AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್ 

ಬೆಂಗಳೂರಿನ ಇಂದಿರಾನಗರ ನಿವಾಸಿಯ ಓರ್ವ ಮಹಿಳೆ ತಮ್ಮ ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ಹಾಕಿದ್ದಕ್ಕೆ ಹೈಕೋರ್ಟ್ ಅವರಿಗೆ 2 ಲಕ್ಷ ದಂಡ ವಿಧಿಸಿದೆ. ಅಷ್ಟೇ ಅಲ್ಲದೆ ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು: ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್ 
ಹೈಕೋರ್ಟ್, ಮಗ ಕೃಪಲಾನಿ
ಗಂಗಾಧರ​ ಬ. ಸಾಬೋಜಿ
|

Updated on: Sep 07, 2025 | 10:39 AM

Share

ಬೆಂಗಳೂರು, ಸೆಪ್ಟೆಂಬರ್ 07: ಮಗ ಕಾಣೆಯಾಗಿದ್ದಾನೆ (Missing) ಎಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ ಹೈಕೋರ್ಟ್ (High Court) 2 ಲಕ್ಷ ರೂ. ದಂಡ ವಿಧಿಸಿದೆ. ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಮೇಲಿನ ಕೋಪಕ್ಕೆ ಬೆಂಗಳೂರಿನ ಇಂದಿರಾನಗರ ನಿವಾಸಿ ತಾಯಿ ಮಹೇಶ್ವರಿ ಎಂಬುವವರು ಮಗ ಕೃಪಲಾನಿ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ಹಾಕಿದ್ದರು.

ನಡೆದದ್ದೇನು?

ಪಕ್ಕದ ಮನೆಯವರು ರಾತ್ರಿ ಗಲಾಟೆ ಮಾಡುತ್ತಾರೆ, ಗಾಂಜಾ ಮಾರುತ್ತಾರೆಂದು ಕೃಪಲಾನಿ ದೂರು ನೀಡಿದ್ದ. ಈ ಬಗ್ಗೆ ಎನ್​​​ಸಿಆರ್ ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು ತನಿಖೆ ನಡೆಸಿದಾಗ ಸುಳ್ಳು ಕೇಸ್ ಎಂದು ಗೊತ್ತಾಗಿತ್ತು.

ಇದನ್ನೂ ಓದಿ: ಮೆಟ್ರೋ ಎಲಿವೇಟೆಡ್ ಕಾರಿಡಾರ್​​ ಗೆ ಒಪ್ಪಿಗೆ: 37 KM ಉದ್ದದ ಡಬಲ್ ಡೆಕ್ಕರ್, ಏನಿದು ಪ್ಲಾನ್? ಎಲ್ಲಿಂದ ಎಲ್ಲಿಗೆ?

ನಂತರ ಕೃಪಲಾನಿ ಇನ್ಸ್​ಪೆಕ್ಟರ್​ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಕೃಪಲಾನಿ ದೂರು ನೀಡಿದ್ದ. ಅಲ್ಲದೇ ಇನ್ಸ್​ಪೆಕ್ಟರ್ ಮೇಲಿನ ಸಿಟ್ಟಿಗೆ ತಾಯಿ ಮಹೇಶ್ವರಿಯಿಂದ ನನ್ನ ಮಗ ಕಾಣೆಯಾಗಿದ್ದಾನೆಂದು ಹೈಕೋರ್ಟ್​ಗೆ ಹೆಬಿಯಸ್ ಕಾರ್ಪಸ್ ಹಾಕಿಸಿದ್ದ‌. ಪೊಲೀಸ್ ಠಾಣೆಗೆ ಹೋದವನು ವಾಪಸ್ ಬಂದಿಲ್ಲ ಎಂದು ತಾಯಿ ದೂರಿದ್ದರು.

ಇತ್ತ ಮಗ ಕೃಪಲಾನಿ ದೂರು ನೀಡಿ ಚೆನ್ನೈನ ಮ್ಯಾರಿಯೆಟ್ ಹೋಟೆಲ್​ನಲ್ಲಿದ್ದ. ಸಿಡಿಆರ್ ತೆಗೆಸಿದ ಪೊಲೀಸರಿಗೆ ತಾಯಿ ಜೊತೆ ಮಗ ಸಂಪರ್ಕದಲ್ಲಿರೋದು ಪತ್ತೆ ಆಗಿತ್ತು. ಬಳಿಕ ಪೊಲೀಸರು ಚೆನ್ನೈನಿಂದ ಕೃಪಲಾನಿ ಕರೆತಂದು ಕೋರ್ಟ್​ ಮುಂದೆ ಹಾಜರುಪಡಿಸಿದ್ದರು. ಇನ್ಸ್​ಪೆಕ್ಟರ್​ ಸಿಲುಕಿಸಲು ಸುಳ್ಳು ಕೇಸ್​ ಹಾಕಿಸಿದ್ದ ಬಗ್ಗೆ ಪೊಲೀಸರು ದಾಖಲೆ ಸಲ್ಲಿಸಿದ್ದರು.

ಇದನ್ನೂ ಓದಿ: ಕಸ ವಿಲೇವಾರಿ ಮರು ಟೆಂಡರ್​​ಗೆ ಹೈಕೋರ್ಟ್ ತಡೆಯಾಜ್ಞೆ, ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್

ಹೀಗಾಗಿ ದೂರು ನೀಡಿದ್ದ ಮಹೇಶ್ವರಿಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. 2 ಲಕ್ಷ ರೂ ಪೈಕಿ 1 ಲಕ್ಷ ರೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಹಾಗೂ 1 ಲಕ್ಷ ರೂ ಪೊಲೀಸ್ ಕಲ್ಯಾಣ ನಿಧಿಗೆ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ವರದಿ: ಪ್ರದೀಪ್​ ಚಿಕ್ಕಾಟೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​