿ ವಿಡಿಯೋ ಸಂದೇಶ ರವಾನಿಸಿದ್ದಾರೆ. “ಈ ಹೊಸ ನಿಯಮ ಶನಿವಾರಕ್ಕೆ ಮಾತ್ರ ಅನ್ವಯಿಸುವಂತೆ ಮಾತ್ರ ಜಾರಿ ಮಾಡಲಾಗಿದೆ. ಈ ನಿಯಮ ಆಗಸ್ಟ್​​ 3 ಶನಿವಾರದಿಂದಲೇ ಆರಂಭವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನೂ 10 ದಿನ ಸಂಚಾರ ವ್ಯತ್ಯಯ

ಬಿಎಂಆರ್​ಸಿಎಲ್​ ಮತ್ತು ಬೆಸ್ಕಾಂ ಕಾಮಗಾರಿಗಖಯ ನಡೆಯುತ್ತಿರುವುದರಿಂದ ಬೆಂಗಳೂರಿನ ಹೊರವರ್ತುವಲ ರಸ್ತೆಯಲ್ಲಿ ಇನ್ನೂ 10 ದಿನ ಸಂಚಾರ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:43 am, Sun, 4 August 24

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ