AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರ ಸಮಯದಲ್ಲಿ ಬದಲಾವಣೆ 

ಬೆಂಗಳೂರು ಮಹಾನಗರದ ಒಳಗೆ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು ಹಲವು ಹೊಸ ಹೊಸ ಉಪಕ್ರಮಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ ಬೆಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಭಾರಿ ವಾಹನ ಸಂಚಾರ ಸಮಯದಲ್ಲಿ ಕೆಲವು ಮಾರ್ಪಾಟು ಮಾಡಿದ್ದಾರೆ.

ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರ ಸಮಯದಲ್ಲಿ ಬದಲಾವಣೆ 
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 06, 2024 | 8:13 AM

Share

ಬೆಂಗಳೂರು, ಆಗಸ್ಟ್​ 04: ನಗರದಲ್ಲಿ ಸಂಚಾರ ದಟ್ಟಣೆಯನ್ನು (Bengaluru Traffic) ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು (Bengaluru Traffic Police) ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ವಾಹನ ಸವಾರರಿಗೆ, ಪಾದಾಚಾರಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸುತ್ತಿದ್ದಾರೆ. ಜೊತೆಗೆ ಹೊಸ ಹೊಸ ಉಪಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಇದೀಗ ನಗರದ ಒಳಗೆ ಭಾರಿ ಸರಕು ವಾಹನ (Heavy goods vehicle) ಸಂಚಾರ ಸಮಯದಲ್ಲಿ ಕೊಂಚ ಬದಲಾವಣೆ ಮಾಡಿದ್ದಾರೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಹೊರಡಿಸಿರುವ ಅಧಿಕೃತ ಹೇಳಿಕೆಯ ಪ್ರಕಾರ, ಭಾರಿ ಸರಕು ವಾಹನಗಳನ್ನು ವಾರದ ಎಲ್ಲ ದಿನಗಳಲ್ಲಿ ನಿರ್ದಿಷ್ಟ ಸಮಯದಲ್ಲಿ ನಿರ್ಬಂಧಿಸಲಾಗಿದೆ. ನಗರದಲ್ಲಿ ಸುಮಗಮ ಸಂಚಾರಕ್ಕೆ ನಿರ್ಬಂಧ ಅಗತ್ಯ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ನಗರ ಪ್ರವೇಶಕ್ಕೆ ಸಮಯ

ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ಮಹಾನಗರದ ಒಳಗಿನ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಆದರೆ, ಎಲ್ಲ ಶನಿವಾರಗಳಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ. ಇನ್ನುಳಿದಂತೆ ವಾರದ ಆರು ದಿನಗಳಲ್ಲಿ ಮೊದಲಿನಂತೆಯೇ ಮುಂದುವರೆಯಲಿದೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಮಾಡುವ ಉದ್ದೇಶದೊಂದಿಗೆ ಭಾರಿ ವಾಹನಗಳಿಗೆ ನಗರ ಪ್ರವೇಶಕ್ಕೆ ಸಮಯ ನಿರ್ಬಂಧ ಹೇರಿದ ಕುರಿತು ಸಂಚಾರ ವಿಭಾಗದ ಪೊಲೀಸ್​ ಅಧಿಕಾರಿ ವಿಡಿಯೋ ಸಂದೇಶ ರವಾನಿಸಿದ್ದಾರೆ. “ಈ ಹೊಸ ನಿಯಮ ಶನಿವಾರಕ್ಕೆ ಮಾತ್ರ ಅನ್ವಯಿಸುವಂತೆ ಮಾತ್ರ ಜಾರಿ ಮಾಡಲಾಗಿದೆ. ಈ ನಿಯಮ ಆಗಸ್ಟ್​​ 3 ಶನಿವಾರದಿಂದಲೇ ಆರಂಭವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನೂ 10 ದಿನ ಸಂಚಾರ ವ್ಯತ್ಯಯ

ಬಿಎಂಆರ್​ಸಿಎಲ್​ ಮತ್ತು ಬೆಸ್ಕಾಂ ಕಾಮಗಾರಿಗಖಯ ನಡೆಯುತ್ತಿರುವುದರಿಂದ ಬೆಂಗಳೂರಿನ ಹೊರವರ್ತುವಲ ರಸ್ತೆಯಲ್ಲಿ ಇನ್ನೂ 10 ದಿನ ಸಂಚಾರ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:43 am, Sun, 4 August 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?